Home / ಕವನ / ಕವಿತೆ / ಬುದ್ಧನಾಗುವ ಬಯಕೆ

ಬುದ್ಧನಾಗುವ ಬಯಕೆ

ಬುದ್ಧನಾಗಲಿಲ್ಲ ನಾ
ಕೇರಿಂದೆದ್ದು ಬರಲಾಗಲೇ ಇಲ್ಲ!
ಬಿದ್ದಲ್ಲೆ ಬಿದ್ದು ಬಿದ್ದು…
ಹಂದಿಯಂಗೆ ಹೊಲೆಗೇರಿಲಿ… ಎದ್ದು ಎದ್ದು…
ಒದ್ದಾಡುತ್ತಿರುವೆ!
ಕೇರಿಂದೆ ಹೊರಗೇ ಬರಲಾಗಲೇ ಇಲ್ಲ
ಇನ್ನು ಬುದ್ಧನಾಗುವಾ ಬಯಕೆ ದೂರಾಯಿತಲ್ಲ!
*

ಜಗವೆಲ್ಲ ಮಲಗಿರಲು
ಶತಶತಮಾನಗಳಿಂದಾ ಎದ್ದಿರುವೆವು ನಾವು!
ನಿದ್ದಿಲ್ಲದೆ, ಮನೆ, ಮಠ, ಸೂರಿಲ್ಲದೇ…
ಬುದ್ಧನಾಗುವ ಸಂಕಲ್ಪ ನಮಗುಂಟೇ?!
ಹೊಟ್ಟೆ, ಬಟ್ಟೆಗೆ,
ಆಸೆ ಪಟ್ಟು
ಕಟ್ಟು ನಿಟ್ಟಿಗೆ,
ಒಳಪಟ್ಟು
ಗತಿಗೆಟ್ಟವರೆಂಬಾಪಟ್ಟ,
ಗಿರಿಜನರೆಂಬಾಚಟ್ಟ
ನಮಗಲ್ಲದೆ, ಇನ್ಯಾರಿಗಿದೆ ಬುದ್ಧಾ…?!
*

ನಿತ್ಯ ಸಾವೆಂಬಾ ಅವಮಾನ!
ಕಂಗೆಟ್ಟ ಹಸಿವು,
ರೋಗರುಜಿನೆಂಬಾ ಹಾಸಿಗೆ
ಬಡತನವೆಂಬಾ ಸಂಕೋಲೆ
ಜಾತಿ, ಮತ, ಕುಲ, ಭೇದಗಳೆಂಬಾ ಕೆಂಭೂತ,
ಅನಕ್ಷರೆಂಬಾಭೂತ
ಸಂಸಾರವೆಂಬಾ ಪಿಶಾಚಿಗೆ,
ಬೇಸತ್ತರೂ ವೈರಾಗ್ಯವೆಂಬುದಿಲ್ಲ!
ಇನ್ನು ಬುದ್ಧನಾಗುವ ಬಯಕೆ…
ನಮಗೆಲ್ಲಿದೆ ಬುದ್ಧಾ?!
ದರಿದ್ರರೆಂಬಾ-ಪಟ್ಟ,
ಹರಿಜನರೆಂಬಾ-ಚಟ್ಟ,
ನಮಗಲ್ಲದೆ ಇನ್ಯಾರಿಗಿದೆ ಬುದ್ಧಾ?!
*

ನಿದ್ದಿಲ್ಲದೆ,
ಬುದ್ಧಿಲ್ಲದೆ,
ದುಡಿದ ದೇಹಕ್ಕಿಲ್ಲ ತುಂಡು ಬಟ್ಟೆ?!
ಬರುವಾಗ ಬೆತ್ತಲೆ
ಹೋಗುವಾಗ ಬೆತ್ತಲೆ
ದರಿದ್ರ ಜನರೆಂದು ಜರಿವಾಗ
ಬಾಹುಬಲಿಯೆಂಬಾಪಟ್ಟ,
ಹೊಲಗೇರಿಯವರೆಂಬಾಚಟ್ಟ
ನಮಗಲ್ಲದೆ, ಇನ್ಯಾರಿಗಿದೆ ಬುದ್ಧಾ…?!
*

ನಿತ್ಯ ಬೋಧಿ ವೃಕ್ಷದಾ ಕೆಳಗೆ!
ಮರ, ಗಿಡಗಳಾ ಆಸರೆಲಿ,
ನಿದ್ದಿಲ್ಲದೆ, ರಾತ್ರೆಲ್ಲ ಎದ್ದು,
ಬೋಧಿವೃಕ್ಷಕೆ, ತೊಟ್ಟಿಲ ಕಟ್ಟಿ, ತೂಗಿದರೂ…
ಬುದ್ಧನಾಗುವಾ ಯೋಗ, ನಮೆಗೆಲ್ಲಿದೆ ಬುದ್ಧಾ…?!
*****

Tagged:

Leave a Reply

Your email address will not be published. Required fields are marked *

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...