Home / ಕವನ / ಕವಿತೆ / ನೆನಪುಗಳಿವೆ… ಕೊಳ್ಳಿ!

ನೆನಪುಗಳಿವೆ… ಕೊಳ್ಳಿ!

ಪೆರ್‍ಲಾಜ್ಜ… ನೆಟ್ಟ ಆಲದ ಮರದಲಿ,
ಮೊಮ್ಮಕ್ಳು ಮರಕೋತಿ ಆಡಿದ್ದು ನೆನಪು.
ಮರಿ ಮಗಾ ಬುಗುರಿ ಕೆತ್ತಿ, ದಾರ ಸುತ್ತಿ,
‘ಗುಯ್’…ಽಽ ಎಂದು,
ಊರುಕೇರಿ ಆಲಿಸುವಂತೆ,
‘ಗುಯ್’ ಗುಟ್ಟಿಸಿದ್ದ!
ಆಕ್ಷಣ: ಏನೆಲ್ಲ ಮರೆತು,
ಬಾಲ್ಯಕೆ ಜಾರಿದ ಜನ!
ಅರಳಿ ನೆರಳಿಗೆ,
ತೊಟ್ಟಿಲ ಕಟ್ಟಿ,
ಅಳುವಾಕಂದಮ್ಮಗಳ ಹಾಕಿ…
ಕರುಳ ಬಳ್ಳಿಯ ಹಾಡು, ನಿತ್ಯ ತೂಗುತ್ತಿತು!

ಅರಳಿ ಮರದ ಕತೆ, ಆಳೆತ್ತರ ಹಬ್ಬಿ…
ಮರ ಮರದಾ ರಂಬೆ, ಕೊಂಬೆಗೆಲ್ಲ…
ಹದ್ದು, ಕಾಗೆ, ಹಾಳಾಗದ್ದ, ಗುಬ್ಬಿ, ಪಾರಿವಾಳ,
ಗಿಡುಗ, ಗಿಳಿ, ಬೆಳವಗಳೂ ಹಿಂಡು… ಹಿಂಡು!
ನಿತ್ಯ ಚಿಲಿಪಿಲಿಯ ಸುಪ್ರಭಾತ ಮುದದೀ ಕೇಳುತ್ತಿತ್ತು
ಪಡ್ಡೆ ಹುಡುಗರಿಲ್ಲಿ ಗೋಲಿ, ಗೆಜ್ಜುಗವಾಡಿ,
ನೆರಳ ಆಶ್ರಯಿಸಿ ಬಂದ್ವರಿಲ್ಲಿ…
ಚಿನ್ನಿದಾಂಡು, ಲಗೋರಿ, ಕಣ್ಣಾಮುಚ್ಚಾಲೆಯಾಟವಿಲ್ಲಿ!
ಊರುಕೇರಿ ಜಗಳ ಬಗೆಹರಿದು,
ಸಾಕ್ಷಿ ಮರವಾಗಿ, ವರವಾಗಿ, ಹಣ್ಣು, ಕಾಯಿ, ತೂಗುತ್ತಿತ್ತು!
ಆಲೆ ಹಣ್ಣಿನಾ ರುಚಿಯು ಬಲು ನೆನೆದರೇನುಂಟು?
ಸಿಹಿ ಸಿಹಿ ನೆನಪುಗಳಿವೆ ಈಗೋಕೊಳ್ಳಿ…
ತಲೆ ತಲೆ ಮಾರಿನ, ಲೆಕ್ಕವೀಗ ಇತಿಹಾಸ!

ಸುತ್ತಳ್ಳೀ ಜನ, ಅರಳಿ ಮರವನ್ನೇ…
ತಲೆದಿಂಬು ಮಾಡಿ
ಗುಡಿ, ಚರ್ಚು, ಮಸೀದಿ ಮನೆ, ಮಠಗಳ ಬಿಟ್ಟು,
ಒಟ್ಟಿಗೆ ಕುಂತು… ಹೊಟ್ಟೆ ತುಂಬಾ… ಮಂಡಾಳುಕಾರ,
ಒಬ್ಬಟ್ಟು, ಮಿರ್ಚಿಭಜೆ, ಕೆನೆಮಸ್ರು, ಖಾರದ ಹಿಂಡಿ,
ಅಕ್ಕಿಬಾನ, ಹುಣೆಸೆತೊಕ್ಕು, ಕೆತ್ತು ತಿಂದು…
ದುಂಡಗೆ ಮಾತಿನಾಮಂಟಪ ಕಟ್ಟಿ,
ಕುಣಿಕುಣಿದಾ ದೀನವೀಗಾ, ಗತ ವೈಭವವಿಲ್ಲಿ!!

ಎಲ್ಲಿ ಹೋದವೋ… ಆ ದಿನಗಳೂ?!
ಬಟ್ಟು, ದಮ್ಮಿಡಿ, ಆಣೆ, ಅರ್ಧಾಣೆ…
ಇನ್ನೆಲ್ಲಿ ಹುಡುಕಲಿನ್ನಾ…ಽಽ ಸೇರು, ಅಚ್ಫೇರು, ಗಿದ್ನಾ, ಪಾವುಗಳನ್ನಾ…
‘ಅಂಥಾ ಮುತ್ತಿನಂಥಾ ಜನಗಳನ್ನಾಽಽ…??’
ಈಗ ಪೆರ್‍ಲಾಜ್ಜನಿಲ್ಲ!… ಮರವಿಲ್ಲ!
ವರವಾಗಿ, ನೆನಪುಗಳಿವೆ ಕೊಳ್ಳಿ…!!
ಹಳ್ಳಿಯೆಂದರೆ: ಕೊಳ್ಳಿ! ಕಳ್ಳಿಯಂಗೆ ಸಿಕ್ಕಿದಂಗೆಲ್ಲ ಹಬ್ಬಿದಾ ಮಳ್ಳಿ!
ಪ್ರಗತಿಯ ಹೆಸರಲಿ:
ಹಸಿರು ಕಡಿದು, ಉಸಿರು ತಡೆದು,
ಬರ ಹಡೆದು, ಸರಣಿ ಸ್ಫೋಟಾ, ಏಡ್ಸ್, ಹಾರ್ಟು, ಸಕ್ಕರೆ, ಬೀಪಿ,-
ಒತ್ತಡಕ್ಕೆ, ಪೀಪಿ ಹರಿದಾಪಾಪಿಗಳಿಲ್ಲಿ.
ಐಟಿ; ಬೀಟಿ, ಆಧುನಿಕರಣದ ಬೇಟೆಗೆ,
‘ಕೊಳ್ಳು ಬಾಕು’ ಸಂಸ್ಕೃತಿಗೆ-
ಗರಗರನೇ, ಗಿರಗಿರನೇ… ತಿರಗುವಾ ‘ಗಿರಗಿಟ್ಟೆ’ಯಾಗಿ,
ಮನೆ ಮನೆಯೆಲ್ಲ…
ಜನಾಮನವೆಲ್ಲ…
ಹಳ್ಳಿ ಹಳ್ಳಿಯೆಲ್ಲ ಖಾಲಿ ಖಾಲಿ…
ಎಲ್ಲೆಲ್ಲೋ… ಆತಂಕದಾ ಸೀಮೆ ಜಾಲಿ…!!
ಊರು ಹಬ್ಬಕೆ- ‘ಮಾರಿ ಹಬ್ಬ’ವ ಮಾಡಿ,
ನಾರಿಯರೆಲ್ಲ… ನಾರು ಮಡೀಲೆ, ಹಸಿರು ತೋರಣ, ಸಿಂಗಾರ ಮಾಡಿ,
ಘಮ ಘಮ ‘ಸಳ್ಳೆಪಲ್ಲೆ’, ಅಕ್ಕಿದಾನ ಉಂಡು-
‘ದಢಮ್ಮ ಧಡಿಕೆ’ಯಾಡಿದ ನೆನಪೀಗ, ಹಾಳು ಹಂಪಿಯಾಗಿದೆ!
ಈ ಊರು ಕೇರಿ,
ಈ ಹಾದಿ ಬೀದಿ,
ಈ ಗಂಡು ಹೆಣ್ಣು,
ಒಟ್ಟಿಗಿದ್ದ ಆ ನಂಟೂ…
ಈಗೆಲ್ಲಿದೆ ಅಂಥಾ ಅಂಟು?!
ಹಾಲಿನಂಥಾ ನಮ್ಮೂರ, ಬೆಳದಿಂಗಳ ಬೆಳಕಲಿ,
ಇರುಳೆಲ್ಲ ‘ಬಗಾಟುಬಗ್ರಿ’ ‘ಪರಂಗಿ ಪೀಪಿ’ ಆಡಿದಾ ಅಂಗಳದಿ,
ಕಾಂಕ್ರಿಟ್ ಗೋಡೆಗಳೆದ್ದು,
ಮೈಯೆಲ್ಲ ತಂತಿ ಬೇಲಿಯಂದದಿ-
ಮೋಬೆಲ್ ಸರಪಳಿಗಳು!!
ಬೋರು ಬೋರಾಡಿ ಅತ್ತರೂ…
ಹೆಣಯೆತ್ತಲು ನಾಲ್ಕು ಜನರಿಲ್ಲ!
ಕೂಗಿ ಬೊಬ್ಬಿಟ್ಟರೂ ಕದ ತೆಗೆದು ‘ಸೊಪ್ಪೆನ್ನು’ವವರಿಲ್ಲ!
ಮನೆ ಮಂದಿಯೆಲ್ಲ, ಮಾಯಾ ಪೆಟ್ಟಿಗೆ ಮುಂದೇಮುಪ್ಪು!!
ಬದುಕೆಲ್ಲ ಮೂರು ಕಣ್ಣಿನಾ ಚಿಪ್ಪು
ಯಾರು ಅಳಲಿಲ್ಲ…?
ಯಾರು ಕೇಳರಿಲ್ಲಿ?!
ಯಾರಿಗೆ ಯಾರು?
ಮೂರು ದಿನದ ಸಂಸಾರ…
ಯಾವ ಪುರುಷಾರ್ಥಕೆ ಈ ಜನರೋ??
ಮನ ಕಲಕಿದೆ!
ದಿನವೆಲ್ಲ…!
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...