ಪ್ರತಿಮೆಯಾದರು

ಯಾರಿಗೂ ಕೇಳಿಲ್ಲ
ಹೇಳಿಲ್ಲ
ನಿಂತ ನಿಲುವಲಿ
ಎಲ್ಲರಿಗೂ ಕಾಣುವಂತೇ…
ವಿಧಾನಸೌಧದಾ ಎದುರಲ್ಲೇ…
ಪ್ರತಿಮೆಯಾದರು…
ಈ ನಮ್ಮ ಅಂಬೇಡ್ಕರ್‍.


ಪ್ರತಿಮೆಗೂ ಮಿಗಿಲು
ಮುಗಿಲು, ಹಗಲು-
ವಿಸ್ಮಯ ಪ್ರತಿಭೆ ಅವರದು!
ಮಲ್ಲಿಗೆ ಮನಸನು, ವಿಶಾಲ ಹೃದಯವನು…
ಕಲ್ಲು ಮಾಡಿ,
ಕೇರಿಗೆ ಸೀಮಿತ ಮಾಡಿ,
ಪ್ರತಿಮೆ ನಿಲ್ಲಿಸಿದವರು ನಾವು!!


ಸ್ವಾರ್ಥಕೆ ನಿತ್ಯ ಎಳೆ ಎಳೆ ತಂದೂ…
ಸುಮ್ಮ ಸುಮ್ಮನೆ ಹಿಗ್ಗಿಸಲೋಗಿ,
ತನ್ನ ಜನ, ತನಗೇ ಮಾನ, ಹರಾಜಾಕಿದ್ದು,
ಕೈ, ಕೈ, ಕಾಲು, ಕಾಲು, ಕನ್ನಡ್ಕ ತೆಗೆವರೆಂದೂ…
ಈ ಮೊದಲು ತಿಳಿದಿದ್ದರೆ,
ಪ್ರತಿಮೆಯಾಗುವದಾ ಬಿಟ್ಟು,
ಸ್ವರ್ಗ ಸೇರುತ್ತಿದ್ದರು…?!


ಸೂರ್‍ಯ ಕೋಟಿನ
ಬೆಳೆಕ್ಹೆಂಚು ಮಾಡಿ,
ಬಲು ಸಣ್ಣರಾದವರು
ಮೆಚ್ಚಿಸಲ್ಹೋಗಿದ್ದ ಕಂಡು-
ಹೌಹಾರಿ ನಿಂತಲ್ಲೇ…
ವಿಧಾನಸೌಧದ ಎದುರಲ್ಲೇ…
ಪ್ರತಿಮೆಯಾದರು…
ಈ ನಮ್ಮ ಅಂಬೇಡ್ಕರ್‍.


ಜಗದಗಲ
ಮುಗಿಲಗಲವನು!
ಬರೀ ಕೇರಿಗೇ…
ಸೀಮಿತಗೊಳಿಸಿದ್ದಕ್ಕೆ
ಮಮ್ಮಲ ಮರುಗಿ,
ಕೊರಗಿ,
ನಿಂತಲ್ಲೇ…
ವಿಧಾನಸೌಧದಾ ಮುಂದೆ:
ಪ್ರತಿಮೆಯಾದರು…
ಈ ನಮ್ಮ ಅಂಬೇಡ್ಕರ್‍.


ಪೂರ್ಣ ಮುಖಿ
ಚಂದ್ರವದನನ-
ಈ ಪುಟ್ಟ ಕನ್ನಡಿಯೊಳಗೆ,
ತೋರಿದ್ದ ಕಂಡು:
ಕೆಂಡಮಂಡಲವಾಗಿ
ನಿಂತಲ್ಲೇ…
ವಿಧಾನಸೌಧದ ಎದುರಲ್ಲೇ…
ಪ್ರತಿಮೆಯಾದರು…
ಈ ನಮ್ಮ ಅಂಬೇಡ್ಕರ್‍.


ನಮ್ಮವರು: ಮೇಲಿನವರ ಅಂಜಿಸಲು…
ಹೇಗೆಗೋ ಬಿಂಬಿಸಲ್ಹೋಗಿ…
ಸ್ವಯಂ ಪ್ರಭೆ ಅರಿದೆ,
ಬಿಂಬವ ಪ್ರತಿಬಿಂಬವಾಗಿಸಿದ್ದು ಕಂಡೂ
ಮೌನದಲಿ,
ಪ್ರತಿಮೆಯಾದರು…
ವಿಧಾನಸೌದದ ಎದುರಲ್ಲೇ…
ಈ ನಮ್ಮ ಅಂಬೇಡ್ಕರ್‍.


ಪ್ರತಿ ಹೆಜ್ಜೆ ಹೆಜ್ಜೆಗೂ…
ವಾದ, ಪ್ರತಿವಾದಕೂ…
ಈ ನಮ್ಮ ಅಂಬೇಡ್ಕರ್‍ ಬೇಕು!
ಭಾರತದ ಸಂವಿಧಾನ ಬೇಕೇ ಬೇಕು!
ಬದುಕಿದ್ದಾಗ: ಸವರ್ಣೀಯರ ಕಾಟ…
ಮೀಸಲಾತಿಯ ಪರದಾಟ…
ಬೇಸತ್ತು, ಬೌದ್ಧ ಧರ್ಮ ಸ್ವೀಕಾರ!!
ಸತ್ತಾಗ: ಈಗ ತನ್ನವರ ಕಾದಾಟ!
ಹೊಲೆ, ಮಾದಿಗನೆಂಬ ಜಗ್ಗಾಟ…
ಸಹಿಸಲಾಗದೆ… ಪ್ರತಿಮೆಯಾದರು!!
ಈಗ ಒಡೆಬಾರದಶ್ಟೇ…
ಪ್ರತಿಮೆಯನು…
ಪ್ರತಿಭೆಯನು…
ಭಾಜನು,
ಭುವಿ,
ಬೆಳಕನ್ನುಽಽ…
ಅಶ್ಟೇ…ಽಽ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಫಲ
Next post ನಮ್ಮೂರ ಹೋಳಿ ಹಾಡು – ೭

ಸಣ್ಣ ಕತೆ

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

  • ನಿಂಗನ ನಂಬಿಗೆ

    ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…

  • ಕರಿ ನಾಗರಗಳು

    ಚಿತ್ರ: ಆಂಬರ್‍ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್‌ ನೀರು ಹರಿಯುತ್ತಿದ್ದ… Read more…

cheap jordans|wholesale air max|wholesale jordans|wholesale jewelry|wholesale jerseys