Home / ಕವನ / ಕವಿತೆ / ಬಳ್ಳಾರಿ ಬಿಸಿಲೆಂದರೆ…

ಬಳ್ಳಾರಿ ಬಿಸಿಲೆಂದರೆ…

ಬಳ್ಳಾರಿ ಬಿಸಿಲೆಂದರೆ…
ನಿಗಿ ನಿಗಿ ಉರಿವಕೊಳ್ಳಿ ದೆವ್ವ!!
ನಿತ್ಯ ಬಿಸುಲುಗುದುರೆಯೇರಿ,
ಗರಿಗೆದರಿ, ಧರೆಗಿಳಿವ, ಸೂರ್‍ಯಮಂಡಲ!
ಆಲೆಮನೆಯ, ಕೊಪ್ಪರಿಗೆಯೊಳಗಿನ
ಬಿಸಿ ಬಿಸಿ ಕೆನೆ ಬೆಲ್ಲದ, ಕಾಕಂಬಿ ರಸದ, ಸಿಂಚನ!
ಕಾದ ತಾರೆಣ್ಣೆ, ಮೈಮೇಲೆ ಸುರಿವಿಕೊಂಡಂತೆ!
ಕಮ್ಮಾರ ರೋಸಿಗೊಂಡು ಸಿಟ್ಟಲಿ,
ತಿದಿಯೊತ್ತಿದ ಬಿರುಸಿಗೆ, ಕಿಡಿಕಿಡಿ ಕಾರುವ, ಸೂರ್‍ಯಕಿರಣ!
ಚಳಮಳ ಕಾದ, ಎಮ್ಮೆ ಹಾಲಿನ ಝಳದಂತೆ,
ಮಖಾಮೂತಿಗೆ ರಾಚುವ, ಕೆಂಡದುಂಡೆಯ ಬಿಸಿಲ ಮಳೆ!
ಇಟ್ಟಂಗಿ ಭಟ್ಟಿಯೊಳಗೆ, ಸಿಕ್ಕ ಮರಿ ಹುಲ್ಲೆಯಂಗೆ,
ನಿತ್ಯ ವಿಲವಿಲಾ ಒದ್ದಾಡುವ, ನರಪಿಳ್ಳೆಗಳು!
ಸೀದಕರುಕು, ಅಶ್ಟೇ ಚುರುಕು, ಹರಕು! ಝಲಕು…
ಅಬ್ಬಾ…! ಹುಟ್ಟಬೇಕು ಬಳ್ಳಾರಿ ಬಿಸಿಲಿಗೇ… ಒಮ್ಮೆಯಾದರೂ
ಗಟ್ಟಿತನ ಎತ್ತಿ ತೋರಬೇಕು!

-೨-
ಬಳ್ಳಾರಿ ಬಿಸಿಲೆಂದರೆ…
ಬಿಸಿಲೇ…! ಬಿಸಿಲಿಗೆ, ಬಿಸಲು ಸೇರಿ,
ಚಕ್ರಬಡ್ಡಿ, ಮೀಟರ್‍ ಬಡ್ಡಿ, ಸುಸ್ತಿಬಡ್ಡಿಯಶ್ಟು ತಾಪಮಾನ…
ನವರಂಧ್ರಗಳಲ್ಲಿ… ಎರೆಭೂಮಿಯಂಗೆ ಬಿರುಕು ಬಿಟ್ಟು
ಬಾಯಿಬಿಟ್ಟರೆ, ಬಾನೆಟ್ಟೆತ್ತಿದ ಹಳೆ ಜೀಪಿನ,
ರೇಡಿಯೆಟರಿನ, ಬಿಸಿನೀರಿನಿಂದ ಚಿಮ್ಮುವ ಕಾರಂಜಿ!
ಜ್ವಾಲಾಮುಖಿನೇ ಈ ಧರೆಗಿಳಿದಂತೆ, ನಿತ್ಯ ಭಸಿವ ಬಿಸಿಲು!
ಮನೆ ನಲ್ಲಿಗಳು; ಭುಸು ಭುಸುಗುಡುವ, ಬಿಸಿನೀರಿನ ಬುಗ್ಗೆಗಳು!

-೩-
ಬಳ್ಳಾರಿ ಬಿಸಿಲೆಂದರೆ…
ಕಾದ ಕಮ್ಮಾರನ ಕುಲುಮೆ!  ಇಂದ್ರನ ವಜ್ರಾಯುಧಾ!
ಸಪ್ತ ಸಾಗರಗಳ, ಲಾವರಸದ ಚಿಲುಮೆ!
ಸುಡುಬಿಸಿಲ ಸಿಡಿಲು!
ಶಿವನ ತ್ರಿನೇತ್ರದುರಿಯ ಬೆಂಗಾಡು, ಗುಡ್ಡಗಾಡು, ಗಣೆಗೂಡು…
ಪ್ರಾಣಿ, ಪಕ್ಷಿ, ನರಪಿಳ್ಳೆಗಳಿಗೇ ಗುಕ್ಕು ನೀರಿಲ್ಲದಾ ಸುಡುಗಾಡು!
ಸತ್ತಂತಿರುವ ಹಸಿರು, ಮರ, ಗಿಡಿ, ಬಳ್ಳಿಗಳೆಲ್ಲ ತ್ಯಾಪೆ ಮೋರೆ!
ಕಡುವೈರಿಗೂ ಬೇಡ ಬಿಡು! ಬಳ್ಳಾರಿ ಬಿಸಿಲು… ಉಮ್ರು… ಬೆವ್ರು…
ನಡುರಾತ್ರಿಲಿ ಉರಿವ ಸೂರ್‍ಯ! ಕಾದ ಕೋಟೆಯ ನಿಟ್ಟೂಸಿರು!
ಮೈ, ಕೈ, ಕಾಲು: ಚುರು… ಚುರು…
ಮೂಗು, ಬಾಯಿ, ಕಣ್ಣು: ಉರಿ… ಉರಿ…
ಹರಲಿರುಳು ಬೇಸಿಗೆ ಬಿಸಿಲು!
ಹಾಗಲ್ಲದಿದ್ದರೆ… ಬಳ್ಳಾರಿ ಬಿಸಲೇ ಅಲ್ಲ ಬಿಡಿ!
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...