Home / ಕವನ / ಕವಿತೆ / ಮತ್ತೇ ಯುಗಾದಿ ಬಂದಿದೆ…

ಮತ್ತೇ ಯುಗಾದಿ ಬಂದಿದೆ…

ಯುಗ ಯುಗಾದಿ ಬಂದಿದೆ…, ಬೆಲೆ ಏರಿಕೆ ತಂದಿದೆ
ಬಡವನ ಮಾಡಿಗೆ, ಇಲ್ಲಣಗಳ ತೋರಣ ಕಟ್ಟಿದೆ.
ಮಾವು ಇಲ್ಲ, ಬೇವು ಇಲ್ಲ, ಪ್ರಕೃತಿ ಕೂಡಾ ಮುನಿದಿದೆ!
ಮತ್ತೆ ಮತ್ತೆ ಯುಗಾದಿ ಬಂದಿದೆ, ಹೊಸ ತಗಾದಿ ತಂದಿದೆ.


ಒಲೆ ಮೇಲಿನ, ಹೊಸತು ಮಡಿಕೆ, ಕುದಿವ ಕಾಲದಿ
ಮೂಗರಳಿಸಿ, ಬಾಯಿ ಚಪ್ಪರಿಸಿ, ಜೊಲ್ಲು ಸುರಿಸಿದ ಯುಗಾದಿ
ಬೇಳೆ, ಬೆಲ್ಲ, ಶುಂಠಿ, ಏಲಕ್ಕಿ, ಮಾವು, ಬೇವು, ವಾಸನೆ ಘಮ್ಮನೇ…
ಮನೆ ಮನೆಗೂ, ಊರುಕೇರಿಗೂ ವಾಸನೆ! ಈಗ ಬರೀ ಸುಮ್ಮನೆ!!


ರುಬ್ಬಾ ಗುಂಡಿಲಿ, ಹೂರಣ ರುಬ್ಬುವಾ, ಮನವೆ ಬೇರೆ, ಯುಗಾದಿ
ಮಿಕ್ಸಿ, ಯಂತ್ರ ಗುಂಡಿಲಿ, ಕ್ಷಣದಿ ಹೂರಣ, ಈಗಿನ ಯುಗಾದಿ!
ಸದ್ದು ಗದ್ದಲಿಲ್ಲ! ಬರೀ ತೋರಣಿಕೆಯ, ಯುಗಾದಿ…
ಯಂತ್ರ ಮಾನವ, ಹಳೆ ನೆನಪೀಗ, ಉಂಡ ತೃಪ್ತಿಯ ಯುಗಾದಿ!


ಯುಗ ಯುಗಾದಿ, ಮರು ಯುಗಾದಿ ಬಂದಿದೇ…
ಕೃತಕ ತೋರಣದಿ, ತಳಿರು ವಾಸನೆ ಎಲ್ಲಿದೆ??
ಐಟಿ, ಬಿಟಿ, ಸೈಬರ್‍, ಫಾರಿನ್ ಮೆಶೀನಲಿ, ಯುಗಾದಿ ಸೊರಗಿದೆ!
ಏನಿತು ಯುಗಾದಿ ವಾಸನೆ, ಹೃದಯ ಶ್ರೀಮಂತಿಕೆ ಕಾಣೆನು!


ಹರಿದಾ ಜೇಬಲೀ, ಹಸಿರು, ಕನಕಾಂಬರ… ನೋಟಿನ, ಯುಗಾದಿ
ವಿಸ್ಕಿ, ರಮ್ಮು, ಕಾಫಿಡೇಗೆ, ಬೇವು ಬೆಲ್ಲ ಎಲ್ಲಿದೆ??
ಹೊಸತು ಬಟ್ಟೆ, ಕುಡಿಕೆ, ಮಡಿಕೆ, ಜಗವೇ ಮರೆತು ಮಲಗಿದೆ!
ಮೊಬೈಲು, ಎಸ್ಸೆಮ್ಮೆಸ್ಸು, ಸಿರಿಯಲ್ಲು, ಪೋಕಿಮ್ಯಾನ್‌ಗೆ ಸೋತಿದೆ!!


ಹಬ್ಬವಿಲ್ಲ! ಬಂಧುವಿಲ್ಲ! ಬರೀ ಬೂಟಾಟಿಕೆ
ಅಪ್ಪ, ಅಮ್ಮ, ಕಾಲಕಸವು! ಪ್ರೀತಿ, ಪ್ರೇಮ, ನಿತ್ಯಸರಕು!
ಹಣವೇ ತಂದೆ, ತಾಯಿ! ಉಗಾದಿ ಭ್ರಮೆಯು,
ಪದವಿ, ಪ್ರತಿಷ್ಠೆ, ಜಾತಿ, ಮತ, ಧರ್‍ಮಗಳೆ ಯುಗಾದಿಯು!
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...