ಜೇನು ನಾವು – ನೋವು ನಾವು…

ಜೇನು ನಾವು
ನೋವು ನಾವು
ಕೈಗೆ ಸಿಕ್ಕರೆ
ಒಸಗಿ ಹಾಕುವಿರೆಂಬಾ ಶಂಕೆ!
ಊದಿದಾ ಶಂಕು ಊದೂತ್ತಾ
ಗಿಳಿ ಪಾಠ ಒಪ್ಪಿಸುತ್ತಾ
ನಿತ್ಯ ಜಿಗಿ, ಜಿಗಿದು, ಕುಣಿ, ಕುಣಿದು, ಹಾರುತ್ತಾ
ಏಳು ಕೆರೆ, ನೀರು ಕುಡಿದು
ಹೂವಿಂದಾ ಹೂವಿಗೇ ಹಾರಿ,
ನಿಮ್ಮ ಕಾಲ ಬಳಿ ಸಾರಿ,
ಮಕರಂದಾ ಹೀರಿ
ಜೇಡರದೀ…
ಪರಿಶ್ರಮದಿ…
ನಮ್ಮೀ ಜೀವನ!


ನಿತ್ಯ ದುಡಿಮೆ ಸದಾ ನೆಮ್ಮದಿ!
ದುರಾಸೆ ದುರುಳರೆ,
ನಮ್ಮ ಹುಟ್ಟಿಗೆ
ಕಲ್ಲು ಹೊಡೆವ ತುಡುಗರೆ,
ಶತ ಶತಮಾನದ ಸಿಹಿ ಸವಿ,
ಬಯಸಿ, ಬೊಗಸೆಗಟ್ಟಲೆ
ಜೇನು ಹೀರಿ ಹೀರಿ…
ರುಚಿ ಹತ್ತಿಸಿಕೊಂಡು,
ತೆವಲು ಹತ್ತಿಸಿಕೊಂಡು,
ಬೆನ್ನು ಅಟ್ಟಿಸಿಕೊಂಡು,
ಎಲ್ಲಿ ಅಡಗಿ ಕುಳಿತರೂ ಬಿಡದೆ,
ಹೊಡೆದಿರಿ
ಬಡೆದಿರಿ
ಭೋಗಿಸಿದಿರಿ
ಬಿಲ್ಲಿನಂತೆ ಬಗ್ಗಿಸಿದಿರಿ.


ನಿಮ್ಮೀತಾತ ಮುತ್ತಾತರು
ತುಪ್ಪಕ್ಕಾಗಿ ನಮ್ಮ ತೊತ್ತಾಗಿಸಿ,
ಹಗಲಿರುಳು ಗೇಯಿಸಿಕೊಂಡು
ಕದ್ದು ಕದ್ದು ಕೇಯಿಸಿಕೊಂಡು,
ಕೊಬ್ಬಿದಾ ಕುಣಿಗಲ್ ಕುದುರೆಗಳು ಕೆನೆಯುತ್ತೀರಿ,
ಕತ್ತಿ ಮಸೆಯುತ್ತೀರಿ,
ಅಟ್ಟಹಾಸದಿ ಕಿಸೆಯುತ್ತೀರಿ!
ಹಸಿ ಹಸಿ ರಕ್ತ ಹೀರುತ್ತೀರಿ
ಹದದ ಚರ್‍ಮಾ ಸುಖಕ್ಕಾಗಿ
ಜೊಲ್ಲು ಸುರಿಸುತ್ತೀರಿ!
ನಮ್ಮ ಹುಟ್ಟು ನಿಮಗೆ
ಶತ ಶತಮಾನದ ಪರಿತಾಪ
ಜನ್ಮ ಜನ್ಮಾದ ಶಾಪ!
ನಿತ್ಯ ದೀಪ ಉರಿ ಉರಿದು
ಬೆಳಕ ತಾ ಸುಟ್ಟು ನೀಡುವಂತೆ,
ನಮ್ಮೀ ಸಿಹಿ ಸಿಹಿ ಸವಿ ನಿಮಗೆ
ಎಂದೂ ತಪ್ಪದ ತುಪ್ಪ ನಿಮಗೆ!


ಅಯ್ಯೋ! ಹೆಪ್ಪಿಟ್ಟಿತು ರಕ್ತ
ತೃಪ್ತಿ ಪಡಿಸಲು ನಾವೇ ಶಕ್ತ
ಇಷ್ಟಾದರೂ ಬಹಿಷ್ಕಾರ, ಕೊಲ್ಲುವುದು, ಏಕೆ?!
ಬೆಂಕಿಯಿಟ್ಟು ನಮ್ಮನು
ಹೊಗೆಯೆಬ್ಬಿಸಿ
ಒಕ್ಕಲೆಬ್ಬಿಸಿ
ದಿಕ್ಕಾಪಾಲಾಗಿಸಿದ್ದು ಸುಮ್ಮನೆ!
ನಿಮ್ಮ ವಕ್ರ ಬುದ್ಧಿ ಬಿಮ್ಮನೆ!!
ನಮ್ಮ ಪಾಲಿಗೆ, ಬರೀ ನೋವು
ಕಣ್ಣು ಕೆಂಡ ಸಂಪಿಗೆ, ನಿಗಿ ನಿಗಿ
ಕಡು ತಲೆ ತಾಪ, ಕೋಪ…


ಸಾಕು! ಸಾಕು… ನಿಮ್ಮೀ ಹುಚ್ಚು ಹುಚ್ಚಾಟ!
ಕೆರಳಿ ಸಿಂಹಾಗಿದ್ದೇವೆ-
ಖಂಡಿತ ನಾವೀಗ ಕಚ್ಚುವೆವು…
ಹುಚ್ಚರಂತೆ ನಿಮ್ಮ ಓಡಿಸದೆ ಬಿಡೆವು!!
ಇನ್ನಿಮ್ಮ ಹುಟ್ಟಾಡಗಿಸದೆ ಬಿಡೆವು.
ಎಚ್ಚರ…
ಬಲು ಎಚ್ಚರ…
*****
(ಸ್ಫೂರ್ತಿ: ೧೯೯೮ರಲ್ಲಿ ನನ್ನ ಕವಿಮಿತ್ರ, ಮೈಸೂರು ಲೋಕೇಶ್‌ನೊಂದಿಗೆ, ಯಾಣಕ್ಕೆ ಭೇಟಿ ಮಾಡಿದ ರಾತ್ರಿ, ತಂಗುದಾಣದಲ್ಲಿ ರಚಿಸಿ, ವಾಚಿಸಿದ ಕವಿತೆಯಿದು…)

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮರ್ಯಾದೆ ಬೇಕೂ ಅಂದ್ರೆ
Next post ಪರಮ ಸುಖ

ಸಣ್ಣ ಕತೆ

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ನಾಗನ ವರಿಸಿದ ಬಿಂಬಾಲಿ…

    ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ… Read more…

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

  • ಇರುವುದೆಲ್ಲವ ಬಿಟ್ಟು

    ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…

cheap jordans|wholesale air max|wholesale jordans|wholesale jewelry|wholesale jerseys