ಹೇಳದಿದ್ದರು ನೀನು

ಹೇಳದಿದ್ದರು ನೀನು
ಎಲ್ಲ ಬಲ್ಲೆನು ನಾನು
ಏನಿದೆ ಎಂದು ಎದೆಯಾಳದಲ್ಲಿ;
ನಿನ್ನ ಕಣ್ಣಿನೊಳೇನೊ
ನೋವು ತೇಲುತ್ತಿಹುದು
ಕರಿಮೋಡ ಸುಳಿದಂತೆ ಬಾನಿನಲ್ಲಿ

ನೂರು ಹಳೆ ನೆನಪುಗಳು
ಚೀರಿ ಹೊಮ್ಮುತ್ತಲಿವೆ
ಮರವೆಯಲಿ ಹುಗಿದರೂ ಮೇಲಕೆದ್ದು;
ನಮ್ಮ ಮೇಲೇ ಏಕೆ
ವಿಧಿಗೆ ಈ ಬಗೆ ಜಿದ್ದು
ಬೆಂದವರ ಬೆನ್ನಿಗೇ ಏಕೆ ಗುದ್ದು?

ಬಾಗುವುದು ಏಗುವುದು
ಸಹನೆಯಲಿ ಸಾಗುವುದು
ಇಷ್ಟಕೇ ಮುಗಿಯಿತೇ ನಮ್ಮ ಬಾಳು?
ಕಾಣಬಾರದ್ದೆಲ್ಲ
ಕಂಡರೂ ಕಹಿಬೇಡ
ಕನಸಿನಲಿ ಹುಗಿಯೋಣ ನಮ್ಮ ಗೋಳು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಿಂಚುಳ್ಳಿ ಬೆಳಕಿಂಡಿ – ೧೩
Next post ಪಯಣ

ಸಣ್ಣ ಕತೆ

  • ಪಾಠ

    ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ಎರಡು ಪರಿವಾರಗಳು

    ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

cheap jordans|wholesale air max|wholesale jordans|wholesale jewelry|wholesale jerseys