ಹೊತ್ತವರಾರೀ ಸೃಷ್ಟಿಯ ಭಾರ?

ಹೊತ್ತವರಾರೀ ಸೃಷ್ಟಿಯ ಭಾರ,
ಎಳೆಯುವರಾರೀ ವಿಶ್ವದ ತೇರ,
ಯಾವುದು ಕಾಣದೆ ಕುಣಿಸುವ ದಾರ?
ಯಾರದು ಈ ಹುನ್ನಾರ?
ಯಾರೋ ಜಗಕಾಧಾರ?

ತಣ್ಣಗೆ ಬೀಸುವ ಗಾಳಿಯ ಮೇಲೆ
ಬಣ್ಣದ ಹಗಲಿನ ಬೆಳಕಿನ ಮೇಲೆ
ಸುಮ್ಮನೆ ಓಡುವ ತೊರೆಗಳ ಮೇಲೆ
ಯಾರದು ಅಧಿಕಾರ?
ಯಾರದು ಅಧಿಕಾರ?

ಯಾರು ನೇಯ್ದರೋ ಹಸಿರಿನ ಶಾಲು?
ರೆಂಬೆ ರೆಂಬೆಯೂ ಬಣ್ಣದ ಕೋಲು;
ಇರುಳಿಗೆ ಹರಿಸಲು ಹುಣ್ಣಿಮೆ ಹಾಲು
ಯಾರಿಗೆ ಅಧಿಕಾರ?
ಅದಾರಿಗೆ ಅಧಿಕಾರ?

ಕಡಲು ಬರೆಯುತಿದೆ ಮುಗಿಲಿನ ಕವನ,
ತೇಲುವ ಮುಗಿಲೋ ಬಣ್ಣದ ಭವನ,
ಯಾರ ಆಜ್ಞೆ ಈ ಸೃಷ್ಟಿಯ ಚಲನ?
ಯಾರದು ಹುನ್ನಾರ? ಇದೆಲ್ಲ
ಯಾರ ಕಾರಭಾರ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಿಂಚುಳ್ಳಿ ಬೆಳಕಿಂಡಿ – ೨೮
Next post ಒಡೆದ ಗುಮ್ಮಟದ ತುಂಬಾ

ಸಣ್ಣ ಕತೆ

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

  • ಜುಡಾಸ್

    "ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…

  • ಜಡ

    ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ… Read more…

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…