ಕಾಣುವುದೊಂದೇ ನಿಜವೇನು?

ಕಾಣುವುದೊಂದೇ ನಿಜವೇನು
ಕಣ್ಣಿನಾಚೆಯದು ಸುಳ್ಳೇನು?
ಕರಣವ ಮೀರಿ ಹರಣಕೆ ಹಾಯುವ
ಸತ್ವವೆ ಸೋಜಿಗ ಅಲ್ಲೇನು?

ಕಣ್ಣಿಗೆ ಹಾಯದ ಕಿರಣ ಇವೆ
ಕಿವಿಗೂ ಮೀರಿದ ದನಿಗಳಿವೆ,
ಕಂಡರು ಏನು ಕಾಮನ ಬಿಲ್ಲು
ಸುಳ್ಳು ಎನ್ನುವುದು ತಿಳಿದೆ ಇದೆ,

ಬುದ್ಧಿಯೆ ಅರಿವಿನ ಒರೆಯಲ್ಲ,
ಅರಿವಿಗೆಲ್ಲ ನಿಲುಕುವುದಿಲ್ಲ,
ಸೃಷ್ಟಿಯ ಗೂಢವ ಅಳೆಯುವ ಕೋಲು
ನಮ್ಮ ಇಂದ್ರಿಯದ ಮಿತಿಯಲ್ಲ.

ಬರಿಯ ದೇಹದ ಉಪಕರಣ
ಅದರಾಚೆಗೆ ಕಾಣದು ಕರಣ,
ಕನಸು ಮನಸುಗಳ ಕುಣಿತವ ನಿಲಿಸುವ
ಧ್ಯಾನಕೆ ಮಿಂಚುವ ಸತ್ಯ ಘನ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಿಂಚುಳ್ಳಿ ಬೆಳಕಿಂಡಿ – ೩೨
Next post ಇನಿಯಳಿಗೊಂದು ಕೊನೆಯ ಪತ್ರ !

ಸಣ್ಣ ಕತೆ

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…

  • ಕಳಕೊಂಡವನು

    ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

cheap jordans|wholesale air max|wholesale jordans|wholesale jewelry|wholesale jerseys