ಮರವು ತೂಗಾಡಿದವು

ಮರವು ತೂಗಾಡಿದವು ಬಳ್ಳಿ ಓಲಾಡಿದವು
ಹೂವು ನಕ್ಕವು ಕುಲುಕಿ ಮೈಯನೆಲ್ಲ,
ಮಂದಮಾರುತ ಸುಳಿದು ಗಂಧವನು ಹಂಚಿದನು
ನೀ ಬಂದೆ ಎನ್ನುವುದು ತಿಳಿಯಲಿಲ್ಲ

ನದಿ ಹಾಡಿ ಓಡಿತು, ಬೆಳುದಿಂಗಳಾಡಿತು
ಮೆಚ್ಚಿ ಸವರಿತು ಬೆಳಕು ಮುಗಿಲ ಗಲ್ಲ,
ಮಣ್ಣ ಕಣ ಕಣವೂ ಚಿನ್ನವನು ಅಣಕಿಸಿತು
ನೀ ಬಂದೆ ಎನ್ನುವುದು ಹೊಳೆಯಲಿಲ್ಲ

ಗುಡ್ಡಗಳು ಅಡ್ಡ ಕೈ ಹಚ್ಚಿ ಮಾತಾಡಿದವು
ಪಿಸುಮಾತು ಏನೆಂದು ತಿಳಿಯಲಿಲ್ಲ,
ಹಕ್ಕಿಗಳು ಸುಖವುಕ್ಕಿ ದನಿಧಾರೆ ಹರಿಸಿದವು
ನೀ ಬಂದೆ ಎನ್ನುವುದು ಹೊಳೆಯಲಿಲ್ಲ

ಹೇಗೆ ಅದು ಹೊಳೆದೀತು, ಮೈಲಿಗೆಯ ಕಳೆದೀತು
ನಾನೆಂಬ ಹಮ್ಮಿನಲಿ ಮುಳುಗಿದವಗೆ?
ತನ್ನಾಚೆ ನಗುತಿರುವ ಸೃಷ್ಟಿಲೀಲೆಗಳಿರಲಿ
ತನ್ನಂತರಂಗವೇ ಸಿಗುವುದಿಲ್ಲ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಿಂಚುಳ್ಳಿ ಬೆಳಕಿಂಡಿ – ೪೬
Next post ಭೂಮಿ ಆಟದ ಮೈದಾನ

ಸಣ್ಣ ಕತೆ

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…

  • ಪ್ರೇಮನಗರಿಯಲ್ಲಿ ಮದುವೆ

    ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…