Home / ಕವನ / ಕವಿತೆ / ಜೇನು ನಾವು – ನೋವು ನಾವು…

ಜೇನು ನಾವು – ನೋವು ನಾವು…

ಜೇನು ನಾವು
ನೋವು ನಾವು
ಕೈಗೆ ಸಿಕ್ಕರೆ
ಒಸಗಿ ಹಾಕುವಿರೆಂಬಾ ಶಂಕೆ!
ಊದಿದಾ ಶಂಕು ಊದೂತ್ತಾ
ಗಿಳಿ ಪಾಠ ಒಪ್ಪಿಸುತ್ತಾ
ನಿತ್ಯ ಜಿಗಿ, ಜಿಗಿದು, ಕುಣಿ, ಕುಣಿದು, ಹಾರುತ್ತಾ
ಏಳು ಕೆರೆ, ನೀರು ಕುಡಿದು
ಹೂವಿಂದಾ ಹೂವಿಗೇ ಹಾರಿ,
ನಿಮ್ಮ ಕಾಲ ಬಳಿ ಸಾರಿ,
ಮಕರಂದಾ ಹೀರಿ
ಜೇಡರದೀ…
ಪರಿಶ್ರಮದಿ…
ನಮ್ಮೀ ಜೀವನ!


ನಿತ್ಯ ದುಡಿಮೆ ಸದಾ ನೆಮ್ಮದಿ!
ದುರಾಸೆ ದುರುಳರೆ,
ನಮ್ಮ ಹುಟ್ಟಿಗೆ
ಕಲ್ಲು ಹೊಡೆವ ತುಡುಗರೆ,
ಶತ ಶತಮಾನದ ಸಿಹಿ ಸವಿ,
ಬಯಸಿ, ಬೊಗಸೆಗಟ್ಟಲೆ
ಜೇನು ಹೀರಿ ಹೀರಿ…
ರುಚಿ ಹತ್ತಿಸಿಕೊಂಡು,
ತೆವಲು ಹತ್ತಿಸಿಕೊಂಡು,
ಬೆನ್ನು ಅಟ್ಟಿಸಿಕೊಂಡು,
ಎಲ್ಲಿ ಅಡಗಿ ಕುಳಿತರೂ ಬಿಡದೆ,
ಹೊಡೆದಿರಿ
ಬಡೆದಿರಿ
ಭೋಗಿಸಿದಿರಿ
ಬಿಲ್ಲಿನಂತೆ ಬಗ್ಗಿಸಿದಿರಿ.


ನಿಮ್ಮೀತಾತ ಮುತ್ತಾತರು
ತುಪ್ಪಕ್ಕಾಗಿ ನಮ್ಮ ತೊತ್ತಾಗಿಸಿ,
ಹಗಲಿರುಳು ಗೇಯಿಸಿಕೊಂಡು
ಕದ್ದು ಕದ್ದು ಕೇಯಿಸಿಕೊಂಡು,
ಕೊಬ್ಬಿದಾ ಕುಣಿಗಲ್ ಕುದುರೆಗಳು ಕೆನೆಯುತ್ತೀರಿ,
ಕತ್ತಿ ಮಸೆಯುತ್ತೀರಿ,
ಅಟ್ಟಹಾಸದಿ ಕಿಸೆಯುತ್ತೀರಿ!
ಹಸಿ ಹಸಿ ರಕ್ತ ಹೀರುತ್ತೀರಿ
ಹದದ ಚರ್‍ಮಾ ಸುಖಕ್ಕಾಗಿ
ಜೊಲ್ಲು ಸುರಿಸುತ್ತೀರಿ!
ನಮ್ಮ ಹುಟ್ಟು ನಿಮಗೆ
ಶತ ಶತಮಾನದ ಪರಿತಾಪ
ಜನ್ಮ ಜನ್ಮಾದ ಶಾಪ!
ನಿತ್ಯ ದೀಪ ಉರಿ ಉರಿದು
ಬೆಳಕ ತಾ ಸುಟ್ಟು ನೀಡುವಂತೆ,
ನಮ್ಮೀ ಸಿಹಿ ಸಿಹಿ ಸವಿ ನಿಮಗೆ
ಎಂದೂ ತಪ್ಪದ ತುಪ್ಪ ನಿಮಗೆ!


ಅಯ್ಯೋ! ಹೆಪ್ಪಿಟ್ಟಿತು ರಕ್ತ
ತೃಪ್ತಿ ಪಡಿಸಲು ನಾವೇ ಶಕ್ತ
ಇಷ್ಟಾದರೂ ಬಹಿಷ್ಕಾರ, ಕೊಲ್ಲುವುದು, ಏಕೆ?!
ಬೆಂಕಿಯಿಟ್ಟು ನಮ್ಮನು
ಹೊಗೆಯೆಬ್ಬಿಸಿ
ಒಕ್ಕಲೆಬ್ಬಿಸಿ
ದಿಕ್ಕಾಪಾಲಾಗಿಸಿದ್ದು ಸುಮ್ಮನೆ!
ನಿಮ್ಮ ವಕ್ರ ಬುದ್ಧಿ ಬಿಮ್ಮನೆ!!
ನಮ್ಮ ಪಾಲಿಗೆ, ಬರೀ ನೋವು
ಕಣ್ಣು ಕೆಂಡ ಸಂಪಿಗೆ, ನಿಗಿ ನಿಗಿ
ಕಡು ತಲೆ ತಾಪ, ಕೋಪ…


ಸಾಕು! ಸಾಕು… ನಿಮ್ಮೀ ಹುಚ್ಚು ಹುಚ್ಚಾಟ!
ಕೆರಳಿ ಸಿಂಹಾಗಿದ್ದೇವೆ-
ಖಂಡಿತ ನಾವೀಗ ಕಚ್ಚುವೆವು…
ಹುಚ್ಚರಂತೆ ನಿಮ್ಮ ಓಡಿಸದೆ ಬಿಡೆವು!!
ಇನ್ನಿಮ್ಮ ಹುಟ್ಟಾಡಗಿಸದೆ ಬಿಡೆವು.
ಎಚ್ಚರ…
ಬಲು ಎಚ್ಚರ…
*****
(ಸ್ಫೂರ್ತಿ: ೧೯೯೮ರಲ್ಲಿ ನನ್ನ ಕವಿಮಿತ್ರ, ಮೈಸೂರು ಲೋಕೇಶ್‌ನೊಂದಿಗೆ, ಯಾಣಕ್ಕೆ ಭೇಟಿ ಮಾಡಿದ ರಾತ್ರಿ, ತಂಗುದಾಣದಲ್ಲಿ ರಚಿಸಿ, ವಾಚಿಸಿದ ಕವಿತೆಯಿದು…)

Tagged:

Leave a Reply

Your email address will not be published. Required fields are marked *

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...