Home / ಕವನ / ಕವಿತೆ / ನನ್ನಮ್ಮ

ನನ್ನಮ್ಮ

ಆನಂದಮಯ, ಜಗಜನನೀ, ಒಡಲ ಸಾಮ್ರಾಜ್ಯ!
ನವ ನವ ಮಾಸಗಳೋ… ಸ್ವರ್ಗ ಸೋಪಾನವೇ…
ನವ ನವ ವಸಂತದ, ಚೈತ್ರ ಯಾತ್ರೆ…
ಅಲ್ಲಿಲ್ಲ; ಹಸಿವು, ಬಾಯಾರಿಕೆ, ಬೇಸರಿಕೆ! ಭೇದಭಾವ!
ಮುಕ್ಕೋಟಿ ದೇವರುಗಳ, ನಿತ್ಯ ದಿವ್ಯ ದರ್ಶನವಿಹುದು…
ಸುಖ, ಶಾಂತಿ, ನೆಮ್ಮದಿಗೆ, ಯೋಗಾಯೋಗ ನಿದ್ರಾ ತಾಣ!
ಇಂಥಾ ಯೋಗಾ ಯೋಗಾ ದೇವತೆಗಳಿಗುಂಟೇ??


ಬಲು ಬಲು ದುಃಖಮಯ…
ಈ ನೆಲ ಸೋಂಕಿದಂದನಿಂದಲೇ…
ತೆರೆದ ಬಾಯಿ, ಮುಚ್ಚಿಲ್ಲ.
ಮುಗಿಯದ ಗೋಳಿದು!
ಮರುಗಟ್ಟಿದೆ ಎಷ್ಟು ಅತ್ತರೂ ತಿರುಗಿ ನೋಡದಾಮಂದಿ!
ರಾತ್ರಿಯಿಟ್ಟು ಹಗಲು ಭವಣೆ ತೀರಿತು.


‘ಈ ನರ ಜನ್ಮ, ತಾಳಿದ ಬಳಿಕ, ಏನೆಲ್ಲ ಇದ್ದದ್ದೇ…’
ಎಂದು… ಎರಡೂ ಸ್ವಾಟ್ಟಿಗೆಟ್ಟಿ, ತಲೆ ತಲೆಗೇ ಮೋಟಿ,
ಊರಹಂದಿಯಂಗೆ ‘ಅಡ್ರುಗ್’ ಎನ್ನುವ, ಮಂದಿ ಮಧ್ಯೆ
ನನ್ನಮ್ಮ ದುರುಗವ್ವ ನೆನಪಾಗುವಳು! ಸಹಜವಾಗಿಯೇ…
ಬಿಸಿಲು ಬೆಳದಿಂಗಳಾಗುವಳು ಅಮ್ಮ…
ತಾವರೆ ತಿಳಿಗೊಳದಂತೇ…
ಅಮ್ಮ ಅಮ್ಮಗಲ್ಲದೆ, ಬೊಮ್ಮಗೆ ಸಾಧ್ಯನೇ?!
ಬೆಟ್ಟದಶ್ಟು, ಕಶ್ಟ ಹೊತ್ತ, ಭೂಮಿ ನೀ…
ಯಾವ ಋಣದ, ಮಣ ಭಾರ ನಾಽ…
ಒದ್ದೆ ಕಂಗಳ, ಮುದ್ದು ಮಾಡಿ, ಮಂತ್ರಿಸಿಬಿಟ್ಟೆ!


‘ಓ… ದೇವರೇ! ಸಾಕಿನ್ನು ಸಾಕು!
ಈ ಕ್ಷಣ ನನ್ನುಸಿರನ್ನೊಮ್ಮೆ ನಿಲ್ಲಿಸಿ ಬಿಡು!
ನೀ ಬಂದು ಪುಣ್ಯವನ್ನೆಲ್ಲ ಕಟ್ಟಿಕೋ…’
ಮೇಲಿಂದಾ ಮೇಲೆ, ನಾ… ಅಂಗಲಾಚುತ್ತೇನೆ! ಈ ಜನರ ತಂತ್ರ, ಕುತಂತ್ರ, ಕುಬುದ್ಧಿಗೆ ತಲೆರೋಸಿಗೆ ಬಂದಿದೆ!
ನಿತ್ಯ ಸಂತೆ ಗದ್ದಲದಲಿ ನನ್ನ ಅಳು, ಕೂಗು, ಕೇಳಿಸಿಕೊಳ್ಳುವವರ್‍ಯಾರು??
ಇಲ್ಲಿ ನಗುವ ಒತ್ತಿಟ್ಟು; ಅಳುವೆಂಬ ವಸ್ತು ಕೊಳ್ಳುತ್ತಿದ್ದಾರೆ!
ನೀರ ಮೇಲಿನ ಗುಳ್ಳೆಗೆ, ಬಾಸಿಂಗ ಕಟ್ಟುತ್ತಾರೆ.
ಈ ಜನ ಚಿನ್ನ
ಈ ನೆಲ ಅನ್ನ
ಈ ಜಲ ರನ್ನ
ಅನ್ನೊದೆಲ್ಲ ಗಿಮಿಕ್!!


ಇಲ್ಲಿ ಜನರಿಲ್ಲಿ… ಸಳ್ಳಿಡಿದು, ಗುಡಿ ಗುಡಿಸಿ, ಗುಡ್ಡೆ ಹಾಕುವುದು ನೋಡಿದರೆ,
ಈ ದೇಶನಾ ಮಸಾಲೆ ಮಾಡಿ, ತಿನ್ನಾದೊಂದೇ ಬಾಕಿ!
ಈ ನೆಲ, ಜಲ, ಜನರ ಒಡಲು, ಬಗೆ ಬಗೆದು, ಬರಿದು ಮಾಡುತ್ತಾ,
ತಮ್ಮ ತಾವು ಮಾರಿಕೊಳ್ಳುವ, ಕೊಂಡುಕೊಳ್ಳುವುದ ಕಂಡರೆ…
ಅಸಹ್ಯ ಹುಟ್ಟುವುದು!
ಬದುಕಿಲ್ಲಿ… ನನ್ನ ಮುಟ್ಟದ ಗಾಳಿ.
ಎಲ್ಲ ಮುಗಿದ ಮೇಲೆ, ಉಳಿಯಲೇನಿದೆ??
ಖಾಲಿ ಕೊಡಗಳೊಂದಿಗೆ ಸಂಸಾರ!
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...