ಏಕೆ ಹೀಗೆ ಬೀಸುತ್ತಿರಬೇಕು ಗಾಳಿ?

ಏಕೆ ಹೀಗೆ ಬೀಸುತ್ತಿರಬೇಕು ಗಾಳಿ
ಏಕೆ ಕಡಲು ದಡ ಮೀರದೆ ನಿಂತಿದೆ ತಾಳಿ,
ನೆಲಕೆ ಏಕೆ ಮಳೆ ಹೂಡಲೆಬೇಕು ದಾಳಿ
ನಗುವ ಏಕೆ ಯಮ ಜೀವಗಳೆಲ್ಲವ ಹೂಳಿ?

ಹೇಗೆ ಚಿಮ್ಮುವುದು ಬೋಳು ಗಿಡದಿಂದ ಹಸಿರು
ಹೇಗೆ ಸೇರುವುದು ದೇಹ ದೇಹದಲಿ ಉಸಿರು?
ಯಾವುದು ಈ ವಿಶ್ಚವನೇ ಪೊರೆಯುವ ಬಸಿರು
ಚಿಕ್ಕ ಸಾಲಿನಲಿ ಹೊಳೆಯುವುದದಾರ ಹೆಸರು?

ಯಾರು ಕರೆಸುವರು ತಪ್ಪದೆ ಪ್ರತಿದಿನ ಸೂರ್ಯನ
ಯಾರು ಕಳಿಸುವರು ಬಾನಿಗೆ ಹುಣ್ಣಿಮೆ ಚಂದ್ರನ?
ಫಳ ಫಳ ಹೊಳೆಯುವ ತಾರೆಗೆ ಯಾರೋ ಕಾರಣ
ಬುಗುರಿ ಆಡಿಸುವರಾರೋ ಭೂಮಿಯ ದಿನ ದಿನ?

ಅದನು ಕಾಣುವಾ ಆಮಿಷ ಕಾಡಲಿ ಕಣ್ಣನು
ಅದನು ಕಾಣುವಾ ಆಸೆಯು ಕವಿಯಲಿ ಕಿವಿಯನು
ಅದನು ಅರಿಯುವಾ ಬಯಕೆಯು ಬರೆಸಲಿ ಹಾಡನು
ಅದರೊಳು ಬೆರೆಯುವ ಹುಚ್ಚಿಗೆ ತಿನಿಸುವ ಬಾಳನು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಿಂಚುಳ್ಳಿ ಬೆಳಕಿಂಡಿ – ೩೪
Next post ಅಮ್ಮ ಸುಟ್ಟ ರೊಟ್ಟಿ

ಸಣ್ಣ ಕತೆ

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

cheap jordans|wholesale air max|wholesale jordans|wholesale jewelry|wholesale jerseys