ಬಾನಿಂದೇನೋ ಇಳಿಯುತಿದೆ

ಬಾನಿಂದೇನೋ ಇಳಿಯುತಿದೆ
ಬುವಿಯೆದೆಯೊಳಕ್ಕೆ
ಕಲ್ಪನೆ ಏನನೊ ಸೇರಿಸಿದೆ
ಕಾಣುವ ದೃಶ್ಯಕ್ಕೆ

ನದಿಯೆದೆಯಲ್ಲಿ ಮುಗಿಲಿನ ಕವಿತೆ
ಹುಣ್ಣಿಮೆ ಇರುಳಲ್ಲಿ,
ಬಾನಿನ ಹಾಡು ಮೂಡಿತು ಹೇಗೆ
ಭೂಮಿಯ ಶ್ರುತಿಯಲ್ಲಿ?

ನೋಟಕೆ ಶ್ರವಣಕೆ ತಿಳಿಯದ ಏನೋ
ಕಾಡಿದೆ ಎದೆಯಲ್ಲಿ
ಹೊಂಬಿಸಿಲಾಡಿದ, ಹಾಡಿದ ಗಾಳಿ
ಬಣ್ಣದ ಪೊದೆಯಲ್ಲಿ

ಕಾಣದ ಲೋಕದ ಕಲ್ಪತರುವಿಗೆ
ಕನಸಿತೇಕೆ ಜೀವ?
ಇದೆಯೋ ಇಲ್ಲವೊ ನಂಬಿದ ಜೀವಕೆ
ಮಧುರ ಹಾವಭಾವ

ಮರೆಗೆ ನಿಂತರೂ ಅಗೋ ನೆರಳು
ಬೇರೇನು ಸಾಕ್ಷಿ ಬೇಕು?
ಹುಡುಕುವಾಟಕ್ಕೆ ಕೊನೆಯೇತಕ್ಕೆ
ಲೀಲೆಯಷ್ಟೆ ಸಾಕು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಿಂಚುಳ್ಳಿ ಬೆಳಕಿಂಡಿ – ೪೦
Next post ಪ್ರೀತಿಯೇ ಬೆಟ್ಟವಾದವನು

ಸಣ್ಣ ಕತೆ

  • ಹೃದಯ ವೀಣೆ ಮಿಡಿಯೆ….

    ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…

  • ಸ್ವಯಂಪ್ರಕಾಶ

    ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

cheap jordans|wholesale air max|wholesale jordans|wholesale jewelry|wholesale jerseys