Home / ಕವನ / ಕವಿತೆ / ಚಂದ್ರನಿಗೊಂದು ಸಲಹೆ

ಚಂದ್ರನಿಗೊಂದು ಸಲಹೆ

ಮೊನ್ನೆ ಸಂಜೆ ಗುರು ಶುಕ್ರರನ್ನೇ ಕಣ್ಣುಗಳಮಾಡಿ
ಆಕಾಶವೇ ನಕ್ಕಂತೆ ನೀ ಬಿಡಿಸಿಟ್ಟ ಚಿತ್ರ, ಬಹಳ ವಿಚಿತ್ರ.
ನಮ್ಮವರ ಚಂದ್ರಯಾನ ನಿನ್ನ ಮೇಲಿಳಿದಾಗ
ಆಗಿದ್ದರೂ ಆಗಿರಬಹುದು ನಿನಗೊಂದಿಷ್ಟು ಕಚಗುಳಿ.
ಆದರೆ ಮಧುಚಂದ್ರಕ್ಕೆ ಬಂದಿದ್ದಾರೆಂದೆಣಿಸಿ
ಉದಾಸೀನಮಾಡುವಂತದ್ದಲ್ಲ
ಈ ಲಿಲಿಪುಟ್ಟರ ದಾಳಿ.

ಭೂಮಿ ತಾಯಿಯ ಬಸಿರನ್ನೆ ಬಗೆಬಗೆದು ಬರಿದಾಗಿಸಿ
ಬರಡಾಗಿಸಿದ ಇವರ ಮಿತಿಯಿರದ ದುರಾಸೆ
ಈ ಕಳ್ಳರಿಗೀಗ ನಿನ್ನೊಳಗಿರುವ ಖನಿಜಗಳನ್ನೆಲ್ಲ ಕೊಳ್ಳೆ ಹೊಡಿವಾಸೆ
ಹೀಲಿಯಂ ಹೀರಿ ಸೂರ್ಯಚಂದ್ರರನ್ನೇ
ಪ್ರತಿಸೃಷ್ಟಿಸುವ ವಿಶ್ವಾಮಿತ್ರ ಹಮ್ಮಿನಹಮ್ಮಿನಮಲಲ್ಲಿ
ಹಾಡುತಿದ್ದಾರೆ ಧಮ್ಮಾರೇ ಧಮ್.

ನೀನೊಂದು ಮುದ್ದು ಮರಿ;  ಅದೇನೊ ಸರಿ
ಆದರೆ ಆಗಬಾರದಿತ್ತು ಇಷ್ಟೊಂದು ಮೊದ್ದು
ನಿನ್ನ ಕಕ್ಷದ ಒಳಗೆ ಕಾಲಿಟ್ಟರೆಂದಾಕ್ಷಣವೆ ಕರುಣಿಸಬೇಕಿತ್ತು
ಸೂರ್ಯನಂತೆ ಅಂಜನೀಕುಮಾರಕಪಾಲಮೋಕ್ಷ
ಬಹುರಾಷ್ಟ್ರೀಯ ಕಂಪನಿಗಳಿಗೆ ಖಂಡಿತ ನೀಡಬೇಡ ಪರವಾನಿಗೆ
ಆತ್ಮ ರಕ್ಷಣೆಯ ವಿಷಯದಲ್ಲಿ ಬೇಡ ಅಸಡ್ಡೆ, ಅವಜ್ಞೆ
ಹೇಗೂ ಸಧ್ಯಕ್ಕೆ ನೀನೇ ರಾಜ ನೀನೇ ಪ್ರಜೆ
ಮೊದಲು ಗಣಿಗಾರಿಕೆ ನಿಷೇದಿಸಿ ತಕ್ಷಣವೇ ಹೊರಡಿಸು ಒಂದು
ಸುಗ್ರೀವಾಜ್ಞೆ
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...