Home / ಲೇಖನ / ವಿಜ್ಞಾನ / ಹೃದಯಾಫಾತ ತಪ್ಪಿಸುವ ಔಷಧಿ

ಹೃದಯಾಫಾತ ತಪ್ಪಿಸುವ ಔಷಧಿ

ಪ್ರತಿದಿನವೂ ಹೃದಯಾಘಾತದಿಂದ ಸಾವನ್ನಪ್ಪುವ ಜನಸಂಖ್ಯೆ ಹೆಚ್ಚಾಗುತ್ತಲಿದೆ. ಸ್ವಸ್ತವಾಗಿದ್ದಾಗಲೇ ಹೃದಯದ ಬಡಿತ ಒಮ್ಮಿಂದೊಮ್ಮೆಲೇ ನಿಂತು ನೆಲಕ್ಕೆ ಕುಸಿದು ಪ್ರಾಣ ಹಾರಿಹೋಗಿರುತ್ತದೆ. ಇಂತಹ ಸಮಸ್ಯೆಗೆ ಪರಿಹಾರವನ್ನು ಕಂಡು ಹಿಡಿಯಬೇಕೆಂದು ಡಾ|| ಹೆರಾಲ್ಡ್ ಲೇಜರ್ ಅವರು ಒಂದು ಪ್ರೊಟೀನನ್ನು ಜೈವಿಕ ತಂತ್ರಜ್ಞಾನದಿಂದ ಕಂಡು ಹಿಡಿದಿದ್ದಾರೆ.

ಜೈವಿಕ ತಂತ್ರಜ್ಞಾನವು ಎಲ್ಲ ಕ್ಷೇತ್ರಗಳಲ್ಲಿ ಉತ್ಕೃಷ್ಟ ಮತ್ತು ಉನ್ನತ ಉಪಕಾರಿಯಾದಂತೆ ವೈದ್ಯಕೀಯ ಕ್ಷೇತ್ರದಲ್ಲಿಯೂ ಲಾಭಕಾರಿಯಾಗಿದೆ ಎಂದು ಬೇರೆ ಹೇಳಬೇಕಿಲ್ಲ. ಮ್ಯುಸಾಬೂಟ್ಸ್ ವಿಶ್ವವಿದ್ಯಾನಿಲಯದ ಡಾ|| ಲೇಜರ್ ಅವರು ಹೃದಯಾಘಾತವನ್ನು ತಡೆಗಟ್ಟಲು ಜೈವಿಕ ತಂತ್ರಜ್ಞಾನದಿಂದಲೇ ಸಾದರ ಪಡಿಸಿದ್ದಾರೆ. ಇದರ ಹೆಸರು “ಎಕ್ಸ್‌ಸಿರ್” (Soluble Human Complements Receptor) ಇದನ್ನು ಹಂದಿಗಳ ಮೇಲೆ ಪ್ರಯೋಗಿಸಿ ಸತ್ಯಾಂಶವನ್ನು ಕಂಡು ಹಿಡಿದಿದ್ದಾರೆ. ಈ ಔಷಧಿಯಿಂದಾಗಿ ಶರೀರದಲ್ಲಿರುವ ಅನೇಕ ರೋಗಾಣುಗಳ ವಿರುದ್ಧ ಪ್ರತಿರೋಧಕ ಶಕ್ತಿಯಾಗಿ ವರ್ಧಿಸಿದ್ಧನ್ನು ಕಂಡುಕೊಂಡು ಪ್ರಕಟಿಸಿದರು. ಹೃದಯಾಘಾತವನ್ನು ತಡೆಹಿಡಿಯುತ್ತದೆಂದು ಖಚಿತಪಡಿಸಿದರು.

ಇದಲ್ಲದೇ ಲಂಡನ್ನಿನಲ್ಲಿರುವ ಹೃದಯ ಶಾಸ್ತ್ರ ತಂಡದವರು ತಯಾರಿಸಿದ ಒಂದು ಕಂಪ್ಯೂಟರ್ ಸಾಫ್ಟ್‌ವೇರ್‌ನಿಂದ ಒಬ್ಬ ರೋಗಿ ಹೃದಯಾಘಾತಕ್ಕೆ ಈಡಾಗುವ ಸಾಧ್ಯತೆ ಇದೆಯೇ ಇಲ್ಲವೇ ಎಂಬುವುದನ್ನು ಮುಂಚಿತವಾಗಿಯೇ ತಿಳಿಯಬಹುದೆಂದು ಹೇಳುತ್ತಾರೆ. ಮತ್ತಲ್ಲದೇ ಹೃದಯದ ಗಾತ್ರ, ಹೃದಯ ಬಡಿತದ ಲಯ, ಇತ್ಯಾದಿಗಳನ್ನು ಗಣನೆಗೆ ತೆಗೆದುಕೊಂಡು ಮುಂದಿನ ೧೦ ವರ್ಷಗಳಲ್ಲಿ ಮನುಷ್ಯನ ಸಾವಿನ ಗಂಡಾಂತರದ ಭವಿಷ್ಯವನ್ನು ಹೇಳುತ್ತದೆ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...