ಹೊತ್ತವರಾರೀ ಸೃಷ್ಟಿಯ ಭಾರ?

ಹೊತ್ತವರಾರೀ ಸೃಷ್ಟಿಯ ಭಾರ,
ಎಳೆಯುವರಾರೀ ವಿಶ್ವದ ತೇರ,
ಯಾವುದು ಕಾಣದೆ ಕುಣಿಸುವ ದಾರ?
ಯಾರದು ಈ ಹುನ್ನಾರ?
ಯಾರೋ ಜಗಕಾಧಾರ?

ತಣ್ಣಗೆ ಬೀಸುವ ಗಾಳಿಯ ಮೇಲೆ
ಬಣ್ಣದ ಹಗಲಿನ ಬೆಳಕಿನ ಮೇಲೆ
ಸುಮ್ಮನೆ ಓಡುವ ತೊರೆಗಳ ಮೇಲೆ
ಯಾರದು ಅಧಿಕಾರ?
ಯಾರದು ಅಧಿಕಾರ?

ಯಾರು ನೇಯ್ದರೋ ಹಸಿರಿನ ಶಾಲು?
ರೆಂಬೆ ರೆಂಬೆಯೂ ಬಣ್ಣದ ಕೋಲು;
ಇರುಳಿಗೆ ಹರಿಸಲು ಹುಣ್ಣಿಮೆ ಹಾಲು
ಯಾರಿಗೆ ಅಧಿಕಾರ?
ಅದಾರಿಗೆ ಅಧಿಕಾರ?

ಕಡಲು ಬರೆಯುತಿದೆ ಮುಗಿಲಿನ ಕವನ,
ತೇಲುವ ಮುಗಿಲೋ ಬಣ್ಣದ ಭವನ,
ಯಾರ ಆಜ್ಞೆ ಈ ಸೃಷ್ಟಿಯ ಚಲನ?
ಯಾರದು ಹುನ್ನಾರ? ಇದೆಲ್ಲ
ಯಾರ ಕಾರಭಾರ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಿಂಚುಳ್ಳಿ ಬೆಳಕಿಂಡಿ – ೨೮
Next post ಒಡೆದ ಗುಮ್ಮಟದ ತುಂಬಾ

ಸಣ್ಣ ಕತೆ

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

cheap jordans|wholesale air max|wholesale jordans|wholesale jewelry|wholesale jerseys