Home / ಲೇಖನ / ವಿಜ್ಞಾನ / ಹೃದಯಾಫಾತ ತಪ್ಪಿಸುವ ಔಷಧಿ

ಹೃದಯಾಫಾತ ತಪ್ಪಿಸುವ ಔಷಧಿ

ಪ್ರತಿದಿನವೂ ಹೃದಯಾಘಾತದಿಂದ ಸಾವನ್ನಪ್ಪುವ ಜನಸಂಖ್ಯೆ ಹೆಚ್ಚಾಗುತ್ತಲಿದೆ. ಸ್ವಸ್ತವಾಗಿದ್ದಾಗಲೇ ಹೃದಯದ ಬಡಿತ ಒಮ್ಮಿಂದೊಮ್ಮೆಲೇ ನಿಂತು ನೆಲಕ್ಕೆ ಕುಸಿದು ಪ್ರಾಣ ಹಾರಿಹೋಗಿರುತ್ತದೆ. ಇಂತಹ ಸಮಸ್ಯೆಗೆ ಪರಿಹಾರವನ್ನು ಕಂಡು ಹಿಡಿಯಬೇಕೆಂದು ಡಾ|| ಹೆರಾಲ್ಡ್ ಲೇಜರ್ ಅವರು ಒಂದು ಪ್ರೊಟೀನನ್ನು ಜೈವಿಕ ತಂತ್ರಜ್ಞಾನದಿಂದ ಕಂಡು ಹಿಡಿದಿದ್ದಾರೆ.

ಜೈವಿಕ ತಂತ್ರಜ್ಞಾನವು ಎಲ್ಲ ಕ್ಷೇತ್ರಗಳಲ್ಲಿ ಉತ್ಕೃಷ್ಟ ಮತ್ತು ಉನ್ನತ ಉಪಕಾರಿಯಾದಂತೆ ವೈದ್ಯಕೀಯ ಕ್ಷೇತ್ರದಲ್ಲಿಯೂ ಲಾಭಕಾರಿಯಾಗಿದೆ ಎಂದು ಬೇರೆ ಹೇಳಬೇಕಿಲ್ಲ. ಮ್ಯುಸಾಬೂಟ್ಸ್ ವಿಶ್ವವಿದ್ಯಾನಿಲಯದ ಡಾ|| ಲೇಜರ್ ಅವರು ಹೃದಯಾಘಾತವನ್ನು ತಡೆಗಟ್ಟಲು ಜೈವಿಕ ತಂತ್ರಜ್ಞಾನದಿಂದಲೇ ಸಾದರ ಪಡಿಸಿದ್ದಾರೆ. ಇದರ ಹೆಸರು “ಎಕ್ಸ್‌ಸಿರ್” (Soluble Human Complements Receptor) ಇದನ್ನು ಹಂದಿಗಳ ಮೇಲೆ ಪ್ರಯೋಗಿಸಿ ಸತ್ಯಾಂಶವನ್ನು ಕಂಡು ಹಿಡಿದಿದ್ದಾರೆ. ಈ ಔಷಧಿಯಿಂದಾಗಿ ಶರೀರದಲ್ಲಿರುವ ಅನೇಕ ರೋಗಾಣುಗಳ ವಿರುದ್ಧ ಪ್ರತಿರೋಧಕ ಶಕ್ತಿಯಾಗಿ ವರ್ಧಿಸಿದ್ಧನ್ನು ಕಂಡುಕೊಂಡು ಪ್ರಕಟಿಸಿದರು. ಹೃದಯಾಘಾತವನ್ನು ತಡೆಹಿಡಿಯುತ್ತದೆಂದು ಖಚಿತಪಡಿಸಿದರು.

ಇದಲ್ಲದೇ ಲಂಡನ್ನಿನಲ್ಲಿರುವ ಹೃದಯ ಶಾಸ್ತ್ರ ತಂಡದವರು ತಯಾರಿಸಿದ ಒಂದು ಕಂಪ್ಯೂಟರ್ ಸಾಫ್ಟ್‌ವೇರ್‌ನಿಂದ ಒಬ್ಬ ರೋಗಿ ಹೃದಯಾಘಾತಕ್ಕೆ ಈಡಾಗುವ ಸಾಧ್ಯತೆ ಇದೆಯೇ ಇಲ್ಲವೇ ಎಂಬುವುದನ್ನು ಮುಂಚಿತವಾಗಿಯೇ ತಿಳಿಯಬಹುದೆಂದು ಹೇಳುತ್ತಾರೆ. ಮತ್ತಲ್ಲದೇ ಹೃದಯದ ಗಾತ್ರ, ಹೃದಯ ಬಡಿತದ ಲಯ, ಇತ್ಯಾದಿಗಳನ್ನು ಗಣನೆಗೆ ತೆಗೆದುಕೊಂಡು ಮುಂದಿನ ೧೦ ವರ್ಷಗಳಲ್ಲಿ ಮನುಷ್ಯನ ಸಾವಿನ ಗಂಡಾಂತರದ ಭವಿಷ್ಯವನ್ನು ಹೇಳುತ್ತದೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...