Home / ಲೇಖನ / ವಿಜ್ಞಾನ / ಸ್ಮಾರ್ಟ್ ಫೋನ್‌ಗಳು

ಸ್ಮಾರ್ಟ್ ಫೋನ್‌ಗಳು

mobile-616012_640ಈ ಸ್ಮಾರ್ಟ್ ಫೋನುಗಳು ಪರ್ಸನಲ್ ಆರ್ಗನ್ಶೆಜರ್ ಮತ್ತು ಸೆಲ್ಯೂಲರ್ ಫೋನ್‌ಗಳ ಸಮ್ಮಿಶ್ರಣವಾಗಿದೆ. ನಿಸ್ತಂತು ಫೋನು ಮತ್ತು ಎಲೆಕ್ಟ್ರಿಕಲ್ ಆರ್ಗನೈಜರ್ ಎರಡನ್ನು ಹೊಂದಿರುವವರಿಗೆ ಇದು ಅತ್ಯಂತ ಸಹಕಾರಿಯಾಗಬಲ್ಲ ಉಪಕರಣವಾಗಿದೆ. ಕೀಬೋರ್ಡ್ ಮತ್ತು ಒಳಗಡೆಗೆ ಸ್ಕ್ರೀನ್ ಹೊಂದಿರುವ ಇದು ಸಂಪರ್ಕ ಮತ್ತು ಸಂಘಟನೆ ಎರಡನ್ನು ಒಳಗೊಂಡ ಆಧುನಿಕ ತಂತ್ರಜ್ಞಾನದ ಆವಿಷ್ಕಾರವಾಗಿದೆ. ಅಮೇರಿಕಾ ಸೇರಿದಂತೆ ಯೂರೋಪಿನ ಹಲವಾರು ರಾಷ್ಟ್ರಗಳ ಗಮನ ಸೆಳೆಯಲು ವಿಫಲವಾದರೂ ಇದರ ಕಲ್ಪನೆ ಮಾತ್ರ ಅದ್ಭುತಪಾದದ್ದು ಈಗಾಗಲೇ ಸೆಲ್ಯೂಲರ್ ಫೋನ್ ವಿಶ್ವವಿಖ್ಯಾತಿಗಳಿಸಿರುವ ಮೋಟರೋಲಾ ಮತ್ತು ಕ್ವಾಲ್‌ಕಾಮ್ ಎರಡೂ ಕಂಪನಿಗಳು ಈ ದಿಸೆಯಲ್ಲಿ ಸ್ಪರ್ಧಾತ್ಮಕವಾಗಿ ತಯಾರಿಸುತ್ತ ಮಾರುಕಟ್ಟೆಗೆ ಬಿಡುಗಡೆಗೆ ಸೆಣಸುತ್ತಲಿದೆ.

ಈ ದಿನಗಳಲ್ಲಿ ಉಪಯೋಗಿಸುತ್ತಿರುವ ಸೆಲ್‌ಫೋನ್‌ಗಳಿಗಿಂತ ಎರಡುಪಟ್ಟು ಭಾರವಾದ ಈ ಸ್ಮಾರ್ಟ್ ಫೋನ್ ಬಹುಮುಖ ಸೇವೆಯನ್ನು ನೀಡುತ್ತದೆ. ಇದರಲ್ಲಿ L.C.Dಸ್ಕ್ರೀನ್ ಮತ್ತು ಜನಪ್ರಿಯ ಚಿತ್ರಗಳನ್ನು ಹೊಂದಿದೆ. ೩ ಕಾಮನ್‌ನ ಫಾಮ್ ಉಪಕರಣವನ್ನು ಉಪಯೋಗಿಸಿದವರಿಗೆ ಇದು ಸುಪರಿಚಿತ. ಅಂದರೆ ಪಿಡಿಕ್ಯು ಡಿಜಿಟಲ್ ದೃಶ್ಯಗಳನ್ನು ಒಳಗೊಂಡ ನಿಸ್ತಂತು (ವೈರ್‌ಲೆಸ್) ಫೋನ್ ಮತ್ತು ಫಾರ್ಮ್ ಆರ್ಗನೈಜರ್ ಹೊಂದಿದೆ.

ಸಿ.ಡಿ.ಎಂ.ಎ. ಪ್ರೊಟೊಕಾಲ್, ಡಿಜಿಟಲ್‌ಫೋನ್ ತರಹವೇ ಪಿಡಿಕ್ಯೂ ಸಹ ಅತ್ಯಾಧುನಿಕ ಸೌಲಭ್ಯವನ್ನು ಹೊಂದಿದೆ. ‘ವಾಯ್ಸ್ ಮೇಲ್’ ಕರೆಮಾಡುವವರ ಪರಿಚಯ, ಚಿಕ್ಕದಾದ ಸಂದೇಶ ಸೇವೆ. ಹೀಗೆ ದೂರವಾಣಿ ಸಂಬಂಧಿತ ಎಲ್ಲ ಸೇವೆಗಳು ಡಯಲ್ ಪ್ಯಾಡ್‌ಮೂಲಕ ನಡೆಯುತ್ತವೆ. ಮುಟ್ಟಿದ ತಕ್ಷಣ ತೆರೆದುಕೊಳ್ಳು ಕೀಪ್ಯಾಡ್ ಸ್ಕ್ರೀನನ್ನು ಕ್ರಿಯಾಶೀಲಗೊಳಿಸುತ್ತದೆ. ನಿಮಗೆ ಅಗತ್ಯವಾದ ಮಾಹಿತಿಗಳನ್ನು ಒದಗಿಸುತ್ತದೆ. ಈ ಫೋನ್ ಬಳಕೆಯಿಂದ ಗಮನಾರ್ಹ ಉಳಿತಾಯ ಮಾಡಬಹುದಲ್ಲದೇ ತಕ್ಷಣದಲ್ಲೇ ನಿಮ್ಮ ಅಂದಿನ ಕಾರ್ಯಕ್ರಮ ವಿವರ, ವಿಳಾಸಗಳು, ಪ್ರಮುಖ ವ್ಯಕ್ತಿಗಳ ದೂರವಾಣಿ ಸಂಖ್ಯೆಗಳನ್ನು ಒದಗಿಸುವುದರ ಮೂಲಕ ಉಪಕಾರಿಯಾಗಿದೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...