Home / ಲೇಖನ / ವಿಜ್ಞಾನ / ಕೇಶ ಉದುರಿದಾಗ ಚಿಗುರುವಂತೆ ಮಾಡುವ ತೈಲ

ಕೇಶ ಉದುರಿದಾಗ ಚಿಗುರುವಂತೆ ಮಾಡುವ ತೈಲ

ಬೊಕ್ಕ ತಲೆಯ ಜನರು ತಮ್ಮತಲೆಯ ಗತವೈಭವವನ್ನು ಮೆಲಕು ಹಾಕುತ್ತ ಏನೇನೋ ಚಿಕಿತ್ಸ ಮಾಡಿಸಿ ಮತ್ತೆ ಬೋಳಾಗುವ ಪರಿಯನ್ನು ಕಂಡು ವ್ಯಥೆಪಟ್ಟುಕೊಳ್ಳುತ್ತಲೇ ಇರುತ್ತಾರೆ. ಇಂದು ವಿಜ್ಞಾನ ಯುಗ. ತಂತ್ರಜ್ಞಾನದಿಂದ ಏನೆಲ್ಲವನ್ನು ಕಂಡು ಹಿಡಿದರೂ ಈ ಬೊಕ್ಕತಲೆಯ ಚಿಕಿತ್ಸೆಯನ್ನು ಮಾಡಿ ಪುನಃಕೂದಲು ಸಮೃದ್ಧಗೊಳ್ಳುವಂತೆ ಮಾಡಲು ಇನ್ನೂ ಪ್ರಯೋಗಗಳು ಆಗಿಲ್ಲ. ೫೦ ವರ್ಷದೊಳಗಿನ ಸ್ತ್ರೀ ಪುರುಷರಿಗೆ ಬೊಕ್ಕತಲೆಯಾದರೆ ಅಂಥವಹರಿಗೆ ಒಬ್ಬ ಸಾಮಾನ್ಯರು ಒಂದು ತೈಲವನ್ನು ಕಂಡು ಹಿಡಿದಿದ್ದಾರೆ. ಇದು ಇವರ ಇತ್ತೀಚಿನ ಶೋಧನೆ, ಮೇಲ್ನೋಟದಲ್ಲಿ ‘ಅರಳೆಕಾಯಿ ಪಾಂಡಿತ್ಯ’ವೆಂದಾದರೂ ಇದರಲ್ಲಿಯೂ ವೈಜ್ಞಾನಿಕ ಕ್ರಿಯೆಗಳು ನಡೆದೇ ಕೂದಲುಗಳು ಅಂಕುರಿಸುತ್ತವೆ, ಎಂಬುದು ಸತ್ಯ.

ಸದ್ಯ ಸಾಗರದ ನಾರಾಯಣ ಬಂಢಾರಿ ವೃತ್ತಿಯಲ್ಲಿ ಕ್ಷೌರಿಕ ೪೦ ವರ್ಷಗಳಿಂದಲೂ ಉದ್ಯೋಗ ಮಾಡುತ್ತಿದ್ದ ಇವರು ಇತ್ತೀಚೆಗೆ ಗಿಡಮೂಲಿಕೆಗಳ ಸಂಗ್ರಹದಿಂದ ತೈಲವೊಂದನ್ನು ಕಂಡು ಹಿಡಿದು ಪ್ರಯೋಗಿಸಿ ಯಶಸ್ವಿಯಾದರು. ಈ ತೈಲದ ಹೆಸರು “ಕನಕ ಸಿಂಹಾದ್ರಿತೈಲ”. ಈಗಾಗಲೇ ಸಾವಿರಾರು ಜನ ಇದನ್ನು ಉಪಯೋಗಿಸಿ ಯಶಸ್ವಿಯಾಗಿದ್ದಾರೆ. ಸ್ನಾನದ ನಂತರ ದಿನ ಬಿಟ್ಟು ದಿನ ಹೀಗೆ ೪ ಬಾಟಲ್ ಮುಗಿಯುವವರೆಗೂ ಹಚ್ಚಿದರೆ ಕೇಶಗಳು ಪುನರ್‌ಸೃಷ್ಟಿಗೊಳ್ಳುತ್ತವೆ. ಇದರ ತಯಾರಿಕೆಯ ಮೂಲವನ್ನು ನಾರಾಯಣ ಬಂಢಾರಿ ಹೇಳಿಲ್ಲ. ಕೆಲವು ವಿದೇಶಿಯರೂ ಕೂಡ ಈ ತೈಲವನ್ನು ಕೊಂಡೊಯ್ದಿದ್ದಾರೆ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...