Home / ಕವನ / ಕವಿತೆ / ಬದುಕೆಂದರೆ…

ಬದುಕೆಂದರೆ…

ಬದುಕೆಂದರೆ… ಹೀಗೇ…
ಬಳ್ಳಾರಿ ಬಿಸಿಲಿನಾ ಹಾಗೇ…
‘ಉಸ್ಸೆಪ್ಪಾ’,,, ಎಂದರೂ,
ಮುಗ್ಳಾಗ ‘ಜಟ ಜಟ’ ಇಳಿದರೂ ಬಿಡದು!
ಝಣ ಝಣ… ಹಲಗೆ ಬಡಿತದ,
ಬಿಸಿಲಿನ, ಬಿಸಿ ಬಿಸಿ ಹವೆಯ ಸಂಪು!
ಮೈಮನ ಹಾವಿನಂಗೆ,
ಮುಲು ಮುಲು ಹರಿದಾಡುವ, ಬೇವ ಹನಿಯ ಕಂಪು!
ನೆಲಕೆ ಕಾಲಿಟ್ಟರೆ, ಕಮ್ಮಾರನ ತಿದಿಪಂಪು!
*

ಬದುಕೆಂದರೆ… ಹೀಗೇ
ಮುಂಗಾರಿನ ಮಳೆಯ ಹಾಗೇ…
ತೊಯ್ದು ತೊಪ್ಪೆಯೆಂದರೂ…
ಗಢ ಗಢ ಛಳಿಯೆಂದರೂ… ಬಿಡದು!
ಬಿರುಗಾಳಿ, ಗುಡುಗು, ಸಿಡಿಲು, ಮಿಂಚಿನಂತೇ…
ಜುಳು ಜುಳು ಹರಿವ ಸಿಟ್ಟೇರ ಹಳ್ಳದಂತೆ!
ಕರ್‍ಮಾಗಳ ಮುಳುಗಿಸಿ, ಧರ್‍ಮಾಗಳ ತೇಲಿಸೋ…
ನಮ್ಮೂರ ‘ಹುಚ್ಚಾಯಿ’, ತೇರನೆಳೆವ ಹರಕೆಯಂತೆ!!
ಬತ್ತಿ ಹೋದ ಕೆರೆ, ಬಾವಿ, ಹಗರಿಯಂತೆ.
*

ಬದುಕೆಂದರೆ… ಹೀಗೇ
ಚಿಕ್ಕ ಮಕ್ಕಳ ಮದುವೆಯಾಟದಂತೇ…
ನಮ್ಮೂರ, ಸಂತೆ ಮೈದಾನದ ವಹಿವಾಟಿನಂತೆ,
ಬೋರೇಗೌಡ, ಬೆಂಗಳೂರಿಗೆ ಬಂದ, ‘ಪಡಿಪಾಟ್ಲಿ’ನಂತೆ!
ಬಾಳೆಲೆ ಹಾಸುಂಡು, ಬೀಸಿ ಒಗೆದಂತೆ,
ಊರ ದನ ಕಾದು, ಊರಗೌಡ ಎನಿಸಿಕೊಂಡಂತೆ,
ನೀರ ಮೇಲಣ ಗುಳ್ಳೆಯಂತೆ!
*

ಬದುಕೆಂದರೆ… ಹೀಗೇ
ಬಡವರೂ ಬಡವರಾಗಿಯೇ ಇರುವುದು!
ಶ್ರೀಮಂತರೂ… ಇನ್ನೂ ‘ಮಜ್ಹಾ’ ಅನುಭವಿಸುವುದು!
ಕೋತಿ ತಿಂದರೂ… ‘ಮೇಕೆ’ ಪೆಟ್ಟು ತಿನ್ನುವಂತೆ,
ಚಾಡಿ ಮಾತಿಗೆ, ಕೋಡು ಮೂಡಿದಂತೆ,
ಸತ್ಯವಂತರೂ ಜೈಲು ಅನುಭವಿಸುವಂತೆ.
*

ಬದುಕೆಂದರೆ… ವಿಷ ವರ್ತುಲ! ಭಯಂಕರ! ‘ಕಟುಗಲರಟ್ಟಿ…’
ಪಾಂಡವರ… ಕೌರವರ… ಜೂಜಾಟದಂತೆ,
ಕಾಡುಕೋಣಗಳ ಗುದ್ದಾಟದಂತೆ!
ಶಕುನಿ, ದುರ್‍ಯೋಧನ, ಕೃಷ್ಣನ ಕುಟಿಲ ತಂತ್ರದಂತೆ,
ನಿತ್ಯ ಸ್ವಯಂವರವಿಲ್ಲಿ, ಟಗರಿನ ಕಾಳಗಿವಿಲ್ಲಿ…
ಅರಗಿನ ಮನೆಯ ವಾಸವಿಲ್ಲಿ, ಬೆನ್ನಿಗೆ ಚೂರಿ ಈರಿತವಿಲ್ಲಿ…
ವಸ್ತ್ರಾಪಹರಣ… ಕೀಚಕನ ಅಟ್ಟಹಾಸವಿಲ್ಲಿ!
ಆಗಿನ ನಿಯತ್ತು, ಈಗಿನವರತ್ತಿರವೆಲ್ಲಿದೆ?!
ಕತ್ತಲಾದರೆ… ಶಸ್ತ್ರವಿಡಿಯುತ್ತಿರಲಿಲ್ಲ! ರಾಜನೀತಿ…
ಈಗ ಕತ್ತಲಾದ ಮೇಲೆ, ಕತ್ತಿ ಇರಿವ ಜನರಿಲ್ಲಿ!
ರಕ್ತ ನೀತಿ…
*

ಬದುಕೆಂದರೆ… ಹೀಗೇ
ಹೀಗೆಂದು ಹೇಳಲು, ಈ ಕಲಿಯುಗದಲಿ,
ಹೇಗೆ ಸಾಧ್ಯವಿಲ್ಲವೋ ಹಾಗೇ…
ನಿತ್ಯ ಚಕ್ರವ್ಯೂಹ, ಕುರುಕ್ಷೇತ್ರವಿಲ್ಲಿ!
ಕೌರವರು, ಪಾಂಡವರೆಂಬಾಗೆರೆಯಿಲ್ಲ!
ಎಲ್ಲರೂ ಮಾಮರಿಲ್ಲಿ… ಮೃತ್ಯುಂಜಯರಿಲ್ಲಿ…
ಮನೆ, ಮನ, ಕಛೇರಿ, ಗುಡಿ, ಚರ್ಚು, ಮಸೀದಿ, ಯೆಲ್ಲ ರಣರಂಗವಿಲ್ಲಿ!
ಬಡವರ ಒಣ ಒಣ ನೆತ್ತರಿಗೆ, ಎಲ್ಲರೂ ಇಲ್ಲಿ ತಿಗಣೆಗಳೇ…!
*

ಬದುಕೆಂದರೆ… ಹೀಗೇ
ಕಾದ ರೊಟ್ಟಿ ಹೆಂಚು! ನಿಗಿ ನಿಗಿ ಉರಿವ ಕಿಚ್ಚು…
ರಾವಣರ ಸಂಚು, ಕೈಕೆ, ಮಂಥರೆ ಸಂಚು…
ಸೀತೆವನವಾಸಕೆ ಅಟ್ಟಿದಾ ಹಾಗೇ…
ಕಲಿಯುಗದಲ್ಲಿ… ರಾಮಾಯಣ, ಮಹಾಭಾರತ ಒಟ್ಟೊಟ್ಟಿಗೆ!
ತಣ್ಣೀರು ಆರಿಸಿ, ಕುಡಿವ ಕಾಲ!
ಬದುಕೆಂದರೆ… ಬಲು ಭಾರ! ಖಾರ!
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...