Home / ಕವನ / ಕವಿತೆ / ಬುದ್ಧನಾಗುವ ಬಯಕೆ

ಬುದ್ಧನಾಗುವ ಬಯಕೆ

ಬುದ್ಧನಾಗಲಿಲ್ಲ ನಾ
ಕೇರಿಂದೆದ್ದು ಬರಲಾಗಲೇ ಇಲ್ಲ!
ಬಿದ್ದಲ್ಲೆ ಬಿದ್ದು ಬಿದ್ದು…
ಹಂದಿಯಂಗೆ ಹೊಲೆಗೇರಿಲಿ… ಎದ್ದು ಎದ್ದು…
ಒದ್ದಾಡುತ್ತಿರುವೆ!
ಕೇರಿಂದೆ ಹೊರಗೇ ಬರಲಾಗಲೇ ಇಲ್ಲ
ಇನ್ನು ಬುದ್ಧನಾಗುವಾ ಬಯಕೆ ದೂರಾಯಿತಲ್ಲ!
*

ಜಗವೆಲ್ಲ ಮಲಗಿರಲು
ಶತಶತಮಾನಗಳಿಂದಾ ಎದ್ದಿರುವೆವು ನಾವು!
ನಿದ್ದಿಲ್ಲದೆ, ಮನೆ, ಮಠ, ಸೂರಿಲ್ಲದೇ…
ಬುದ್ಧನಾಗುವ ಸಂಕಲ್ಪ ನಮಗುಂಟೇ?!
ಹೊಟ್ಟೆ, ಬಟ್ಟೆಗೆ,
ಆಸೆ ಪಟ್ಟು
ಕಟ್ಟು ನಿಟ್ಟಿಗೆ,
ಒಳಪಟ್ಟು
ಗತಿಗೆಟ್ಟವರೆಂಬಾಪಟ್ಟ,
ಗಿರಿಜನರೆಂಬಾಚಟ್ಟ
ನಮಗಲ್ಲದೆ, ಇನ್ಯಾರಿಗಿದೆ ಬುದ್ಧಾ…?!
*

ನಿತ್ಯ ಸಾವೆಂಬಾ ಅವಮಾನ!
ಕಂಗೆಟ್ಟ ಹಸಿವು,
ರೋಗರುಜಿನೆಂಬಾ ಹಾಸಿಗೆ
ಬಡತನವೆಂಬಾ ಸಂಕೋಲೆ
ಜಾತಿ, ಮತ, ಕುಲ, ಭೇದಗಳೆಂಬಾ ಕೆಂಭೂತ,
ಅನಕ್ಷರೆಂಬಾಭೂತ
ಸಂಸಾರವೆಂಬಾ ಪಿಶಾಚಿಗೆ,
ಬೇಸತ್ತರೂ ವೈರಾಗ್ಯವೆಂಬುದಿಲ್ಲ!
ಇನ್ನು ಬುದ್ಧನಾಗುವ ಬಯಕೆ…
ನಮಗೆಲ್ಲಿದೆ ಬುದ್ಧಾ?!
ದರಿದ್ರರೆಂಬಾ-ಪಟ್ಟ,
ಹರಿಜನರೆಂಬಾ-ಚಟ್ಟ,
ನಮಗಲ್ಲದೆ ಇನ್ಯಾರಿಗಿದೆ ಬುದ್ಧಾ?!
*

ನಿದ್ದಿಲ್ಲದೆ,
ಬುದ್ಧಿಲ್ಲದೆ,
ದುಡಿದ ದೇಹಕ್ಕಿಲ್ಲ ತುಂಡು ಬಟ್ಟೆ?!
ಬರುವಾಗ ಬೆತ್ತಲೆ
ಹೋಗುವಾಗ ಬೆತ್ತಲೆ
ದರಿದ್ರ ಜನರೆಂದು ಜರಿವಾಗ
ಬಾಹುಬಲಿಯೆಂಬಾಪಟ್ಟ,
ಹೊಲಗೇರಿಯವರೆಂಬಾಚಟ್ಟ
ನಮಗಲ್ಲದೆ, ಇನ್ಯಾರಿಗಿದೆ ಬುದ್ಧಾ…?!
*

ನಿತ್ಯ ಬೋಧಿ ವೃಕ್ಷದಾ ಕೆಳಗೆ!
ಮರ, ಗಿಡಗಳಾ ಆಸರೆಲಿ,
ನಿದ್ದಿಲ್ಲದೆ, ರಾತ್ರೆಲ್ಲ ಎದ್ದು,
ಬೋಧಿವೃಕ್ಷಕೆ, ತೊಟ್ಟಿಲ ಕಟ್ಟಿ, ತೂಗಿದರೂ…
ಬುದ್ಧನಾಗುವಾ ಯೋಗ, ನಮೆಗೆಲ್ಲಿದೆ ಬುದ್ಧಾ…?!
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...