Home / ಕವನ / ಕವಿತೆ / ಬುದ್ಧನಾಗುವ ಬಯಕೆ

ಬುದ್ಧನಾಗುವ ಬಯಕೆ

ಬುದ್ಧನಾಗಲಿಲ್ಲ ನಾ
ಕೇರಿಂದೆದ್ದು ಬರಲಾಗಲೇ ಇಲ್ಲ!
ಬಿದ್ದಲ್ಲೆ ಬಿದ್ದು ಬಿದ್ದು…
ಹಂದಿಯಂಗೆ ಹೊಲೆಗೇರಿಲಿ… ಎದ್ದು ಎದ್ದು…
ಒದ್ದಾಡುತ್ತಿರುವೆ!
ಕೇರಿಂದೆ ಹೊರಗೇ ಬರಲಾಗಲೇ ಇಲ್ಲ
ಇನ್ನು ಬುದ್ಧನಾಗುವಾ ಬಯಕೆ ದೂರಾಯಿತಲ್ಲ!
*

ಜಗವೆಲ್ಲ ಮಲಗಿರಲು
ಶತಶತಮಾನಗಳಿಂದಾ ಎದ್ದಿರುವೆವು ನಾವು!
ನಿದ್ದಿಲ್ಲದೆ, ಮನೆ, ಮಠ, ಸೂರಿಲ್ಲದೇ…
ಬುದ್ಧನಾಗುವ ಸಂಕಲ್ಪ ನಮಗುಂಟೇ?!
ಹೊಟ್ಟೆ, ಬಟ್ಟೆಗೆ,
ಆಸೆ ಪಟ್ಟು
ಕಟ್ಟು ನಿಟ್ಟಿಗೆ,
ಒಳಪಟ್ಟು
ಗತಿಗೆಟ್ಟವರೆಂಬಾಪಟ್ಟ,
ಗಿರಿಜನರೆಂಬಾಚಟ್ಟ
ನಮಗಲ್ಲದೆ, ಇನ್ಯಾರಿಗಿದೆ ಬುದ್ಧಾ…?!
*

ನಿತ್ಯ ಸಾವೆಂಬಾ ಅವಮಾನ!
ಕಂಗೆಟ್ಟ ಹಸಿವು,
ರೋಗರುಜಿನೆಂಬಾ ಹಾಸಿಗೆ
ಬಡತನವೆಂಬಾ ಸಂಕೋಲೆ
ಜಾತಿ, ಮತ, ಕುಲ, ಭೇದಗಳೆಂಬಾ ಕೆಂಭೂತ,
ಅನಕ್ಷರೆಂಬಾಭೂತ
ಸಂಸಾರವೆಂಬಾ ಪಿಶಾಚಿಗೆ,
ಬೇಸತ್ತರೂ ವೈರಾಗ್ಯವೆಂಬುದಿಲ್ಲ!
ಇನ್ನು ಬುದ್ಧನಾಗುವ ಬಯಕೆ…
ನಮಗೆಲ್ಲಿದೆ ಬುದ್ಧಾ?!
ದರಿದ್ರರೆಂಬಾ-ಪಟ್ಟ,
ಹರಿಜನರೆಂಬಾ-ಚಟ್ಟ,
ನಮಗಲ್ಲದೆ ಇನ್ಯಾರಿಗಿದೆ ಬುದ್ಧಾ?!
*

ನಿದ್ದಿಲ್ಲದೆ,
ಬುದ್ಧಿಲ್ಲದೆ,
ದುಡಿದ ದೇಹಕ್ಕಿಲ್ಲ ತುಂಡು ಬಟ್ಟೆ?!
ಬರುವಾಗ ಬೆತ್ತಲೆ
ಹೋಗುವಾಗ ಬೆತ್ತಲೆ
ದರಿದ್ರ ಜನರೆಂದು ಜರಿವಾಗ
ಬಾಹುಬಲಿಯೆಂಬಾಪಟ್ಟ,
ಹೊಲಗೇರಿಯವರೆಂಬಾಚಟ್ಟ
ನಮಗಲ್ಲದೆ, ಇನ್ಯಾರಿಗಿದೆ ಬುದ್ಧಾ…?!
*

ನಿತ್ಯ ಬೋಧಿ ವೃಕ್ಷದಾ ಕೆಳಗೆ!
ಮರ, ಗಿಡಗಳಾ ಆಸರೆಲಿ,
ನಿದ್ದಿಲ್ಲದೆ, ರಾತ್ರೆಲ್ಲ ಎದ್ದು,
ಬೋಧಿವೃಕ್ಷಕೆ, ತೊಟ್ಟಿಲ ಕಟ್ಟಿ, ತೂಗಿದರೂ…
ಬುದ್ಧನಾಗುವಾ ಯೋಗ, ನಮೆಗೆಲ್ಲಿದೆ ಬುದ್ಧಾ…?!
*****

Tagged:

Leave a Reply

Your email address will not be published. Required fields are marked *

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...

ಒಂದೊಂದೆ ನೀರ ಹನಿಗಳು ಮುಳಿಹುಲ್ಲಿನ ಮಾಡಿನಿಂದ ಜಿನುಗಿ ತೊಟ್ಟಿಕ್ಕಿ ಆತ ಹೊದ್ದ ಕಂಬಳಿಯ ನೆನೆಸಿ ಒಳನುಸುಳಿ ಆತನ ಕುಂಡೆಯ ಭಾಗವೆಲ್ಲಾ ಒದ್ದೆಯಾದ ಕಾರಣವೋ ಹೊತ್ತಿಗೆ ಮುಂಚೆ ಎಂದೂ ಏಳದ ಹೊಲಿಯಪ್ಪ ಅಂದು ದಡಬಡಿಸಿ ಎದ್ದ. ಆತ ಮಲಗಿದ ಕಡೆಯಲ್ಲಿ ನೆಲವೆಲ್ಲಾ ಅದಾಗಲೇ ಹಸಿಯಾಗಿತ್ತಲ್ಲ. ಹ...

ಅದು ರಾಷ್ಟೀಯ ಹೆದ್ದಾರಿ ಎನ್.ಎಚ್.೧೭. ಎಡೆಬಿಡದ ವಾಹನಗಳ ಸಂಚಾರ. ಮಧ್ಯೆ ಮಧ್ಯೆ ಅಪಾಯಕಾರಿ ತಿರುವುಗಳು. ಹೊಸಬರಿಗೆ ಅಪರಿಚಿತರಿಗೆ ಮುಂದೆ ತಿರುವು ಇದೆ ಎಂದು ತಿಳಿಯಲಾಗದ, ಅವಘಡವೇನಾದರೂ ಸಂಭವಿಸಿದರೆ ನೇರವಾಗಿ ಪ್ರಪಾತದ ಪಾಲಾಗುವ ಭಯವನ್ನು ಹೊಂದಿದ ಭೀಕರ ತಿರುವುಗಳನ್ನು ಹೊಂದಿದ ವಕ...