Home / ಲೇಖನ / ವಿಜ್ಞಾನ / ಹೃದಯಾಫಾತ ತಪ್ಪಿಸುವ ಔಷಧಿ

ಹೃದಯಾಫಾತ ತಪ್ಪಿಸುವ ಔಷಧಿ

ಪ್ರತಿದಿನವೂ ಹೃದಯಾಘಾತದಿಂದ ಸಾವನ್ನಪ್ಪುವ ಜನಸಂಖ್ಯೆ ಹೆಚ್ಚಾಗುತ್ತಲಿದೆ. ಸ್ವಸ್ತವಾಗಿದ್ದಾಗಲೇ ಹೃದಯದ ಬಡಿತ ಒಮ್ಮಿಂದೊಮ್ಮೆಲೇ ನಿಂತು ನೆಲಕ್ಕೆ ಕುಸಿದು ಪ್ರಾಣ ಹಾರಿಹೋಗಿರುತ್ತದೆ. ಇಂತಹ ಸಮಸ್ಯೆಗೆ ಪರಿಹಾರವನ್ನು ಕಂಡು ಹಿಡಿಯಬೇಕೆಂದು ಡಾ|| ಹೆರಾಲ್ಡ್ ಲೇಜರ್ ಅವರು ಒಂದು ಪ್ರೊಟೀನನ್ನು ಜೈವಿಕ ತಂತ್ರಜ್ಞಾನದಿಂದ ಕಂಡು ಹಿಡಿದಿದ್ದಾರೆ.

ಜೈವಿಕ ತಂತ್ರಜ್ಞಾನವು ಎಲ್ಲ ಕ್ಷೇತ್ರಗಳಲ್ಲಿ ಉತ್ಕೃಷ್ಟ ಮತ್ತು ಉನ್ನತ ಉಪಕಾರಿಯಾದಂತೆ ವೈದ್ಯಕೀಯ ಕ್ಷೇತ್ರದಲ್ಲಿಯೂ ಲಾಭಕಾರಿಯಾಗಿದೆ ಎಂದು ಬೇರೆ ಹೇಳಬೇಕಿಲ್ಲ. ಮ್ಯುಸಾಬೂಟ್ಸ್ ವಿಶ್ವವಿದ್ಯಾನಿಲಯದ ಡಾ|| ಲೇಜರ್ ಅವರು ಹೃದಯಾಘಾತವನ್ನು ತಡೆಗಟ್ಟಲು ಜೈವಿಕ ತಂತ್ರಜ್ಞಾನದಿಂದಲೇ ಸಾದರ ಪಡಿಸಿದ್ದಾರೆ. ಇದರ ಹೆಸರು “ಎಕ್ಸ್‌ಸಿರ್” (Soluble Human Complements Receptor) ಇದನ್ನು ಹಂದಿಗಳ ಮೇಲೆ ಪ್ರಯೋಗಿಸಿ ಸತ್ಯಾಂಶವನ್ನು ಕಂಡು ಹಿಡಿದಿದ್ದಾರೆ. ಈ ಔಷಧಿಯಿಂದಾಗಿ ಶರೀರದಲ್ಲಿರುವ ಅನೇಕ ರೋಗಾಣುಗಳ ವಿರುದ್ಧ ಪ್ರತಿರೋಧಕ ಶಕ್ತಿಯಾಗಿ ವರ್ಧಿಸಿದ್ಧನ್ನು ಕಂಡುಕೊಂಡು ಪ್ರಕಟಿಸಿದರು. ಹೃದಯಾಘಾತವನ್ನು ತಡೆಹಿಡಿಯುತ್ತದೆಂದು ಖಚಿತಪಡಿಸಿದರು.

ಇದಲ್ಲದೇ ಲಂಡನ್ನಿನಲ್ಲಿರುವ ಹೃದಯ ಶಾಸ್ತ್ರ ತಂಡದವರು ತಯಾರಿಸಿದ ಒಂದು ಕಂಪ್ಯೂಟರ್ ಸಾಫ್ಟ್‌ವೇರ್‌ನಿಂದ ಒಬ್ಬ ರೋಗಿ ಹೃದಯಾಘಾತಕ್ಕೆ ಈಡಾಗುವ ಸಾಧ್ಯತೆ ಇದೆಯೇ ಇಲ್ಲವೇ ಎಂಬುವುದನ್ನು ಮುಂಚಿತವಾಗಿಯೇ ತಿಳಿಯಬಹುದೆಂದು ಹೇಳುತ್ತಾರೆ. ಮತ್ತಲ್ಲದೇ ಹೃದಯದ ಗಾತ್ರ, ಹೃದಯ ಬಡಿತದ ಲಯ, ಇತ್ಯಾದಿಗಳನ್ನು ಗಣನೆಗೆ ತೆಗೆದುಕೊಂಡು ಮುಂದಿನ ೧೦ ವರ್ಷಗಳಲ್ಲಿ ಮನುಷ್ಯನ ಸಾವಿನ ಗಂಡಾಂತರದ ಭವಿಷ್ಯವನ್ನು ಹೇಳುತ್ತದೆ.
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...