ಒಂದು ದಿನ…

ಒಂದು ದಿನ… ಸಂಸ್ಥೆ ಬಸ್ಸುಗಳು ನಿಂತರೆ, ಏನಾಗಬಹುದು?
ಏನೆಲ್ಲ ಆಗಬಹುದು…
ಸಂಸ್ಥೆಗೆ ನಶ್ಟವಾಗಬಹುದು
ಪ್ರಯಾಣಿಕರಿಗೆ ಕಶ್ಟವಾಗಬಹುದು
ರಿಕ್ಷಾ, ಟೆಂಪೋ, ಮೆಟಡೋರ್‍, ಲಾರಿ, ಟ್ರಕ್ಕು, ಖಾಸಗಿ ಬಸ್ಸು…
ಎನೆಲ್ಲ ತುಂಬಿ, ಆ ದಿನದ, ಮೀಟರ್‍ ದರಗಳು,
ಮುಗಿಲು ಮುಟ್ಟಬಹುದು!
*

ಮತ್ತೇನಾಗಬಹುದು?
ಶಾಲೆ, ಕಾಲೇಜಿಗೆ, ಕುರುಡ, ಕುಂಟರಿಗೆ,
ಪತ್ರಿಕಾ ಪ್ರತಿನಿಧಿಗಳಿಗೆ, ಉಸಿರುಗಟ್ಟಿ
ವ್ಯಾಪಾರ, ವೈವಾಟು ತಲೆಕೆಳಗಾಗಿ,
ಸಾಮಾನ್ಯರ ಪಾಡು, ನರಕಯಾಥನೆಯಾಗಿ,
ಹಳ್ಳಿ ಹಳ್ಳಿಗಳೂ ದೂರ ಸರಿದು,
ಶಾಲೆ, ಕಾಲೇಜು, ಸಿನಿಮಾ, ನಾಟಕ, ನಾಡ ಕಛೇರಿಗಳೆಲ್ಲ…
ಒಣ ಒಣ! ಭಣ ಭಣಗುಟ್ಟಿ,
ಅಘೋಶಿತ ಬಂದ್ ನಿರ್ಮಾಣವಾಗಬಹುದು!
ಸೂರ್‍ಯ, ಚಂದ್ರ, ತಾರೆ, ಗ್ರಹಗಳೆಲ್ಲ ತ್ಯಾಪೆ ಮೊರೆಲಿ, ಮರೆಯಾಗಬಹುದು!
ಮುಪ್ಪಿನವರೂ ಒಪ್ಪದಲಿ, ನಡೆದೂ ಮನೆ ಸೇರಬಹುದು
ಅಂದು-ಟೀವಿ, ರೇಡಿಯೋ, ಪತ್ರಿಕೆಗಳಲ್ಲಿ ವಿಶೇಷ ಸುದ್ದಿಯೆನಿಸಿ,
ಜನ ಸೋಮಾರಿ ಕಟ್ಟೆ ಏರಿ,
ಜೊಂಪು ನಿದ್ದೆ ಸೇರಿ,
ಮೋಟು ಬೀಡಿಗೆ, ಹುಡುಕಾಡಬಹುದು!
*

ಮುಷ್ಕರದ ಬಿಸಿಗೆ; ಒಬ್ಬರ ಮೇಲೆ ಒಬ್ಬರು, ಬಿದ್ದು ಎದ್ದು,
ಇದ್ದುಬದ್ದುದ್ದನ್ನೆಲ್ಲ ಕಳಕೊಂಡು…
ಮುರುಕಲ ಗಾಡಿ, ಮನೆ ಮಾರು ಸೇರಲಿಬಹುದು.
ಗುಜರಿ ಸೈಕಲ್, ಬೈಕ್, ಕಾರು, ಜೀಪುಗಳೂ…
ಮರುಹುಟ್ಟು ಪಡೆದು, ಅಲ್ಲಲ್ಲಿ ಕೆಟ್ಟು ನಿಲ್ಲಬಹುದು!
ಖಾಸಗೆರಿಗೆ ಚೆಲ್ಲಾಟ,
ಪ್ರಯಾಣಿಕರಿಗೆ ಪ್ರಾಣ ಸಂಕಟವಾಗಿ,
ಗದ್ದುಗೆ ಹಿಡಿದವರಿಗೆ, ಕಂಟಕವಾಗಬಹುದು!
*

ಒಂದೇ ದಿನದಲಿ; ಖಾಸಗಿಕರಣ ಹಿಗ್ಗಿ ಹಿರೇಕಾಯಿಯಾಗಿ,
ಸಂಸ್ಥೆ ಮೇಲಿನ, ವಿಶ್ವಾಸ ಕುಗ್ಗಿ, ನರಸತ್ತ ನಾಮರ್ಧನನಂತೆ,
ಅದಲು ಬದಲು ಕಂಚೀ ಕದಲು, ಮಿಂಚಿನ ಮುಷ್ಕರದ ಜೊಂಪಿಗೇ
ರಸ್ತೆಗಳು ನಿಟ್ಟೂಸಿರ ಸೂಸಿ,
ನಿದ್ರೆಲ್ಲದೆ, ಮಗ್ಗುಲಿಗೆ ಮುಖವಿಟ್ಟು, ಮಲಗಬಹುದು!
*

ಒಂದು ದಿನ… ಸಂಸ್ಥೆ ಬಸ್ಸುಗಳು ನಿಂತರೆ…
ಏನೆಲ್ಲ ಆಗಬಹುದು?!
ಕಾಯಿಪಲ್ಲೆ, ಮಾರ್ಕೆಟ್ ರೇಟು, ರೇಸಿನಂತೆ
ರೈಜಾಗಿ, ಬಡಬಗ್ಗರ ಕನಸ್ಸುಗಳು ಬಿಕರಿಯಾಗಿ,
ಹುಬ್ಬಳ್ಳಿಯ… ಕಮರಿಪೇಟೆಯಾಗಬಹುದು!
*

ಸಂಸ್ಥೆ ಬಸ್ಸುಗಳು: ಒಂದು ದಿನ ನಿಂತರೆ,
ಇಶ್ಟೆಲ್ಲ ಆಗಬಹುದು!!
ಇದಕ್ಕಿಂತ ಮಿಗಿಲೂ ಆಗಬಹುದು
ಮುಗಿಲು ಕಳಚಿ ಬೀಳಲೂಬಹುದು
ಭೂಮಿ-ಆಕಾಶ ಒಂದಾಗಬಹುದು
ಜಲ ಬತ್ತಿ, ಬಡ ಕಾರ್ಮಿಕರು, ಬೀದಿ ಪಾಲಾಗಬಹುದು!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸಣ್ಣ ಮಕ್ಕಳು ಮಾತಾಡಿಕೊಂಡಿದ್ದು
Next post ಹಕ್ಕಿಗಳು

ಸಣ್ಣ ಕತೆ

  • ಒಲವೆ ನಮ್ಮ ಬದುಕು

    "The best of you is he who behaves best towards the members of his family" (The Holy Prophet) ವಾರದ ಸಂತೆ.… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

cheap jordans|wholesale air max|wholesale jordans|wholesale jewelry|wholesale jerseys