ಬುದ್ಧಿ ಚಿತ್ತ ಹಮ್ಮುಗಳೇ

ಬುದ್ಧಿ ಚಿತ್ತ ಹಮ್ಮುಗಳೇ, ವಿಷಯೇಂದ್ರಿಯ ಬಿಮ್ಮುಗಳೇ
ನನ್ನ ಹೊತ್ತು ಗಾಳಿಯಲ್ಲಿ ಜಿಗಿದೋಡುವ ಗುಮ್ಮಗಳೇ!
ಓಡಬೇಡಿ ಕೆಡವಬೇಡಿ ಅಶ್ವಗಳೇ ನನ್ನನು
ಎಸೆಯಬಹುದೆ ಕೊರಕಲಲ್ಲಿ ರಥದಿ ಕುಳಿತ ದೊರೆಯನು?

ಸಾವಧಾನ ಎಳೆದು ಸಾಗಿ ಹೊಣೆಯನರಿತು ರಥವನು
ವಶವಾಗದೆ ಸವಿಯಬೇಕು ದಾರಿಬದಿಯ ಚೆಲುವನು
ಪ್ರೀತಿಸಿಯೂ ಅಣ್ಣ ತಮ್ಮ ಹೆತ್ತು ಹೊತ್ತ ತಾಯಿಯ
ಬಲಿಯಾಗದೆ ಅರಿಯಬೇಕು ಮಾಟಗಾತಿ ಮಾಯೆಯ

ಎಂಥ ಲೋಕ, ಏನು ಚೆಲುವು, ಯಾರದು ಈ ಸೃಷ್ಟಿಯು
ಎದುರು ಬಾರನೇಕೆ ಇದನು ರೂಪಿಸಿದಾ ಸ್ವಾಮಿಯು?
ಹೀಗೆ ನಮ್ಮ ಸೆಳೆವುದೇಕೆ, ಮೋಹದಲ್ಲಿ ಹಿಡಿವುದೇಕೆ
ಗೆಲ್ಲು ಇದನು ಎನುವುದೇಕೆ, ಏನು ಅವನ ಲೀಲೆಯು?

ಗಡಿಗೆಯೊಳಗೆ ಸೆರೆಯಾದ ನೀರಿನಂತೆ ನಾನು
ಹೊರಗೆ ಹರಿದು ಸೇರಬೇಕು ಜನ್ಮವಿತ್ತ ಕಡಲನು,
ಇಲ್ಲಿ ಇರುವ ತನಕ ಎಲ್ಲ ಲೋಕ ನಿಯಮ ನಡೆಸಿ
ಮಿತಿಯಳಿದ ಅನಂತನಾಗಬೇಕು ಕಡೆಗೆ ನಾನು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಿಂಚುಳ್ಳಿ ಬೆಳಕಿಂಡಿ – ೩೫
Next post ಖಾಲಿ ಆಕಾಶದ ಮೌನ

ಸಣ್ಣ ಕತೆ

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

  • ಸ್ವಯಂಪ್ರಕಾಶ

    ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…

  • ಕನಸುಗಳಿಗೆ ದಡಗಳಿರುದಿಲ್ಲ

    ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…

  • ಪಾಠ

    ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…