Home / ಕಥೆ / ಜನಪದ / ಹೂಂ ಅಂದರೆ ಒಂದೇ ಉಂಡಿ

ಹೂಂ ಅಂದರೆ ಒಂದೇ ಉಂಡಿ

ಚಿತ್ರ: ಸರಿನಾ
ಚಿತ್ರ: ಸರಿನಾ

ಗಂಡ ಹೆಂಡಿರಿಬ್ಬರು. ಒಂದುದಿನ ಹೆಂಡತಿ ಮಾಲಾದಿ ಮಾಡಿ ಮೂರು ಉಂಡಿ ಕಟ್ಟಿಟ್ಟಳು. “ಮಾಲಾದಿ ನಾ ಮಾಡೀನು. ಎರಡು ನನಗೆ ಒಂದು ನಿನಗ”
ಎಂದಳು ಹೆಂಡತಿ.

“ಇಲ್ಲ. ನಾ ಮಾಡಿಸಂದಾಂವ. ನನಗೆ ಎರಡು ಉಂಡಿ ನಿನಗೆ ಒಂದು ಉಂಡಿ” ಎಂದು ಗಂಡನವಾದ.

ಒಂದು ತಾಸು ಜಗಳಾಡಿದರು. ಯಾರೂ ಉಣ್ಣಲಿಲ್ಲ. ಕಡೆಯಲ್ಲಿ ಒಂದು ನಿರ್ಧಾರಕ್ಕೆ ಬಂದರು – “ಯಾರು ಹೂಂ ಅಂತಾರೊ ಅವರು ಒಂದು
ತಿನ್ನಬೇಕು. ಸುಮ್ಮನೆ ಮನಗಿದವರಿಗೆ ಎರಡು.”

ನಾಯಿ ಬಂದು ಮಾಲಾದಿ ತಿನ್ನ ಹತ್ತಿತು. ನಾಯಿಯನ್ನು ಹೊಡೆಯುವರಾರು? ಹೊಡೆದರೆ ಹೂಂ ಅನ್ನಬೇಕಾಗುತ್ತದೆ. ಹೂಂ ಅಂದವರಿಗೆ ಒಂದಽ ಉಂಡಿ. ಅದಕ್ಕಾಗಿ ಅವನೂ ಹೂಂ ಅನಲಿಲ್ಲ. ಅವಳೂ ಹೂಂ ಅನಲಿಲ್ಲ. ಹಾಗೇ ಮಲಗಿದರು.

ಹೊತ್ತು ಹೊರಟಿತು. ಸೂರ್ಯನು ಮಾರು ಮೇಲೆ ಏರಿ ಬಂದನು. ಅವರ ಮುಚ್ಚಿದ ತಟ್ಟಿ ಮುಚ್ಚಿದ ಹಾಗೆಯೇ ಇತ್ತು. ನೆರೆಹೊರೆಯವರು ತಟ್ಟಿ
ಬಡಿದರು. ಹೂಂ ಅನಲಿಲ್ಲ; ಹಾಂ ಅನಲಿಲ್ಲ. ನಾಲ್ಕು ಮಂದಿ ನೆರೆದರು. ತಟ್ಟಿ ಮುರಿದರು. ಒಳಗೆ ಹೊಕ್ಕರು. ಇಬ್ಬರಿಗೂ ಮಾತಾಡಿಸಿ ನೋಡಿದರು. ಅಗಳಾಡಿಸಿ ನೋಡಿದರು. ಮಿಸುಕಲೇ ಇಲ್ಲ ಯಾರೂ.

ಇಬ್ಬರೂ ಸತ್ತಿದ್ದಾರೆಂದು ನಿರ್ಧರಿಸಿ ಕುಳ್ಳುಕಟ್ಟಿಗೆಗಳನ್ನು ಹೊತ್ತೊಯ್ದು ಸುಡುಗಾಡಿನಲ್ಲಿ ಒಗೆದು ಬಂದರು. ಇಬ್ಬರನ್ನೂ ನಾಲ್ಕು ನಾಲ್ಕು ಜನ ಹೊತ್ತರು.
ಇಬ್ಬರೊಳಗಾರೂ ಹೂಂ ಅನಲಿಲ್ಲ. ಹೂಂ ಅಂದರೆ ಒಂದೇ ಉಂಡಿ ಅಲ್ಲವೇ?

ಕುಳ್ಳು ಕಟ್ಟಿಗೆಯ ತಾಳಿಯ ಮೇಲೆ ಹೆಣ ಒಗೆದರು. ಉರಿ ಹಚ್ಚಿದರು. ಚೌಕೀದಾರನನ್ನು ಅಲ್ಲಿ ನಿಲ್ಲಿಸಿ ಮಂದಿಯೆಲ್ಲ ತಂತಮ್ಮ ಮನೆಗೆ ಹೋದರು.
ಬೆಂಕಿ ಹೊತ್ತಿದಂತೆ ಮೈಯೆಲ್ಲ ಸುಡುತ್ತ ಬಂತು. ಇಬ್ಬರಲ್ಲಿ ಒಬ್ಬರೂ ಸೋಲಲಿಲ್ಲ. ಕಿರಿ ಬೆರಳೊಂದು ಛಟ್ ಎಂದು ಸಿಡಿದು ಬಂದು ಬಿತ್ತು. “ಥೂ ! ನೀನೇ ಎರಡು ಉಂಡಿ ತಿನ್ನು” ಎಂದನು ಗಂಡ. ಮೈಮೇಲಿನ ಬಟ್ಟೆಬರೆಗಳೆಲ್ಲ ಸುಟ್ಟಿದ್ದರಿಂದ ಇಬ್ಬರೂ ಬರಿ ಬತ್ತಲೆಯೇ ಜಿಗಿದು ಕಡೆಗೆ ಬಂದರು. “ದೆವ್ವ ಬಂದವೆಂದು ಚೌಕಿದಾರ ಓಡಿಹೋದನು.

ಊರ ಗೌಡನು ತನ್ನ ಅರಿವೆ ಒಗೆದು ತರಲಿಕ್ಕೆ ಅಗಸನಿಗೆ ಹೇಳಿದನು. ಆದರೆ ಅಗಸನು ಹಳ್ಳಕ್ಕೆ ಹೋಗಲು ಸಿದ್ದನಾಗಲಿಲ್ಲ. ಹಳ್ಳದ ದಂಡೆಯಲ್ಲಿಯೇ
ಸುಡುಗಾಡು ಇತ್ತು. ದೆವ್ವ ಬೆನ್ನುಹತ್ತುವವೆಂದು ಚೌಕಿದಾರನು ಉರಲ್ಲೆಲ್ಲ ಹೇಳಿದ್ದನು. ಗೌಡನು ಅಗಸನಿಗೆ ಒತ್ತಾಯದಿಂದ ಅರಿವೆಗಳನ್ನು ಕೊಟ್ಟು ತಾನೂ ಕುದುರೆ ಹತ್ತಿ ಬೆನ್ನ ಹಿಂದೆ ಹೋದನು. ಬಟ್ಟಿ ಒಗೆದು ದಡದಲ್ಲಿ ಒಣಹಾಕಲಾಯಿತು. ಆ ಬಟ್ಟೆಗಳನ್ನು ತೆಗೆದುಕೊಳ್ಳಲು ಇಬ್ಬರೂ ಆ ಗಂಡಹೆಂಡತಿ ಓಡುತ್ತ ಬಂದರು.

“ಅಯ್ಯಯ್ಯೋ ದೆವ್ವ ಹಿಡಿಯುತ್ತವೆ” ಎನ್ನುತ್ತ ಅಗಸ ಮತ್ತು ಗೌಡ ಇಬ್ಬರೂ ಓಡಿದರು. ಅಂದು ಆ ಗಂಡ ಹೆಂಡತಿ ಅಗಸನ ಬಟ್ಟೆ ಹಾಕಿಕೊಂಡು ಬಂದಂದಿನಿಂದ ಹಾರುವರು, ಲಮಾಣಿಗರಾದರಂತೆ.
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...