Home / ಲೇಖನ / ವಿಜ್ಞಾನ / ಕೇಶ ಉದುರಿದಾಗ ಚಿಗುರುವಂತೆ ಮಾಡುವ ತೈಲ

ಕೇಶ ಉದುರಿದಾಗ ಚಿಗುರುವಂತೆ ಮಾಡುವ ತೈಲ

ಬೊಕ್ಕ ತಲೆಯ ಜನರು ತಮ್ಮತಲೆಯ ಗತವೈಭವವನ್ನು ಮೆಲಕು ಹಾಕುತ್ತ ಏನೇನೋ ಚಿಕಿತ್ಸ ಮಾಡಿಸಿ ಮತ್ತೆ ಬೋಳಾಗುವ ಪರಿಯನ್ನು ಕಂಡು ವ್ಯಥೆಪಟ್ಟುಕೊಳ್ಳುತ್ತಲೇ ಇರುತ್ತಾರೆ. ಇಂದು ವಿಜ್ಞಾನ ಯುಗ. ತಂತ್ರಜ್ಞಾನದಿಂದ ಏನೆಲ್ಲವನ್ನು ಕಂಡು ಹಿಡಿದರೂ ಈ ಬೊಕ್ಕತಲೆಯ ಚಿಕಿತ್ಸೆಯನ್ನು ಮಾಡಿ ಪುನಃಕೂದಲು ಸಮೃದ್ಧಗೊಳ್ಳುವಂತೆ ಮಾಡಲು ಇನ್ನೂ ಪ್ರಯೋಗಗಳು ಆಗಿಲ್ಲ. ೫೦ ವರ್ಷದೊಳಗಿನ ಸ್ತ್ರೀ ಪುರುಷರಿಗೆ ಬೊಕ್ಕತಲೆಯಾದರೆ ಅಂಥವಹರಿಗೆ ಒಬ್ಬ ಸಾಮಾನ್ಯರು ಒಂದು ತೈಲವನ್ನು ಕಂಡು ಹಿಡಿದಿದ್ದಾರೆ. ಇದು ಇವರ ಇತ್ತೀಚಿನ ಶೋಧನೆ, ಮೇಲ್ನೋಟದಲ್ಲಿ ‘ಅರಳೆಕಾಯಿ ಪಾಂಡಿತ್ಯ’ವೆಂದಾದರೂ ಇದರಲ್ಲಿಯೂ ವೈಜ್ಞಾನಿಕ ಕ್ರಿಯೆಗಳು ನಡೆದೇ ಕೂದಲುಗಳು ಅಂಕುರಿಸುತ್ತವೆ, ಎಂಬುದು ಸತ್ಯ.

ಸದ್ಯ ಸಾಗರದ ನಾರಾಯಣ ಬಂಢಾರಿ ವೃತ್ತಿಯಲ್ಲಿ ಕ್ಷೌರಿಕ ೪೦ ವರ್ಷಗಳಿಂದಲೂ ಉದ್ಯೋಗ ಮಾಡುತ್ತಿದ್ದ ಇವರು ಇತ್ತೀಚೆಗೆ ಗಿಡಮೂಲಿಕೆಗಳ ಸಂಗ್ರಹದಿಂದ ತೈಲವೊಂದನ್ನು ಕಂಡು ಹಿಡಿದು ಪ್ರಯೋಗಿಸಿ ಯಶಸ್ವಿಯಾದರು. ಈ ತೈಲದ ಹೆಸರು “ಕನಕ ಸಿಂಹಾದ್ರಿತೈಲ”. ಈಗಾಗಲೇ ಸಾವಿರಾರು ಜನ ಇದನ್ನು ಉಪಯೋಗಿಸಿ ಯಶಸ್ವಿಯಾಗಿದ್ದಾರೆ. ಸ್ನಾನದ ನಂತರ ದಿನ ಬಿಟ್ಟು ದಿನ ಹೀಗೆ ೪ ಬಾಟಲ್ ಮುಗಿಯುವವರೆಗೂ ಹಚ್ಚಿದರೆ ಕೇಶಗಳು ಪುನರ್‌ಸೃಷ್ಟಿಗೊಳ್ಳುತ್ತವೆ. ಇದರ ತಯಾರಿಕೆಯ ಮೂಲವನ್ನು ನಾರಾಯಣ ಬಂಢಾರಿ ಹೇಳಿಲ್ಲ. ಕೆಲವು ವಿದೇಶಿಯರೂ ಕೂಡ ಈ ತೈಲವನ್ನು ಕೊಂಡೊಯ್ದಿದ್ದಾರೆ.
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...