Home / ಕವನ / ಕವಿತೆ / ನನ್ನಮ್ಮ

ನನ್ನಮ್ಮ

ಆನಂದಮಯ, ಜಗಜನನೀ, ಒಡಲ ಸಾಮ್ರಾಜ್ಯ!
ನವ ನವ ಮಾಸಗಳೋ… ಸ್ವರ್ಗ ಸೋಪಾನವೇ…
ನವ ನವ ವಸಂತದ, ಚೈತ್ರ ಯಾತ್ರೆ…
ಅಲ್ಲಿಲ್ಲ; ಹಸಿವು, ಬಾಯಾರಿಕೆ, ಬೇಸರಿಕೆ! ಭೇದಭಾವ!
ಮುಕ್ಕೋಟಿ ದೇವರುಗಳ, ನಿತ್ಯ ದಿವ್ಯ ದರ್ಶನವಿಹುದು…
ಸುಖ, ಶಾಂತಿ, ನೆಮ್ಮದಿಗೆ, ಯೋಗಾಯೋಗ ನಿದ್ರಾ ತಾಣ!
ಇಂಥಾ ಯೋಗಾ ಯೋಗಾ ದೇವತೆಗಳಿಗುಂಟೇ??


ಬಲು ಬಲು ದುಃಖಮಯ…
ಈ ನೆಲ ಸೋಂಕಿದಂದನಿಂದಲೇ…
ತೆರೆದ ಬಾಯಿ, ಮುಚ್ಚಿಲ್ಲ.
ಮುಗಿಯದ ಗೋಳಿದು!
ಮರುಗಟ್ಟಿದೆ ಎಷ್ಟು ಅತ್ತರೂ ತಿರುಗಿ ನೋಡದಾಮಂದಿ!
ರಾತ್ರಿಯಿಟ್ಟು ಹಗಲು ಭವಣೆ ತೀರಿತು.


‘ಈ ನರ ಜನ್ಮ, ತಾಳಿದ ಬಳಿಕ, ಏನೆಲ್ಲ ಇದ್ದದ್ದೇ…’
ಎಂದು… ಎರಡೂ ಸ್ವಾಟ್ಟಿಗೆಟ್ಟಿ, ತಲೆ ತಲೆಗೇ ಮೋಟಿ,
ಊರಹಂದಿಯಂಗೆ ‘ಅಡ್ರುಗ್’ ಎನ್ನುವ, ಮಂದಿ ಮಧ್ಯೆ
ನನ್ನಮ್ಮ ದುರುಗವ್ವ ನೆನಪಾಗುವಳು! ಸಹಜವಾಗಿಯೇ…
ಬಿಸಿಲು ಬೆಳದಿಂಗಳಾಗುವಳು ಅಮ್ಮ…
ತಾವರೆ ತಿಳಿಗೊಳದಂತೇ…
ಅಮ್ಮ ಅಮ್ಮಗಲ್ಲದೆ, ಬೊಮ್ಮಗೆ ಸಾಧ್ಯನೇ?!
ಬೆಟ್ಟದಶ್ಟು, ಕಶ್ಟ ಹೊತ್ತ, ಭೂಮಿ ನೀ…
ಯಾವ ಋಣದ, ಮಣ ಭಾರ ನಾಽ…
ಒದ್ದೆ ಕಂಗಳ, ಮುದ್ದು ಮಾಡಿ, ಮಂತ್ರಿಸಿಬಿಟ್ಟೆ!


‘ಓ… ದೇವರೇ! ಸಾಕಿನ್ನು ಸಾಕು!
ಈ ಕ್ಷಣ ನನ್ನುಸಿರನ್ನೊಮ್ಮೆ ನಿಲ್ಲಿಸಿ ಬಿಡು!
ನೀ ಬಂದು ಪುಣ್ಯವನ್ನೆಲ್ಲ ಕಟ್ಟಿಕೋ…’
ಮೇಲಿಂದಾ ಮೇಲೆ, ನಾ… ಅಂಗಲಾಚುತ್ತೇನೆ! ಈ ಜನರ ತಂತ್ರ, ಕುತಂತ್ರ, ಕುಬುದ್ಧಿಗೆ ತಲೆರೋಸಿಗೆ ಬಂದಿದೆ!
ನಿತ್ಯ ಸಂತೆ ಗದ್ದಲದಲಿ ನನ್ನ ಅಳು, ಕೂಗು, ಕೇಳಿಸಿಕೊಳ್ಳುವವರ್‍ಯಾರು??
ಇಲ್ಲಿ ನಗುವ ಒತ್ತಿಟ್ಟು; ಅಳುವೆಂಬ ವಸ್ತು ಕೊಳ್ಳುತ್ತಿದ್ದಾರೆ!
ನೀರ ಮೇಲಿನ ಗುಳ್ಳೆಗೆ, ಬಾಸಿಂಗ ಕಟ್ಟುತ್ತಾರೆ.
ಈ ಜನ ಚಿನ್ನ
ಈ ನೆಲ ಅನ್ನ
ಈ ಜಲ ರನ್ನ
ಅನ್ನೊದೆಲ್ಲ ಗಿಮಿಕ್!!


ಇಲ್ಲಿ ಜನರಿಲ್ಲಿ… ಸಳ್ಳಿಡಿದು, ಗುಡಿ ಗುಡಿಸಿ, ಗುಡ್ಡೆ ಹಾಕುವುದು ನೋಡಿದರೆ,
ಈ ದೇಶನಾ ಮಸಾಲೆ ಮಾಡಿ, ತಿನ್ನಾದೊಂದೇ ಬಾಕಿ!
ಈ ನೆಲ, ಜಲ, ಜನರ ಒಡಲು, ಬಗೆ ಬಗೆದು, ಬರಿದು ಮಾಡುತ್ತಾ,
ತಮ್ಮ ತಾವು ಮಾರಿಕೊಳ್ಳುವ, ಕೊಂಡುಕೊಳ್ಳುವುದ ಕಂಡರೆ…
ಅಸಹ್ಯ ಹುಟ್ಟುವುದು!
ಬದುಕಿಲ್ಲಿ… ನನ್ನ ಮುಟ್ಟದ ಗಾಳಿ.
ಎಲ್ಲ ಮುಗಿದ ಮೇಲೆ, ಉಳಿಯಲೇನಿದೆ??
ಖಾಲಿ ಕೊಡಗಳೊಂದಿಗೆ ಸಂಸಾರ!
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...