ನನ್ನೀ ಬಾಳಿನ ಪೂಜಾ ಪಾತ್ರೆಯ

ನನ್ನೀ ಬಾಳಿನ ಪೂಜಾ ಪಾತ್ರೆಯ
ನಿನ್ನಡಿಗಿಡುವೆನು ದೇವ;
ಬರಿದಾಗಿರುವೀ ಪಾತ್ರೆಯ ತುಂಬಿ
ತುಳುಕಲಿ ಭಕ್ತಿಯ ಭಾವ

ದಾರಿ ತಿಳಿಯದೆ ಗುರಿಯನರಿಯದೆ
ಅಲ್ಲಸಲ್ಲದಕೆ ದುಡುಕಿ,
ತಂದು ತುಂಬಿದೆ ಮನದ ಬಿಂದಿಗೆ
ಕೊಳೆತ ಹಣ್ಣುಗಳ ಹುಡುಕಿ.

ಈಗ ತಿಳಿಯುತಿದೆ ಬೆಳಕು ಸುಳಿಯುತಿದೆ
ಮಾಡಿದ್ದೆಲ್ಲವು ವ್ಯರ್ಥ;
ಉರಿದು ಆರುವ, ಒಡನೆ ತೀರುವ
ಗಳಿಕೆಗೇನಿದೆ ಅರ್ಥ?

ನೆಲಸಿದೆ ನಿನ್ನ ಕಣ್ಣ ಕಾಂತಿಯಲಿ
ಸಕಲ ಜೀವಲೋಕ;
ಅಂಥ ನಿನ್ನನೇ ಮರೆತು ಬಾಳಿದೆನು
ಹಾಡಿದಂತೆ ಮೂಕ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಿಂಚುಳ್ಳಿ ಬೆಳಕಿಂಡಿ – ೩೯
Next post ಈ ಗುಬ್ಬಿಗಾರು ಜೊತೆ?

ಸಣ್ಣ ಕತೆ

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…

cheap jordans|wholesale air max|wholesale jordans|wholesale jewelry|wholesale jerseys