Home / ಕವನ / ಕವಿತೆ / ಜೇನು ನಾವು – ನೋವು ನಾವು…

ಜೇನು ನಾವು – ನೋವು ನಾವು…

ಜೇನು ನಾವು
ನೋವು ನಾವು
ಕೈಗೆ ಸಿಕ್ಕರೆ
ಒಸಗಿ ಹಾಕುವಿರೆಂಬಾ ಶಂಕೆ!
ಊದಿದಾ ಶಂಕು ಊದೂತ್ತಾ
ಗಿಳಿ ಪಾಠ ಒಪ್ಪಿಸುತ್ತಾ
ನಿತ್ಯ ಜಿಗಿ, ಜಿಗಿದು, ಕುಣಿ, ಕುಣಿದು, ಹಾರುತ್ತಾ
ಏಳು ಕೆರೆ, ನೀರು ಕುಡಿದು
ಹೂವಿಂದಾ ಹೂವಿಗೇ ಹಾರಿ,
ನಿಮ್ಮ ಕಾಲ ಬಳಿ ಸಾರಿ,
ಮಕರಂದಾ ಹೀರಿ
ಜೇಡರದೀ…
ಪರಿಶ್ರಮದಿ…
ನಮ್ಮೀ ಜೀವನ!


ನಿತ್ಯ ದುಡಿಮೆ ಸದಾ ನೆಮ್ಮದಿ!
ದುರಾಸೆ ದುರುಳರೆ,
ನಮ್ಮ ಹುಟ್ಟಿಗೆ
ಕಲ್ಲು ಹೊಡೆವ ತುಡುಗರೆ,
ಶತ ಶತಮಾನದ ಸಿಹಿ ಸವಿ,
ಬಯಸಿ, ಬೊಗಸೆಗಟ್ಟಲೆ
ಜೇನು ಹೀರಿ ಹೀರಿ…
ರುಚಿ ಹತ್ತಿಸಿಕೊಂಡು,
ತೆವಲು ಹತ್ತಿಸಿಕೊಂಡು,
ಬೆನ್ನು ಅಟ್ಟಿಸಿಕೊಂಡು,
ಎಲ್ಲಿ ಅಡಗಿ ಕುಳಿತರೂ ಬಿಡದೆ,
ಹೊಡೆದಿರಿ
ಬಡೆದಿರಿ
ಭೋಗಿಸಿದಿರಿ
ಬಿಲ್ಲಿನಂತೆ ಬಗ್ಗಿಸಿದಿರಿ.


ನಿಮ್ಮೀತಾತ ಮುತ್ತಾತರು
ತುಪ್ಪಕ್ಕಾಗಿ ನಮ್ಮ ತೊತ್ತಾಗಿಸಿ,
ಹಗಲಿರುಳು ಗೇಯಿಸಿಕೊಂಡು
ಕದ್ದು ಕದ್ದು ಕೇಯಿಸಿಕೊಂಡು,
ಕೊಬ್ಬಿದಾ ಕುಣಿಗಲ್ ಕುದುರೆಗಳು ಕೆನೆಯುತ್ತೀರಿ,
ಕತ್ತಿ ಮಸೆಯುತ್ತೀರಿ,
ಅಟ್ಟಹಾಸದಿ ಕಿಸೆಯುತ್ತೀರಿ!
ಹಸಿ ಹಸಿ ರಕ್ತ ಹೀರುತ್ತೀರಿ
ಹದದ ಚರ್‍ಮಾ ಸುಖಕ್ಕಾಗಿ
ಜೊಲ್ಲು ಸುರಿಸುತ್ತೀರಿ!
ನಮ್ಮ ಹುಟ್ಟು ನಿಮಗೆ
ಶತ ಶತಮಾನದ ಪರಿತಾಪ
ಜನ್ಮ ಜನ್ಮಾದ ಶಾಪ!
ನಿತ್ಯ ದೀಪ ಉರಿ ಉರಿದು
ಬೆಳಕ ತಾ ಸುಟ್ಟು ನೀಡುವಂತೆ,
ನಮ್ಮೀ ಸಿಹಿ ಸಿಹಿ ಸವಿ ನಿಮಗೆ
ಎಂದೂ ತಪ್ಪದ ತುಪ್ಪ ನಿಮಗೆ!


ಅಯ್ಯೋ! ಹೆಪ್ಪಿಟ್ಟಿತು ರಕ್ತ
ತೃಪ್ತಿ ಪಡಿಸಲು ನಾವೇ ಶಕ್ತ
ಇಷ್ಟಾದರೂ ಬಹಿಷ್ಕಾರ, ಕೊಲ್ಲುವುದು, ಏಕೆ?!
ಬೆಂಕಿಯಿಟ್ಟು ನಮ್ಮನು
ಹೊಗೆಯೆಬ್ಬಿಸಿ
ಒಕ್ಕಲೆಬ್ಬಿಸಿ
ದಿಕ್ಕಾಪಾಲಾಗಿಸಿದ್ದು ಸುಮ್ಮನೆ!
ನಿಮ್ಮ ವಕ್ರ ಬುದ್ಧಿ ಬಿಮ್ಮನೆ!!
ನಮ್ಮ ಪಾಲಿಗೆ, ಬರೀ ನೋವು
ಕಣ್ಣು ಕೆಂಡ ಸಂಪಿಗೆ, ನಿಗಿ ನಿಗಿ
ಕಡು ತಲೆ ತಾಪ, ಕೋಪ…


ಸಾಕು! ಸಾಕು… ನಿಮ್ಮೀ ಹುಚ್ಚು ಹುಚ್ಚಾಟ!
ಕೆರಳಿ ಸಿಂಹಾಗಿದ್ದೇವೆ-
ಖಂಡಿತ ನಾವೀಗ ಕಚ್ಚುವೆವು…
ಹುಚ್ಚರಂತೆ ನಿಮ್ಮ ಓಡಿಸದೆ ಬಿಡೆವು!!
ಇನ್ನಿಮ್ಮ ಹುಟ್ಟಾಡಗಿಸದೆ ಬಿಡೆವು.
ಎಚ್ಚರ…
ಬಲು ಎಚ್ಚರ…
*****
(ಸ್ಫೂರ್ತಿ: ೧೯೯೮ರಲ್ಲಿ ನನ್ನ ಕವಿಮಿತ್ರ, ಮೈಸೂರು ಲೋಕೇಶ್‌ನೊಂದಿಗೆ, ಯಾಣಕ್ಕೆ ಭೇಟಿ ಮಾಡಿದ ರಾತ್ರಿ, ತಂಗುದಾಣದಲ್ಲಿ ರಚಿಸಿ, ವಾಚಿಸಿದ ಕವಿತೆಯಿದು…)

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...