Home / ಕವನ / ಕವಿತೆ / ಪ್ರತಿಮೆಯಾದರು

ಪ್ರತಿಮೆಯಾದರು

ಯಾರಿಗೂ ಕೇಳಿಲ್ಲ
ಹೇಳಿಲ್ಲ
ನಿಂತ ನಿಲುವಲಿ
ಎಲ್ಲರಿಗೂ ಕಾಣುವಂತೇ…
ವಿಧಾನಸೌಧದಾ ಎದುರಲ್ಲೇ…
ಪ್ರತಿಮೆಯಾದರು…
ಈ ನಮ್ಮ ಅಂಬೇಡ್ಕರ್‍.


ಪ್ರತಿಮೆಗೂ ಮಿಗಿಲು
ಮುಗಿಲು, ಹಗಲು-
ವಿಸ್ಮಯ ಪ್ರತಿಭೆ ಅವರದು!
ಮಲ್ಲಿಗೆ ಮನಸನು, ವಿಶಾಲ ಹೃದಯವನು…
ಕಲ್ಲು ಮಾಡಿ,
ಕೇರಿಗೆ ಸೀಮಿತ ಮಾಡಿ,
ಪ್ರತಿಮೆ ನಿಲ್ಲಿಸಿದವರು ನಾವು!!


ಸ್ವಾರ್ಥಕೆ ನಿತ್ಯ ಎಳೆ ಎಳೆ ತಂದೂ…
ಸುಮ್ಮ ಸುಮ್ಮನೆ ಹಿಗ್ಗಿಸಲೋಗಿ,
ತನ್ನ ಜನ, ತನಗೇ ಮಾನ, ಹರಾಜಾಕಿದ್ದು,
ಕೈ, ಕೈ, ಕಾಲು, ಕಾಲು, ಕನ್ನಡ್ಕ ತೆಗೆವರೆಂದೂ…
ಈ ಮೊದಲು ತಿಳಿದಿದ್ದರೆ,
ಪ್ರತಿಮೆಯಾಗುವದಾ ಬಿಟ್ಟು,
ಸ್ವರ್ಗ ಸೇರುತ್ತಿದ್ದರು…?!


ಸೂರ್‍ಯ ಕೋಟಿನ
ಬೆಳೆಕ್ಹೆಂಚು ಮಾಡಿ,
ಬಲು ಸಣ್ಣರಾದವರು
ಮೆಚ್ಚಿಸಲ್ಹೋಗಿದ್ದ ಕಂಡು-
ಹೌಹಾರಿ ನಿಂತಲ್ಲೇ…
ವಿಧಾನಸೌಧದ ಎದುರಲ್ಲೇ…
ಪ್ರತಿಮೆಯಾದರು…
ಈ ನಮ್ಮ ಅಂಬೇಡ್ಕರ್‍.


ಜಗದಗಲ
ಮುಗಿಲಗಲವನು!
ಬರೀ ಕೇರಿಗೇ…
ಸೀಮಿತಗೊಳಿಸಿದ್ದಕ್ಕೆ
ಮಮ್ಮಲ ಮರುಗಿ,
ಕೊರಗಿ,
ನಿಂತಲ್ಲೇ…
ವಿಧಾನಸೌಧದಾ ಮುಂದೆ:
ಪ್ರತಿಮೆಯಾದರು…
ಈ ನಮ್ಮ ಅಂಬೇಡ್ಕರ್‍.


ಪೂರ್ಣ ಮುಖಿ
ಚಂದ್ರವದನನ-
ಈ ಪುಟ್ಟ ಕನ್ನಡಿಯೊಳಗೆ,
ತೋರಿದ್ದ ಕಂಡು:
ಕೆಂಡಮಂಡಲವಾಗಿ
ನಿಂತಲ್ಲೇ…
ವಿಧಾನಸೌಧದ ಎದುರಲ್ಲೇ…
ಪ್ರತಿಮೆಯಾದರು…
ಈ ನಮ್ಮ ಅಂಬೇಡ್ಕರ್‍.


ನಮ್ಮವರು: ಮೇಲಿನವರ ಅಂಜಿಸಲು…
ಹೇಗೆಗೋ ಬಿಂಬಿಸಲ್ಹೋಗಿ…
ಸ್ವಯಂ ಪ್ರಭೆ ಅರಿದೆ,
ಬಿಂಬವ ಪ್ರತಿಬಿಂಬವಾಗಿಸಿದ್ದು ಕಂಡೂ
ಮೌನದಲಿ,
ಪ್ರತಿಮೆಯಾದರು…
ವಿಧಾನಸೌದದ ಎದುರಲ್ಲೇ…
ಈ ನಮ್ಮ ಅಂಬೇಡ್ಕರ್‍.


ಪ್ರತಿ ಹೆಜ್ಜೆ ಹೆಜ್ಜೆಗೂ…
ವಾದ, ಪ್ರತಿವಾದಕೂ…
ಈ ನಮ್ಮ ಅಂಬೇಡ್ಕರ್‍ ಬೇಕು!
ಭಾರತದ ಸಂವಿಧಾನ ಬೇಕೇ ಬೇಕು!
ಬದುಕಿದ್ದಾಗ: ಸವರ್ಣೀಯರ ಕಾಟ…
ಮೀಸಲಾತಿಯ ಪರದಾಟ…
ಬೇಸತ್ತು, ಬೌದ್ಧ ಧರ್ಮ ಸ್ವೀಕಾರ!!
ಸತ್ತಾಗ: ಈಗ ತನ್ನವರ ಕಾದಾಟ!
ಹೊಲೆ, ಮಾದಿಗನೆಂಬ ಜಗ್ಗಾಟ…
ಸಹಿಸಲಾಗದೆ… ಪ್ರತಿಮೆಯಾದರು!!
ಈಗ ಒಡೆಬಾರದಶ್ಟೇ…
ಪ್ರತಿಮೆಯನು…
ಪ್ರತಿಭೆಯನು…
ಭಾಜನು,
ಭುವಿ,
ಬೆಳಕನ್ನುಽಽ…
ಅಶ್ಟೇ…ಽಽ
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...