ಕಾಣಬಹುದು ಹೇಗೆ ನಿನ್ನ?

ಕಾಣಬಹುದು ಹೇಗೆ ನಿನ್ನ ಕರೆಯಬಹುದು ಹೇಗೆ!
ಯಾವ ಎಲ್ಲೆ ಇರದ ನಿನ್ನ ಅರಿಯಬಹುದು ಹೇಗೆ?
ಹಗಲು ನಗಲು ಬೆಳಕ ಚೆಲ್ಲಿ ದೃಷ್ಟಿ ಕೊಡುವ ದಿವ್ಯವೇ
ಇರುಳಿನಲ್ಲಿ ನೀಲನಭದಿ ದೀಪವುರಿವ ಕರುಣೆಯೇ
ಮಳೆ ಬಿಸಿಲಿನ, ಹೊಳೆ ಉಸಿರಿನ ಪಾದದಲ್ಲಿ ಚಲಿಸಿ
ಉದಯಾಸ್ತದ ಹೊನ್ನ ಬಣ್ಣದಲ್ಲಿ ಪುಟಿವ ಭಾಗ್ಯವೇ

ಬಿತ್ತ ಸೀಳಿ ಮರದೆತ್ತರವಾಗಿ ನಿಲುವ ಶಕ್ತಿಯೇ
ಬರಿಕೊಂಬೆಯೆ ಹೂಚಿಗುರಲಿ ಮುಚ್ಚುವಂಥ ಯುಕ್ತಿಯೇ
ಬೀಜದಿಂದ ಹಣ್ಣು ತೆಗೆದು ಹಣ್ಣಿನಲ್ಲಿ ಬೀಜ ಹುಗಿದು
ಸೃಷ್ಟಿಯ ಸಂತತಿ ಕಾಯುವ ಮ್ಯತ್ಯುಂಜಯ ಸತ್ಯವೇ

ಎದೆಯಲೆಲ್ಲೊ ಹೊಳೆವೆ, ತುಟಿಯ ತುದಿಗೆಬರದೆ ನಿಲುವೆ
ಬಳಿಯೆ ನಿಂತು ಸಿಗದೆ ನನ್ನ ಹಂಗಿಸುತ್ತ ನಗುವೆ
ನಿನ್ನ ಹೊರತು ಬಾಳೆಲ್ಲವು ಬೀಳು ಎಂದೆನಿಸುವೆ
ಜೀವನದೀ ನಿಡುಯಾತ್ರೆಗೆ ಅಂತಿಮಗುರಿ ಎನಿಸಿಹೆ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಿಂಚುಳ್ಳಿ ಬೆಳಕಿಂಡಿ – ೨೧
Next post ದಾರಿಯಾವುದಯ್ಯಾ ಮುಂದೆ?

ಸಣ್ಣ ಕತೆ

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…

  • ಮಿಂಚಿನ ದೀಪ

    ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…

  • ಪಾಠ

    ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…

cheap jordans|wholesale air max|wholesale jordans|wholesale jewelry|wholesale jerseys