Home / ಲೇಖನ / ವಿಜ್ಞಾನ / ಹೃದಯಾಫಾತ ತಪ್ಪಿಸುವ ಔಷಧಿ

ಹೃದಯಾಫಾತ ತಪ್ಪಿಸುವ ಔಷಧಿ

ಪ್ರತಿದಿನವೂ ಹೃದಯಾಘಾತದಿಂದ ಸಾವನ್ನಪ್ಪುವ ಜನಸಂಖ್ಯೆ ಹೆಚ್ಚಾಗುತ್ತಲಿದೆ. ಸ್ವಸ್ತವಾಗಿದ್ದಾಗಲೇ ಹೃದಯದ ಬಡಿತ ಒಮ್ಮಿಂದೊಮ್ಮೆಲೇ ನಿಂತು ನೆಲಕ್ಕೆ ಕುಸಿದು ಪ್ರಾಣ ಹಾರಿಹೋಗಿರುತ್ತದೆ. ಇಂತಹ ಸಮಸ್ಯೆಗೆ ಪರಿಹಾರವನ್ನು ಕಂಡು ಹಿಡಿಯಬೇಕೆಂದು ಡಾ|| ಹೆರಾಲ್ಡ್ ಲೇಜರ್ ಅವರು ಒಂದು ಪ್ರೊಟೀನನ್ನು ಜೈವಿಕ ತಂತ್ರಜ್ಞಾನದಿಂದ ಕಂಡು ಹಿಡಿದಿದ್ದಾರೆ.

ಜೈವಿಕ ತಂತ್ರಜ್ಞಾನವು ಎಲ್ಲ ಕ್ಷೇತ್ರಗಳಲ್ಲಿ ಉತ್ಕೃಷ್ಟ ಮತ್ತು ಉನ್ನತ ಉಪಕಾರಿಯಾದಂತೆ ವೈದ್ಯಕೀಯ ಕ್ಷೇತ್ರದಲ್ಲಿಯೂ ಲಾಭಕಾರಿಯಾಗಿದೆ ಎಂದು ಬೇರೆ ಹೇಳಬೇಕಿಲ್ಲ. ಮ್ಯುಸಾಬೂಟ್ಸ್ ವಿಶ್ವವಿದ್ಯಾನಿಲಯದ ಡಾ|| ಲೇಜರ್ ಅವರು ಹೃದಯಾಘಾತವನ್ನು ತಡೆಗಟ್ಟಲು ಜೈವಿಕ ತಂತ್ರಜ್ಞಾನದಿಂದಲೇ ಸಾದರ ಪಡಿಸಿದ್ದಾರೆ. ಇದರ ಹೆಸರು “ಎಕ್ಸ್‌ಸಿರ್” (Soluble Human Complements Receptor) ಇದನ್ನು ಹಂದಿಗಳ ಮೇಲೆ ಪ್ರಯೋಗಿಸಿ ಸತ್ಯಾಂಶವನ್ನು ಕಂಡು ಹಿಡಿದಿದ್ದಾರೆ. ಈ ಔಷಧಿಯಿಂದಾಗಿ ಶರೀರದಲ್ಲಿರುವ ಅನೇಕ ರೋಗಾಣುಗಳ ವಿರುದ್ಧ ಪ್ರತಿರೋಧಕ ಶಕ್ತಿಯಾಗಿ ವರ್ಧಿಸಿದ್ಧನ್ನು ಕಂಡುಕೊಂಡು ಪ್ರಕಟಿಸಿದರು. ಹೃದಯಾಘಾತವನ್ನು ತಡೆಹಿಡಿಯುತ್ತದೆಂದು ಖಚಿತಪಡಿಸಿದರು.

ಇದಲ್ಲದೇ ಲಂಡನ್ನಿನಲ್ಲಿರುವ ಹೃದಯ ಶಾಸ್ತ್ರ ತಂಡದವರು ತಯಾರಿಸಿದ ಒಂದು ಕಂಪ್ಯೂಟರ್ ಸಾಫ್ಟ್‌ವೇರ್‌ನಿಂದ ಒಬ್ಬ ರೋಗಿ ಹೃದಯಾಘಾತಕ್ಕೆ ಈಡಾಗುವ ಸಾಧ್ಯತೆ ಇದೆಯೇ ಇಲ್ಲವೇ ಎಂಬುವುದನ್ನು ಮುಂಚಿತವಾಗಿಯೇ ತಿಳಿಯಬಹುದೆಂದು ಹೇಳುತ್ತಾರೆ. ಮತ್ತಲ್ಲದೇ ಹೃದಯದ ಗಾತ್ರ, ಹೃದಯ ಬಡಿತದ ಲಯ, ಇತ್ಯಾದಿಗಳನ್ನು ಗಣನೆಗೆ ತೆಗೆದುಕೊಂಡು ಮುಂದಿನ ೧೦ ವರ್ಷಗಳಲ್ಲಿ ಮನುಷ್ಯನ ಸಾವಿನ ಗಂಡಾಂತರದ ಭವಿಷ್ಯವನ್ನು ಹೇಳುತ್ತದೆ.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...