Home / ಲೇಖನ / ವಿಜ್ಞಾನ / ಹೃದಯಾಫಾತ ತಪ್ಪಿಸುವ ಔಷಧಿ

ಹೃದಯಾಫಾತ ತಪ್ಪಿಸುವ ಔಷಧಿ

ಪ್ರತಿದಿನವೂ ಹೃದಯಾಘಾತದಿಂದ ಸಾವನ್ನಪ್ಪುವ ಜನಸಂಖ್ಯೆ ಹೆಚ್ಚಾಗುತ್ತಲಿದೆ. ಸ್ವಸ್ತವಾಗಿದ್ದಾಗಲೇ ಹೃದಯದ ಬಡಿತ ಒಮ್ಮಿಂದೊಮ್ಮೆಲೇ ನಿಂತು ನೆಲಕ್ಕೆ ಕುಸಿದು ಪ್ರಾಣ ಹಾರಿಹೋಗಿರುತ್ತದೆ. ಇಂತಹ ಸಮಸ್ಯೆಗೆ ಪರಿಹಾರವನ್ನು ಕಂಡು ಹಿಡಿಯಬೇಕೆಂದು ಡಾ|| ಹೆರಾಲ್ಡ್ ಲೇಜರ್ ಅವರು ಒಂದು ಪ್ರೊಟೀನನ್ನು ಜೈವಿಕ ತಂತ್ರಜ್ಞಾನದಿಂದ ಕಂಡು ಹಿಡಿದಿದ್ದಾರೆ.

ಜೈವಿಕ ತಂತ್ರಜ್ಞಾನವು ಎಲ್ಲ ಕ್ಷೇತ್ರಗಳಲ್ಲಿ ಉತ್ಕೃಷ್ಟ ಮತ್ತು ಉನ್ನತ ಉಪಕಾರಿಯಾದಂತೆ ವೈದ್ಯಕೀಯ ಕ್ಷೇತ್ರದಲ್ಲಿಯೂ ಲಾಭಕಾರಿಯಾಗಿದೆ ಎಂದು ಬೇರೆ ಹೇಳಬೇಕಿಲ್ಲ. ಮ್ಯುಸಾಬೂಟ್ಸ್ ವಿಶ್ವವಿದ್ಯಾನಿಲಯದ ಡಾ|| ಲೇಜರ್ ಅವರು ಹೃದಯಾಘಾತವನ್ನು ತಡೆಗಟ್ಟಲು ಜೈವಿಕ ತಂತ್ರಜ್ಞಾನದಿಂದಲೇ ಸಾದರ ಪಡಿಸಿದ್ದಾರೆ. ಇದರ ಹೆಸರು “ಎಕ್ಸ್‌ಸಿರ್” (Soluble Human Complements Receptor) ಇದನ್ನು ಹಂದಿಗಳ ಮೇಲೆ ಪ್ರಯೋಗಿಸಿ ಸತ್ಯಾಂಶವನ್ನು ಕಂಡು ಹಿಡಿದಿದ್ದಾರೆ. ಈ ಔಷಧಿಯಿಂದಾಗಿ ಶರೀರದಲ್ಲಿರುವ ಅನೇಕ ರೋಗಾಣುಗಳ ವಿರುದ್ಧ ಪ್ರತಿರೋಧಕ ಶಕ್ತಿಯಾಗಿ ವರ್ಧಿಸಿದ್ಧನ್ನು ಕಂಡುಕೊಂಡು ಪ್ರಕಟಿಸಿದರು. ಹೃದಯಾಘಾತವನ್ನು ತಡೆಹಿಡಿಯುತ್ತದೆಂದು ಖಚಿತಪಡಿಸಿದರು.

ಇದಲ್ಲದೇ ಲಂಡನ್ನಿನಲ್ಲಿರುವ ಹೃದಯ ಶಾಸ್ತ್ರ ತಂಡದವರು ತಯಾರಿಸಿದ ಒಂದು ಕಂಪ್ಯೂಟರ್ ಸಾಫ್ಟ್‌ವೇರ್‌ನಿಂದ ಒಬ್ಬ ರೋಗಿ ಹೃದಯಾಘಾತಕ್ಕೆ ಈಡಾಗುವ ಸಾಧ್ಯತೆ ಇದೆಯೇ ಇಲ್ಲವೇ ಎಂಬುವುದನ್ನು ಮುಂಚಿತವಾಗಿಯೇ ತಿಳಿಯಬಹುದೆಂದು ಹೇಳುತ್ತಾರೆ. ಮತ್ತಲ್ಲದೇ ಹೃದಯದ ಗಾತ್ರ, ಹೃದಯ ಬಡಿತದ ಲಯ, ಇತ್ಯಾದಿಗಳನ್ನು ಗಣನೆಗೆ ತೆಗೆದುಕೊಂಡು ಮುಂದಿನ ೧೦ ವರ್ಷಗಳಲ್ಲಿ ಮನುಷ್ಯನ ಸಾವಿನ ಗಂಡಾಂತರದ ಭವಿಷ್ಯವನ್ನು ಹೇಳುತ್ತದೆ.
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...