ಮರಣಕ್ಕೆ ಒಳಗಾಗೊ ನರಕುರಿಗಳೆ

ಮರಣಕ್ಕೆ ಒಳಗಾಗೊ ನರಕುರಿಗಳೆ
ಅರುವಿರಲಿ ಸಾರವೆ ಕೇಳಿರಿ ||ಪ||

ಮರೆಯದೆ ಶ್ರೀಗುರುಮಂತ್ರ ಬರದೋದಿ ಜಪಿಸುತ
ಸ್ಮರಣೆದಪ್ಪಲಾಗದಲೆ ತಕ್ಕೊಳ್ಳಿರಿ ||೧||

ದೇಹದೊಳಗೆ ಇದ್ದು ಮಾಯೆ ನೋವಿಗೆ ಬಿದ್ದು
ಸಾವಿಗಂಜುತ ಬಾಯಿಬಿಡಬೇಡಿರಿ ಆಯತೀರದ ಮುನ್ನ
ಜೀವಪರಮರೊಂದು ಠಾವು ಕೂಡಿಸಿ ದೇವರೊಡಗೂಡಿ ||೨||

ಹಸು ತೃಷೆ ವಿಷಯ ವ್ಯಸನ ಮಾಡುವ ಮನದ
ಕಸುರು ಕಳೆದು ಕಾಮದೂಡಿರಿ ||೩||

ವಸುಧಯೊಳು ಶಿಶುನಾಳಧೀಶನೇ ಗತಿಯೊಂದು
ತಾಮಸವಳಿದು ಹಸನಾಗಿ ಹಾಡಿರಿ ||೪||

*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಎದೆ ಹಾಲು ನೀಡಿರಮ್ಮ
Next post ಝೇಂಕಾರ ಪಲ್ಲವಿ

ಸಣ್ಣ ಕತೆ

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…

  • ಕಳ್ಳನ ಹೃದಯಸ್ಪಂದನ

    ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…

  • ಹೃದಯ ವೀಣೆ ಮಿಡಿಯೆ….

    ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…