ಬಾ ಸೌಭಾಗ್ಯವೆ ದಯಮಾಡು

ಬಾ ಸೌಭಾಗ್ಯವೆ ದಯಮಾಡು
ಭಯಗಳ ದೂಡಿ ಮುದ ನೀಡು,
ಒಡಲನು ಹೊರೆಯುವ ಭರದಲಿ ನಿನ್ನ
ಮರೆತವನೆದೆಯಲಿ ಸ್ವರ ಹೂಡು,

ಬಾಡದ ರೂಪವೆ ಬಳಿಸಾರು,
ಹಾಡುವ ಗೀತವ ದನಿಯೇರು,
ಕಾಣದೆ ಎಲ್ಲೋ ಮರೆಯಲಿ ನಿಂತು
ಕಾಡುವ ಗುಟ್ಟೇ ಜೊತೆಗೂಡು

ಮುಟ್ಟದ ಮೈಯೇ ಮುಖ ತೋರು
ಕಟ್ಟಿಲ್ಲದ ಬೆರಗೇ ಮಾತಾಡು,
ಹುಟ್ಟಿನ ಸಾವಿನ ಮಣಿಯಲಿ ಹಾಯುವ
ಸೃಷ್ಟಿಯ ಸೂತ್ರವೆ ಕೃಪೆ ತೋರು

ಬತ್ತಿದ ಬಾಳಿಗೆ ಮಳೆ ಹಾಡು
ಚಿತ್ತದಾಳದಲಿ ಮನೆಮಾಡು
ಕತ್ತಲೆಯಾಡದ ಮಾತೊಳು ಮಿಂಚಿ
ಸತ್ಯವೆ ನಿನ್ನ ನಿಜ ತೋರು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಿಂಚುಳ್ಳಿ ಬೆಳಕಿಂಡಿ – ೨೬
Next post ಚೇತನ

ಸಣ್ಣ ಕತೆ

  • ಬೂಬೂನ ಬಾಳು

    ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…

  • ಮಲ್ಲೇಶಿಯ ನಲ್ಲೆಯರು

    ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…

  • ಕಳಕೊಂಡವನು

    ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…

  • ಶಾಕಿಂಗ್ ಪ್ರೇಮ ಪ್ರಕರಣ

    ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…