Home / ಕವನ / ಕವಿತೆ / ಒಳಗೆ ಇಳಿದು ಬಾ

ಒಳಗೆ ಇಳಿದು ಬಾ

ಒಳಗೆ ಇಳಿದು ಬಾ ಇಳಿಯುವಂತೆ ನೀ
ಮಳೆಯು ಮಣ್ಣ ತಳಕೆ

ಕೆಸರ ಮಡಿಲಿಂದ ಕೆಂಪನೆ ಕಮಲವ
ಮೇಲೆತ್ತುವ ಘನವೇ
ಹೂವಿನ ಎದೆಯಲಿ ಬಗೆಬಗೆ ಪರಿಮಳ
ಬಿತ್ತುವಂಥ ಮನವೇ
ನಿಂತ ಗಿರಿಗಳಿಗೆ ನಡೆಯುವ ನದಿಗಳ
ಕರುಣಿಸುವಾ ಒಲವೇ
ಆನೆ ಅಳಿಲುಗಳ ಅಂತರವೆಣಿಸದೆ
ತಾಳುವಂಥ ನೆಲವೇ

ಸೂರ್ಯಚಂದ್ರರನು ಸರದಿ ಕಾವಲಿಗೆ
ನೇಮಿಸಿದಾ ಧಣಿಯೇ
ನೀಲಿನಭದಲ್ಲಿ ನಿತ್ಯವು ಜ್ವಲಿಸುವ
ನಕ್ಷತ್ರದ ಗಣಿಯೇ
ಗಾಳಿಯ ಕರೆಸಿ ಮೋಡದ ಮುಚ್ಚಳ
ತೆರೆದು ಸರಿವ ಕರವೇ
ಬಾನಿನ ತುಂಬ ಬೆಳಕಿನ ಕವಿತೆಯ
ಹಾಡುವಂಥ ಕೊರಳೇ!

ತರ್ಕಬುದ್ಧಿಗಳ ಬಲೆಯ ಜಾಲಕ್ಕೆ
ಸಿಕ್ಕದ ಧೋರಣೆಯೇ
ಭಾವನೆಯಲ್ಲಿ ಮಿಂಚಿ ಮೈದೋರಿ
ಹರಿಯುವ ಪ್ರೇರಣೆಯೇ
ವಿಶ್ಚಕ್ಕೇ ಪ್ರಭುವಾಗಿಯು ಪೀಠವ
ಬಯಸದಂಥ ನಿಲುವೇ
ಸ್ನೇಹ ಕರುಣೆ ವಾತ್ಸಲ್ಯ ಗಂಗೆಗೆ
ತವರೆನಿಸಿದ ಒಲವೇ!
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...