Home / ಲೇಖನ / ವಿಜ್ಞಾನ / ಹೃದಯಾಫಾತ ತಪ್ಪಿಸುವ ಔಷಧಿ

ಹೃದಯಾಫಾತ ತಪ್ಪಿಸುವ ಔಷಧಿ

ಪ್ರತಿದಿನವೂ ಹೃದಯಾಘಾತದಿಂದ ಸಾವನ್ನಪ್ಪುವ ಜನಸಂಖ್ಯೆ ಹೆಚ್ಚಾಗುತ್ತಲಿದೆ. ಸ್ವಸ್ತವಾಗಿದ್ದಾಗಲೇ ಹೃದಯದ ಬಡಿತ ಒಮ್ಮಿಂದೊಮ್ಮೆಲೇ ನಿಂತು ನೆಲಕ್ಕೆ ಕುಸಿದು ಪ್ರಾಣ ಹಾರಿಹೋಗಿರುತ್ತದೆ. ಇಂತಹ ಸಮಸ್ಯೆಗೆ ಪರಿಹಾರವನ್ನು ಕಂಡು ಹಿಡಿಯಬೇಕೆಂದು ಡಾ|| ಹೆರಾಲ್ಡ್ ಲೇಜರ್ ಅವರು ಒಂದು ಪ್ರೊಟೀನನ್ನು ಜೈವಿಕ ತಂತ್ರಜ್ಞಾನದಿಂದ ಕಂಡು ಹಿಡಿದಿದ್ದಾರೆ.

ಜೈವಿಕ ತಂತ್ರಜ್ಞಾನವು ಎಲ್ಲ ಕ್ಷೇತ್ರಗಳಲ್ಲಿ ಉತ್ಕೃಷ್ಟ ಮತ್ತು ಉನ್ನತ ಉಪಕಾರಿಯಾದಂತೆ ವೈದ್ಯಕೀಯ ಕ್ಷೇತ್ರದಲ್ಲಿಯೂ ಲಾಭಕಾರಿಯಾಗಿದೆ ಎಂದು ಬೇರೆ ಹೇಳಬೇಕಿಲ್ಲ. ಮ್ಯುಸಾಬೂಟ್ಸ್ ವಿಶ್ವವಿದ್ಯಾನಿಲಯದ ಡಾ|| ಲೇಜರ್ ಅವರು ಹೃದಯಾಘಾತವನ್ನು ತಡೆಗಟ್ಟಲು ಜೈವಿಕ ತಂತ್ರಜ್ಞಾನದಿಂದಲೇ ಸಾದರ ಪಡಿಸಿದ್ದಾರೆ. ಇದರ ಹೆಸರು “ಎಕ್ಸ್‌ಸಿರ್” (Soluble Human Complements Receptor) ಇದನ್ನು ಹಂದಿಗಳ ಮೇಲೆ ಪ್ರಯೋಗಿಸಿ ಸತ್ಯಾಂಶವನ್ನು ಕಂಡು ಹಿಡಿದಿದ್ದಾರೆ. ಈ ಔಷಧಿಯಿಂದಾಗಿ ಶರೀರದಲ್ಲಿರುವ ಅನೇಕ ರೋಗಾಣುಗಳ ವಿರುದ್ಧ ಪ್ರತಿರೋಧಕ ಶಕ್ತಿಯಾಗಿ ವರ್ಧಿಸಿದ್ಧನ್ನು ಕಂಡುಕೊಂಡು ಪ್ರಕಟಿಸಿದರು. ಹೃದಯಾಘಾತವನ್ನು ತಡೆಹಿಡಿಯುತ್ತದೆಂದು ಖಚಿತಪಡಿಸಿದರು.

ಇದಲ್ಲದೇ ಲಂಡನ್ನಿನಲ್ಲಿರುವ ಹೃದಯ ಶಾಸ್ತ್ರ ತಂಡದವರು ತಯಾರಿಸಿದ ಒಂದು ಕಂಪ್ಯೂಟರ್ ಸಾಫ್ಟ್‌ವೇರ್‌ನಿಂದ ಒಬ್ಬ ರೋಗಿ ಹೃದಯಾಘಾತಕ್ಕೆ ಈಡಾಗುವ ಸಾಧ್ಯತೆ ಇದೆಯೇ ಇಲ್ಲವೇ ಎಂಬುವುದನ್ನು ಮುಂಚಿತವಾಗಿಯೇ ತಿಳಿಯಬಹುದೆಂದು ಹೇಳುತ್ತಾರೆ. ಮತ್ತಲ್ಲದೇ ಹೃದಯದ ಗಾತ್ರ, ಹೃದಯ ಬಡಿತದ ಲಯ, ಇತ್ಯಾದಿಗಳನ್ನು ಗಣನೆಗೆ ತೆಗೆದುಕೊಂಡು ಮುಂದಿನ ೧೦ ವರ್ಷಗಳಲ್ಲಿ ಮನುಷ್ಯನ ಸಾವಿನ ಗಂಡಾಂತರದ ಭವಿಷ್ಯವನ್ನು ಹೇಳುತ್ತದೆ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...