Home / ಕವನ / ಕವಿತೆ / ದೀಪದ ಬೆಳಕು…

ದೀಪದ ಬೆಳಕು…

ಪಣತಿಯಿದೆ

ಎಣ್ಣೆಯಿದೆ
ಬತ್ತಿಯಿದೆ
ಕಡ್ಡಿಯಿದೆ!
ದೀಪ ಹಚ್ಚುತ್ತಿಲ್ಲ ನಾ…
ಸೂರ್‍ಯ, ಚನ್ದ್ರ, ನಕ್ಷತ್ರಗಳಿವೆಯೆಂದೇ??
ವಿದ್ಯುತ್ ದೀಪ, ಪೆಟ್ರೋಮ್ಯಾಕ್ಸಿ,
ಜಗಮಗಿಸುವ ಚಿನಕುರುಳಿ,
ದಾರಿದೀಪಗಳಿವೆಯೆಂದೇ??
ಎಲ್ಲ ಇದ್ದು,
ಇಲ್ಲದವನಂತೆ,
ಎದ್ದು ದೀಪ ಮುಡಿಸುತ್ತಿಲ್ಲ ನಾ…
ಇಲ್ಲಿದ್ದು ಎದೆಗೊದೆಯಲಾರದೆ,
ವಿಲಿ ವಿಲಿ ಒದ್ದಾಡಿ… ಒದ್ದಾಡಿ…
ಯುಗ ಯುಗಗಳೇ ಉರುಳಿದವು!
ಇದೇ ಹೊಲೆಗೇರಿಲಿ ನನ್ನಪ್ಪ, ತಾತ, ಮುತ್ತಾತರೂ…
ತರತರಗುಟ್ಟಿ,
ಕತ್ತಲ ಕೂಪದಲಿ,
ಕಡು ತಾಪದಲಿ,
ಹಪಹಪಿಸಿ,
ಶತಶತಮಾನಗಳ ನೂಕಿದರು!!!
ಅಪಮಾನಗಳ ಅಳೆ ಅಳೆದು,
ಅಜ್ಞಾನವದ್ದು,
ಕಜ್ಜಿ ನಾಯಿ, ಹಂದಿ, ಇಲಿ, ಹೆಗ್ಗಣ,
ತಿಗಣೆ, ಸುಕ್ಕಾಡಿ, ನೊಣಗಳ ಜತೆ ಜತೆಲಿ,
ಬಿದ್ದ ಪಕ್ಕೇಲಿ, ಬಿದ್ದ ಪರಿಗೇ…
ಬೆಚ್ಚಿ ಬಿದ್ದೆ!
ಗಡ್ಡಕ್ಕೆ ಕಡ್ಡಿ ಕೊರೆದೆ…
ಹಚ್ಚಿದೆ ಹೊಲಗೇರಿಲಿ ದೀಪ
ಪಾಪ! ದೀಪಕ್ಕೇನು ಗೊತ್ತು?
ಪಣತಿ ಕುಂಬಾರಣ್ಣನದು…
ಎಣ್ಣೆ ಗಾಣಿಗರನೆಂದು…
ಬತ್ತಿ ವಕ್ಕಲಿಗನೆಂದು…
ಕಡ್ಡಿ ವೈಶ್ಯನದೆಂದು…
ಅಳುಕೆ??…
ಸೂರ್‍ಯಸ್ತಮಾನದ ಬೆಳಕೇ…
ವಿಶ್ವ ಬೆಳಗಬಲ್ಲೆಯಾ??
ಕಿಡಿ ಕಿಡಿಯಿಂದಲ್ಲವೇ?
ವಿಶ್ವ ಸುಟ್ಟು, ಸುರ್‍ಮಾಂಡ್ಲವಾಗಿದ್ದು, ಮರೆತ್ತಿಲ್ಲ ಸಾಕು!
ಕಡ್ಡಿ, ಗುಡ್ಡನಾ ಸುಡುವಾಗ-
ದೀಪ ಜಗವ ಬೆಳಗುವುದು!
*****

Tagged:

Leave a Reply

Your email address will not be published. Required fields are marked *

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...

ಒಂದೊಂದೆ ನೀರ ಹನಿಗಳು ಮುಳಿಹುಲ್ಲಿನ ಮಾಡಿನಿಂದ ಜಿನುಗಿ ತೊಟ್ಟಿಕ್ಕಿ ಆತ ಹೊದ್ದ ಕಂಬಳಿಯ ನೆನೆಸಿ ಒಳನುಸುಳಿ ಆತನ ಕುಂಡೆಯ ಭಾಗವೆಲ್ಲಾ ಒದ್ದೆಯಾದ ಕಾರಣವೋ ಹೊತ್ತಿಗೆ ಮುಂಚೆ ಎಂದೂ ಏಳದ ಹೊಲಿಯಪ್ಪ ಅಂದು ದಡಬಡಿಸಿ ಎದ್ದ. ಆತ ಮಲಗಿದ ಕಡೆಯಲ್ಲಿ ನೆಲವೆಲ್ಲಾ ಅದಾಗಲೇ ಹಸಿಯಾಗಿತ್ತಲ್ಲ. ಹ...

ಅದು ರಾಷ್ಟೀಯ ಹೆದ್ದಾರಿ ಎನ್.ಎಚ್.೧೭. ಎಡೆಬಿಡದ ವಾಹನಗಳ ಸಂಚಾರ. ಮಧ್ಯೆ ಮಧ್ಯೆ ಅಪಾಯಕಾರಿ ತಿರುವುಗಳು. ಹೊಸಬರಿಗೆ ಅಪರಿಚಿತರಿಗೆ ಮುಂದೆ ತಿರುವು ಇದೆ ಎಂದು ತಿಳಿಯಲಾಗದ, ಅವಘಡವೇನಾದರೂ ಸಂಭವಿಸಿದರೆ ನೇರವಾಗಿ ಪ್ರಪಾತದ ಪಾಲಾಗುವ ಭಯವನ್ನು ಹೊಂದಿದ ಭೀಕರ ತಿರುವುಗಳನ್ನು ಹೊಂದಿದ ವಕ...

ಶೋಭಾ, ನಿನ್ನ ಎಲ್ಲಾ ಕಾಗದಗಳೂ ತಲುಪಿವೆ. ಓದುತ್ತಲೂ ಇದ್ದೇನೆ. ‘ತಂಪೆರೆಯುವ ನಿನ್ನ ಕಾಗದಗಳನ್ನು ದಿನಾ ಎದುರು ನೋಡುತ್ತಿರುತ್ತೇನೆ. ಅಬ್ಬಾ! ಎಷ್ಟು ಪ್ರಶ್ನೆಗಳನ್ನು ಕೇಳಿದ್ದೀಯಾ? ಬರೆಯುವ ಶಕ್ತಿ ಬರಲೀಂತ ಕಾಯ್ತಾ ಇದ್ದೆ. ಮಾನಸಿಕ ವಿಪ್ಲವದಲ್ಲಿ ಮನಸ್ಸು, ದೇಹ ಎಲ್ಲವೂ ಕೊರಡಿನಂತಾ...