Home / ಕಥೆ / ಜನಪದ / ಹೂಂ ಅಂದರೆ ಒಂದೇ ಉಂಡಿ

ಹೂಂ ಅಂದರೆ ಒಂದೇ ಉಂಡಿ

ಚಿತ್ರ: ಸರಿನಾ
ಚಿತ್ರ: ಸರಿನಾ

ಗಂಡ ಹೆಂಡಿರಿಬ್ಬರು. ಒಂದುದಿನ ಹೆಂಡತಿ ಮಾಲಾದಿ ಮಾಡಿ ಮೂರು ಉಂಡಿ ಕಟ್ಟಿಟ್ಟಳು. “ಮಾಲಾದಿ ನಾ ಮಾಡೀನು. ಎರಡು ನನಗೆ ಒಂದು ನಿನಗ”
ಎಂದಳು ಹೆಂಡತಿ.

“ಇಲ್ಲ. ನಾ ಮಾಡಿಸಂದಾಂವ. ನನಗೆ ಎರಡು ಉಂಡಿ ನಿನಗೆ ಒಂದು ಉಂಡಿ” ಎಂದು ಗಂಡನವಾದ.

ಒಂದು ತಾಸು ಜಗಳಾಡಿದರು. ಯಾರೂ ಉಣ್ಣಲಿಲ್ಲ. ಕಡೆಯಲ್ಲಿ ಒಂದು ನಿರ್ಧಾರಕ್ಕೆ ಬಂದರು – “ಯಾರು ಹೂಂ ಅಂತಾರೊ ಅವರು ಒಂದು
ತಿನ್ನಬೇಕು. ಸುಮ್ಮನೆ ಮನಗಿದವರಿಗೆ ಎರಡು.”

ನಾಯಿ ಬಂದು ಮಾಲಾದಿ ತಿನ್ನ ಹತ್ತಿತು. ನಾಯಿಯನ್ನು ಹೊಡೆಯುವರಾರು? ಹೊಡೆದರೆ ಹೂಂ ಅನ್ನಬೇಕಾಗುತ್ತದೆ. ಹೂಂ ಅಂದವರಿಗೆ ಒಂದಽ ಉಂಡಿ. ಅದಕ್ಕಾಗಿ ಅವನೂ ಹೂಂ ಅನಲಿಲ್ಲ. ಅವಳೂ ಹೂಂ ಅನಲಿಲ್ಲ. ಹಾಗೇ ಮಲಗಿದರು.

ಹೊತ್ತು ಹೊರಟಿತು. ಸೂರ್ಯನು ಮಾರು ಮೇಲೆ ಏರಿ ಬಂದನು. ಅವರ ಮುಚ್ಚಿದ ತಟ್ಟಿ ಮುಚ್ಚಿದ ಹಾಗೆಯೇ ಇತ್ತು. ನೆರೆಹೊರೆಯವರು ತಟ್ಟಿ
ಬಡಿದರು. ಹೂಂ ಅನಲಿಲ್ಲ; ಹಾಂ ಅನಲಿಲ್ಲ. ನಾಲ್ಕು ಮಂದಿ ನೆರೆದರು. ತಟ್ಟಿ ಮುರಿದರು. ಒಳಗೆ ಹೊಕ್ಕರು. ಇಬ್ಬರಿಗೂ ಮಾತಾಡಿಸಿ ನೋಡಿದರು. ಅಗಳಾಡಿಸಿ ನೋಡಿದರು. ಮಿಸುಕಲೇ ಇಲ್ಲ ಯಾರೂ.

ಇಬ್ಬರೂ ಸತ್ತಿದ್ದಾರೆಂದು ನಿರ್ಧರಿಸಿ ಕುಳ್ಳುಕಟ್ಟಿಗೆಗಳನ್ನು ಹೊತ್ತೊಯ್ದು ಸುಡುಗಾಡಿನಲ್ಲಿ ಒಗೆದು ಬಂದರು. ಇಬ್ಬರನ್ನೂ ನಾಲ್ಕು ನಾಲ್ಕು ಜನ ಹೊತ್ತರು.
ಇಬ್ಬರೊಳಗಾರೂ ಹೂಂ ಅನಲಿಲ್ಲ. ಹೂಂ ಅಂದರೆ ಒಂದೇ ಉಂಡಿ ಅಲ್ಲವೇ?

ಕುಳ್ಳು ಕಟ್ಟಿಗೆಯ ತಾಳಿಯ ಮೇಲೆ ಹೆಣ ಒಗೆದರು. ಉರಿ ಹಚ್ಚಿದರು. ಚೌಕೀದಾರನನ್ನು ಅಲ್ಲಿ ನಿಲ್ಲಿಸಿ ಮಂದಿಯೆಲ್ಲ ತಂತಮ್ಮ ಮನೆಗೆ ಹೋದರು.
ಬೆಂಕಿ ಹೊತ್ತಿದಂತೆ ಮೈಯೆಲ್ಲ ಸುಡುತ್ತ ಬಂತು. ಇಬ್ಬರಲ್ಲಿ ಒಬ್ಬರೂ ಸೋಲಲಿಲ್ಲ. ಕಿರಿ ಬೆರಳೊಂದು ಛಟ್ ಎಂದು ಸಿಡಿದು ಬಂದು ಬಿತ್ತು. “ಥೂ ! ನೀನೇ ಎರಡು ಉಂಡಿ ತಿನ್ನು” ಎಂದನು ಗಂಡ. ಮೈಮೇಲಿನ ಬಟ್ಟೆಬರೆಗಳೆಲ್ಲ ಸುಟ್ಟಿದ್ದರಿಂದ ಇಬ್ಬರೂ ಬರಿ ಬತ್ತಲೆಯೇ ಜಿಗಿದು ಕಡೆಗೆ ಬಂದರು. “ದೆವ್ವ ಬಂದವೆಂದು ಚೌಕಿದಾರ ಓಡಿಹೋದನು.

ಊರ ಗೌಡನು ತನ್ನ ಅರಿವೆ ಒಗೆದು ತರಲಿಕ್ಕೆ ಅಗಸನಿಗೆ ಹೇಳಿದನು. ಆದರೆ ಅಗಸನು ಹಳ್ಳಕ್ಕೆ ಹೋಗಲು ಸಿದ್ದನಾಗಲಿಲ್ಲ. ಹಳ್ಳದ ದಂಡೆಯಲ್ಲಿಯೇ
ಸುಡುಗಾಡು ಇತ್ತು. ದೆವ್ವ ಬೆನ್ನುಹತ್ತುವವೆಂದು ಚೌಕಿದಾರನು ಉರಲ್ಲೆಲ್ಲ ಹೇಳಿದ್ದನು. ಗೌಡನು ಅಗಸನಿಗೆ ಒತ್ತಾಯದಿಂದ ಅರಿವೆಗಳನ್ನು ಕೊಟ್ಟು ತಾನೂ ಕುದುರೆ ಹತ್ತಿ ಬೆನ್ನ ಹಿಂದೆ ಹೋದನು. ಬಟ್ಟಿ ಒಗೆದು ದಡದಲ್ಲಿ ಒಣಹಾಕಲಾಯಿತು. ಆ ಬಟ್ಟೆಗಳನ್ನು ತೆಗೆದುಕೊಳ್ಳಲು ಇಬ್ಬರೂ ಆ ಗಂಡಹೆಂಡತಿ ಓಡುತ್ತ ಬಂದರು.

“ಅಯ್ಯಯ್ಯೋ ದೆವ್ವ ಹಿಡಿಯುತ್ತವೆ” ಎನ್ನುತ್ತ ಅಗಸ ಮತ್ತು ಗೌಡ ಇಬ್ಬರೂ ಓಡಿದರು. ಅಂದು ಆ ಗಂಡ ಹೆಂಡತಿ ಅಗಸನ ಬಟ್ಟೆ ಹಾಕಿಕೊಂಡು ಬಂದಂದಿನಿಂದ ಹಾರುವರು, ಲಮಾಣಿಗರಾದರಂತೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...