ಬುದ್ಧನಾಗುವ ಬಯಕೆ

ಬುದ್ಧನಾಗಲಿಲ್ಲ ನಾ
ಕೇರಿಂದೆದ್ದು ಬರಲಾಗಲೇ ಇಲ್ಲ!
ಬಿದ್ದಲ್ಲೆ ಬಿದ್ದು ಬಿದ್ದು…
ಹಂದಿಯಂಗೆ ಹೊಲೆಗೇರಿಲಿ… ಎದ್ದು ಎದ್ದು…
ಒದ್ದಾಡುತ್ತಿರುವೆ!
ಕೇರಿಂದೆ ಹೊರಗೇ ಬರಲಾಗಲೇ ಇಲ್ಲ
ಇನ್ನು ಬುದ್ಧನಾಗುವಾ ಬಯಕೆ ದೂರಾಯಿತಲ್ಲ!
*

ಜಗವೆಲ್ಲ ಮಲಗಿರಲು
ಶತಶತಮಾನಗಳಿಂದಾ ಎದ್ದಿರುವೆವು ನಾವು!
ನಿದ್ದಿಲ್ಲದೆ, ಮನೆ, ಮಠ, ಸೂರಿಲ್ಲದೇ…
ಬುದ್ಧನಾಗುವ ಸಂಕಲ್ಪ ನಮಗುಂಟೇ?!
ಹೊಟ್ಟೆ, ಬಟ್ಟೆಗೆ,
ಆಸೆ ಪಟ್ಟು
ಕಟ್ಟು ನಿಟ್ಟಿಗೆ,
ಒಳಪಟ್ಟು
ಗತಿಗೆಟ್ಟವರೆಂಬಾಪಟ್ಟ,
ಗಿರಿಜನರೆಂಬಾಚಟ್ಟ
ನಮಗಲ್ಲದೆ, ಇನ್ಯಾರಿಗಿದೆ ಬುದ್ಧಾ…?!
*

ನಿತ್ಯ ಸಾವೆಂಬಾ ಅವಮಾನ!
ಕಂಗೆಟ್ಟ ಹಸಿವು,
ರೋಗರುಜಿನೆಂಬಾ ಹಾಸಿಗೆ
ಬಡತನವೆಂಬಾ ಸಂಕೋಲೆ
ಜಾತಿ, ಮತ, ಕುಲ, ಭೇದಗಳೆಂಬಾ ಕೆಂಭೂತ,
ಅನಕ್ಷರೆಂಬಾಭೂತ
ಸಂಸಾರವೆಂಬಾ ಪಿಶಾಚಿಗೆ,
ಬೇಸತ್ತರೂ ವೈರಾಗ್ಯವೆಂಬುದಿಲ್ಲ!
ಇನ್ನು ಬುದ್ಧನಾಗುವ ಬಯಕೆ…
ನಮಗೆಲ್ಲಿದೆ ಬುದ್ಧಾ?!
ದರಿದ್ರರೆಂಬಾ-ಪಟ್ಟ,
ಹರಿಜನರೆಂಬಾ-ಚಟ್ಟ,
ನಮಗಲ್ಲದೆ ಇನ್ಯಾರಿಗಿದೆ ಬುದ್ಧಾ?!
*

ನಿದ್ದಿಲ್ಲದೆ,
ಬುದ್ಧಿಲ್ಲದೆ,
ದುಡಿದ ದೇಹಕ್ಕಿಲ್ಲ ತುಂಡು ಬಟ್ಟೆ?!
ಬರುವಾಗ ಬೆತ್ತಲೆ
ಹೋಗುವಾಗ ಬೆತ್ತಲೆ
ದರಿದ್ರ ಜನರೆಂದು ಜರಿವಾಗ
ಬಾಹುಬಲಿಯೆಂಬಾಪಟ್ಟ,
ಹೊಲಗೇರಿಯವರೆಂಬಾಚಟ್ಟ
ನಮಗಲ್ಲದೆ, ಇನ್ಯಾರಿಗಿದೆ ಬುದ್ಧಾ…?!
*

ನಿತ್ಯ ಬೋಧಿ ವೃಕ್ಷದಾ ಕೆಳಗೆ!
ಮರ, ಗಿಡಗಳಾ ಆಸರೆಲಿ,
ನಿದ್ದಿಲ್ಲದೆ, ರಾತ್ರೆಲ್ಲ ಎದ್ದು,
ಬೋಧಿವೃಕ್ಷಕೆ, ತೊಟ್ಟಿಲ ಕಟ್ಟಿ, ತೂಗಿದರೂ…
ಬುದ್ಧನಾಗುವಾ ಯೋಗ, ನಮೆಗೆಲ್ಲಿದೆ ಬುದ್ಧಾ…?!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹೇಗೆ ಹೇಳಲಿ
Next post ನಮ್ಮೂರ ಹೋಳಿ ಹಾಡು – ೪

ಸಣ್ಣ ಕತೆ

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…