ನನ್ನ ಮನದಾಳಕ್ಕೆ

ನನ್ನ ಮನದಾಳಕ್ಕೆ ನೀನು ಇಳಿದುದೆ ಚಂದ
ಸುಳಿದಂತೆ ಮಲೆನಾಡ ಗಾಳಿ ಗಂಧ
ಎಳೆಗರಿಕೆ ಮೇಲೇಳುವಂತೆ ಸುಡು ನೆಲದಿಂದ
ಸಂಜೆ ಹಣ್ಣಾದಂತೆ ಬಾನ ತುಂಬ

ನೀ ಸುಳಿವ ಗಳಿಗೆ ಪ್ರೀತಿಯ ಹೊಳೆಗೆ ನೆರೆಬಂತು
ಬಣ್ಣ ಬದಲಾಗಿತ್ತು ಪೂರ ಇಳೆಗೆ
ಮಣ್ಣು ಹೊನ್ನಾಗಿತ್ತು, ಮೌನ ಹೂಬಿಡುತ್ತಿತ್ತು
ಕಣ್ಣಾಟವಾಡಿತ್ತು ಚಿಕ್ಕೆ ಜೊತೆಗೆ

ಜೀವ ಜಡ ಎನಿಸಿದ್ದ ಕೋಟಿ ಮಣಿಗಳು ಕೂಡಿ
ಸೂತ್ರದಲಿ ಮೂಡಿತ್ತು ದಿವ್ಯಮಾಲೆ
ಕಣ್ಣ ಶಾಪವು ಕಳೆದು ಕಂಗೊಳಿಪ ಶ್ರೀ ಮೂರ್ತಿ
ತಿಳಿಯಿತೋ ವಿಶ್ವವೇ ನಿನ್ನ ಲೀಲೆ

ಹಾಳೂರಿಗೊಬ್ಬ ಆಳುವ ಒಡೆಯ ಬಂದಂತೆ
ಬೀಳುಭೂಮಿಯ ಮಳೆಯು ವರಿಸಿದಂತೆ
ಗುಡಿಸಿ ಹಾಕಿದ ಮಾತು ಕವಿತೆಯಲಿ ಹೊಳೆದಂತೆ
ಹನಿಯ ಬದುಕಿಗೆ ಕಡಲ ಹಿರಿಮೆ ತಂದೆ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಿಂಚುಳ್ಳಿ ಬೆಳಕಿಂಡಿ – ೪೯
Next post ಸುಮ್ಮನಿದ್ದದ್ದು ಸಾಕು

ಸಣ್ಣ ಕತೆ

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

cheap jordans|wholesale air max|wholesale jordans|wholesale jewelry|wholesale jerseys