Home / ಕವನ / ಕವಿತೆ / ಬುದ್ಧನಾಗುವ ಬಯಕೆ

ಬುದ್ಧನಾಗುವ ಬಯಕೆ

ಬುದ್ಧನಾಗಲಿಲ್ಲ ನಾ
ಕೇರಿಂದೆದ್ದು ಬರಲಾಗಲೇ ಇಲ್ಲ!
ಬಿದ್ದಲ್ಲೆ ಬಿದ್ದು ಬಿದ್ದು…
ಹಂದಿಯಂಗೆ ಹೊಲೆಗೇರಿಲಿ… ಎದ್ದು ಎದ್ದು…
ಒದ್ದಾಡುತ್ತಿರುವೆ!
ಕೇರಿಂದೆ ಹೊರಗೇ ಬರಲಾಗಲೇ ಇಲ್ಲ
ಇನ್ನು ಬುದ್ಧನಾಗುವಾ ಬಯಕೆ ದೂರಾಯಿತಲ್ಲ!
*

ಜಗವೆಲ್ಲ ಮಲಗಿರಲು
ಶತಶತಮಾನಗಳಿಂದಾ ಎದ್ದಿರುವೆವು ನಾವು!
ನಿದ್ದಿಲ್ಲದೆ, ಮನೆ, ಮಠ, ಸೂರಿಲ್ಲದೇ…
ಬುದ್ಧನಾಗುವ ಸಂಕಲ್ಪ ನಮಗುಂಟೇ?!
ಹೊಟ್ಟೆ, ಬಟ್ಟೆಗೆ,
ಆಸೆ ಪಟ್ಟು
ಕಟ್ಟು ನಿಟ್ಟಿಗೆ,
ಒಳಪಟ್ಟು
ಗತಿಗೆಟ್ಟವರೆಂಬಾಪಟ್ಟ,
ಗಿರಿಜನರೆಂಬಾಚಟ್ಟ
ನಮಗಲ್ಲದೆ, ಇನ್ಯಾರಿಗಿದೆ ಬುದ್ಧಾ…?!
*

ನಿತ್ಯ ಸಾವೆಂಬಾ ಅವಮಾನ!
ಕಂಗೆಟ್ಟ ಹಸಿವು,
ರೋಗರುಜಿನೆಂಬಾ ಹಾಸಿಗೆ
ಬಡತನವೆಂಬಾ ಸಂಕೋಲೆ
ಜಾತಿ, ಮತ, ಕುಲ, ಭೇದಗಳೆಂಬಾ ಕೆಂಭೂತ,
ಅನಕ್ಷರೆಂಬಾಭೂತ
ಸಂಸಾರವೆಂಬಾ ಪಿಶಾಚಿಗೆ,
ಬೇಸತ್ತರೂ ವೈರಾಗ್ಯವೆಂಬುದಿಲ್ಲ!
ಇನ್ನು ಬುದ್ಧನಾಗುವ ಬಯಕೆ…
ನಮಗೆಲ್ಲಿದೆ ಬುದ್ಧಾ?!
ದರಿದ್ರರೆಂಬಾ-ಪಟ್ಟ,
ಹರಿಜನರೆಂಬಾ-ಚಟ್ಟ,
ನಮಗಲ್ಲದೆ ಇನ್ಯಾರಿಗಿದೆ ಬುದ್ಧಾ?!
*

ನಿದ್ದಿಲ್ಲದೆ,
ಬುದ್ಧಿಲ್ಲದೆ,
ದುಡಿದ ದೇಹಕ್ಕಿಲ್ಲ ತುಂಡು ಬಟ್ಟೆ?!
ಬರುವಾಗ ಬೆತ್ತಲೆ
ಹೋಗುವಾಗ ಬೆತ್ತಲೆ
ದರಿದ್ರ ಜನರೆಂದು ಜರಿವಾಗ
ಬಾಹುಬಲಿಯೆಂಬಾಪಟ್ಟ,
ಹೊಲಗೇರಿಯವರೆಂಬಾಚಟ್ಟ
ನಮಗಲ್ಲದೆ, ಇನ್ಯಾರಿಗಿದೆ ಬುದ್ಧಾ…?!
*

ನಿತ್ಯ ಬೋಧಿ ವೃಕ್ಷದಾ ಕೆಳಗೆ!
ಮರ, ಗಿಡಗಳಾ ಆಸರೆಲಿ,
ನಿದ್ದಿಲ್ಲದೆ, ರಾತ್ರೆಲ್ಲ ಎದ್ದು,
ಬೋಧಿವೃಕ್ಷಕೆ, ತೊಟ್ಟಿಲ ಕಟ್ಟಿ, ತೂಗಿದರೂ…
ಬುದ್ಧನಾಗುವಾ ಯೋಗ, ನಮೆಗೆಲ್ಲಿದೆ ಬುದ್ಧಾ…?!
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...