ಕಾಣಬಹುದು ಹೇಗೆ ನಿನ್ನ?

ಕಾಣಬಹುದು ಹೇಗೆ ನಿನ್ನ ಕರೆಯಬಹುದು ಹೇಗೆ!
ಯಾವ ಎಲ್ಲೆ ಇರದ ನಿನ್ನ ಅರಿಯಬಹುದು ಹೇಗೆ?
ಹಗಲು ನಗಲು ಬೆಳಕ ಚೆಲ್ಲಿ ದೃಷ್ಟಿ ಕೊಡುವ ದಿವ್ಯವೇ
ಇರುಳಿನಲ್ಲಿ ನೀಲನಭದಿ ದೀಪವುರಿವ ಕರುಣೆಯೇ
ಮಳೆ ಬಿಸಿಲಿನ, ಹೊಳೆ ಉಸಿರಿನ ಪಾದದಲ್ಲಿ ಚಲಿಸಿ
ಉದಯಾಸ್ತದ ಹೊನ್ನ ಬಣ್ಣದಲ್ಲಿ ಪುಟಿವ ಭಾಗ್ಯವೇ

ಬಿತ್ತ ಸೀಳಿ ಮರದೆತ್ತರವಾಗಿ ನಿಲುವ ಶಕ್ತಿಯೇ
ಬರಿಕೊಂಬೆಯೆ ಹೂಚಿಗುರಲಿ ಮುಚ್ಚುವಂಥ ಯುಕ್ತಿಯೇ
ಬೀಜದಿಂದ ಹಣ್ಣು ತೆಗೆದು ಹಣ್ಣಿನಲ್ಲಿ ಬೀಜ ಹುಗಿದು
ಸೃಷ್ಟಿಯ ಸಂತತಿ ಕಾಯುವ ಮ್ಯತ್ಯುಂಜಯ ಸತ್ಯವೇ

ಎದೆಯಲೆಲ್ಲೊ ಹೊಳೆವೆ, ತುಟಿಯ ತುದಿಗೆಬರದೆ ನಿಲುವೆ
ಬಳಿಯೆ ನಿಂತು ಸಿಗದೆ ನನ್ನ ಹಂಗಿಸುತ್ತ ನಗುವೆ
ನಿನ್ನ ಹೊರತು ಬಾಳೆಲ್ಲವು ಬೀಳು ಎಂದೆನಿಸುವೆ
ಜೀವನದೀ ನಿಡುಯಾತ್ರೆಗೆ ಅಂತಿಮಗುರಿ ಎನಿಸಿಹೆ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಿಂಚುಳ್ಳಿ ಬೆಳಕಿಂಡಿ – ೨೧
Next post ದಾರಿಯಾವುದಯ್ಯಾ ಮುಂದೆ?

ಸಣ್ಣ ಕತೆ

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…

  • ಅಪರೂಪದ ಬಾಂಧವ್ಯ

    ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…

  • ಮಿಂಚಿನ ದೀಪ

    ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…

  • ಕನಸುಗಳಿಗೆ ದಡಗಳಿರುದಿಲ್ಲ

    ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…