ಹೂಂ ಅಂದರೆ ಒಂದೇ ಉಂಡಿ

ಹೂಂ ಅಂದರೆ ಒಂದೇ ಉಂಡಿ

ಚಿತ್ರ: ಸರಿನಾ
ಚಿತ್ರ: ಸರಿನಾ

ಗಂಡ ಹೆಂಡಿರಿಬ್ಬರು. ಒಂದುದಿನ ಹೆಂಡತಿ ಮಾಲಾದಿ ಮಾಡಿ ಮೂರು ಉಂಡಿ ಕಟ್ಟಿಟ್ಟಳು. “ಮಾಲಾದಿ ನಾ ಮಾಡೀನು. ಎರಡು ನನಗೆ ಒಂದು ನಿನಗ”
ಎಂದಳು ಹೆಂಡತಿ.

“ಇಲ್ಲ. ನಾ ಮಾಡಿಸಂದಾಂವ. ನನಗೆ ಎರಡು ಉಂಡಿ ನಿನಗೆ ಒಂದು ಉಂಡಿ” ಎಂದು ಗಂಡನವಾದ.

ಒಂದು ತಾಸು ಜಗಳಾಡಿದರು. ಯಾರೂ ಉಣ್ಣಲಿಲ್ಲ. ಕಡೆಯಲ್ಲಿ ಒಂದು ನಿರ್ಧಾರಕ್ಕೆ ಬಂದರು – “ಯಾರು ಹೂಂ ಅಂತಾರೊ ಅವರು ಒಂದು
ತಿನ್ನಬೇಕು. ಸುಮ್ಮನೆ ಮನಗಿದವರಿಗೆ ಎರಡು.”

ನಾಯಿ ಬಂದು ಮಾಲಾದಿ ತಿನ್ನ ಹತ್ತಿತು. ನಾಯಿಯನ್ನು ಹೊಡೆಯುವರಾರು? ಹೊಡೆದರೆ ಹೂಂ ಅನ್ನಬೇಕಾಗುತ್ತದೆ. ಹೂಂ ಅಂದವರಿಗೆ ಒಂದಽ ಉಂಡಿ. ಅದಕ್ಕಾಗಿ ಅವನೂ ಹೂಂ ಅನಲಿಲ್ಲ. ಅವಳೂ ಹೂಂ ಅನಲಿಲ್ಲ. ಹಾಗೇ ಮಲಗಿದರು.

ಹೊತ್ತು ಹೊರಟಿತು. ಸೂರ್ಯನು ಮಾರು ಮೇಲೆ ಏರಿ ಬಂದನು. ಅವರ ಮುಚ್ಚಿದ ತಟ್ಟಿ ಮುಚ್ಚಿದ ಹಾಗೆಯೇ ಇತ್ತು. ನೆರೆಹೊರೆಯವರು ತಟ್ಟಿ
ಬಡಿದರು. ಹೂಂ ಅನಲಿಲ್ಲ; ಹಾಂ ಅನಲಿಲ್ಲ. ನಾಲ್ಕು ಮಂದಿ ನೆರೆದರು. ತಟ್ಟಿ ಮುರಿದರು. ಒಳಗೆ ಹೊಕ್ಕರು. ಇಬ್ಬರಿಗೂ ಮಾತಾಡಿಸಿ ನೋಡಿದರು. ಅಗಳಾಡಿಸಿ ನೋಡಿದರು. ಮಿಸುಕಲೇ ಇಲ್ಲ ಯಾರೂ.

ಇಬ್ಬರೂ ಸತ್ತಿದ್ದಾರೆಂದು ನಿರ್ಧರಿಸಿ ಕುಳ್ಳುಕಟ್ಟಿಗೆಗಳನ್ನು ಹೊತ್ತೊಯ್ದು ಸುಡುಗಾಡಿನಲ್ಲಿ ಒಗೆದು ಬಂದರು. ಇಬ್ಬರನ್ನೂ ನಾಲ್ಕು ನಾಲ್ಕು ಜನ ಹೊತ್ತರು.
ಇಬ್ಬರೊಳಗಾರೂ ಹೂಂ ಅನಲಿಲ್ಲ. ಹೂಂ ಅಂದರೆ ಒಂದೇ ಉಂಡಿ ಅಲ್ಲವೇ?

ಕುಳ್ಳು ಕಟ್ಟಿಗೆಯ ತಾಳಿಯ ಮೇಲೆ ಹೆಣ ಒಗೆದರು. ಉರಿ ಹಚ್ಚಿದರು. ಚೌಕೀದಾರನನ್ನು ಅಲ್ಲಿ ನಿಲ್ಲಿಸಿ ಮಂದಿಯೆಲ್ಲ ತಂತಮ್ಮ ಮನೆಗೆ ಹೋದರು.
ಬೆಂಕಿ ಹೊತ್ತಿದಂತೆ ಮೈಯೆಲ್ಲ ಸುಡುತ್ತ ಬಂತು. ಇಬ್ಬರಲ್ಲಿ ಒಬ್ಬರೂ ಸೋಲಲಿಲ್ಲ. ಕಿರಿ ಬೆರಳೊಂದು ಛಟ್ ಎಂದು ಸಿಡಿದು ಬಂದು ಬಿತ್ತು. “ಥೂ ! ನೀನೇ ಎರಡು ಉಂಡಿ ತಿನ್ನು” ಎಂದನು ಗಂಡ. ಮೈಮೇಲಿನ ಬಟ್ಟೆಬರೆಗಳೆಲ್ಲ ಸುಟ್ಟಿದ್ದರಿಂದ ಇಬ್ಬರೂ ಬರಿ ಬತ್ತಲೆಯೇ ಜಿಗಿದು ಕಡೆಗೆ ಬಂದರು. “ದೆವ್ವ ಬಂದವೆಂದು ಚೌಕಿದಾರ ಓಡಿಹೋದನು.

ಊರ ಗೌಡನು ತನ್ನ ಅರಿವೆ ಒಗೆದು ತರಲಿಕ್ಕೆ ಅಗಸನಿಗೆ ಹೇಳಿದನು. ಆದರೆ ಅಗಸನು ಹಳ್ಳಕ್ಕೆ ಹೋಗಲು ಸಿದ್ದನಾಗಲಿಲ್ಲ. ಹಳ್ಳದ ದಂಡೆಯಲ್ಲಿಯೇ
ಸುಡುಗಾಡು ಇತ್ತು. ದೆವ್ವ ಬೆನ್ನುಹತ್ತುವವೆಂದು ಚೌಕಿದಾರನು ಉರಲ್ಲೆಲ್ಲ ಹೇಳಿದ್ದನು. ಗೌಡನು ಅಗಸನಿಗೆ ಒತ್ತಾಯದಿಂದ ಅರಿವೆಗಳನ್ನು ಕೊಟ್ಟು ತಾನೂ ಕುದುರೆ ಹತ್ತಿ ಬೆನ್ನ ಹಿಂದೆ ಹೋದನು. ಬಟ್ಟಿ ಒಗೆದು ದಡದಲ್ಲಿ ಒಣಹಾಕಲಾಯಿತು. ಆ ಬಟ್ಟೆಗಳನ್ನು ತೆಗೆದುಕೊಳ್ಳಲು ಇಬ್ಬರೂ ಆ ಗಂಡಹೆಂಡತಿ ಓಡುತ್ತ ಬಂದರು.

“ಅಯ್ಯಯ್ಯೋ ದೆವ್ವ ಹಿಡಿಯುತ್ತವೆ” ಎನ್ನುತ್ತ ಅಗಸ ಮತ್ತು ಗೌಡ ಇಬ್ಬರೂ ಓಡಿದರು. ಅಂದು ಆ ಗಂಡ ಹೆಂಡತಿ ಅಗಸನ ಬಟ್ಟೆ ಹಾಕಿಕೊಂಡು ಬಂದಂದಿನಿಂದ ಹಾರುವರು, ಲಮಾಣಿಗರಾದರಂತೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸಮುದ್ರ
Next post ಮಿಂಚುಳ್ಳಿ ಬೆಳಕಿಂಡಿ – ೯

ಸಣ್ಣ ಕತೆ

  • ಮಲ್ಲೇಶಿಯ ನಲ್ಲೆಯರು

    ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…

  • ಹಳ್ಳಿ…

    ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿ‌ಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…

  • ಕಳಕೊಂಡವನು

    ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…

cheap jordans|wholesale air max|wholesale jordans|wholesale jewelry|wholesale jerseys