Home / ಕವನ / ಕವಿತೆ / ಬದುಕೆಂದರೆ…

ಬದುಕೆಂದರೆ…

ಬದುಕೆಂದರೆ… ಹೀಗೇ…
ಬಳ್ಳಾರಿ ಬಿಸಿಲಿನಾ ಹಾಗೇ…
‘ಉಸ್ಸೆಪ್ಪಾ’,,, ಎಂದರೂ,
ಮುಗ್ಳಾಗ ‘ಜಟ ಜಟ’ ಇಳಿದರೂ ಬಿಡದು!
ಝಣ ಝಣ… ಹಲಗೆ ಬಡಿತದ,
ಬಿಸಿಲಿನ, ಬಿಸಿ ಬಿಸಿ ಹವೆಯ ಸಂಪು!
ಮೈಮನ ಹಾವಿನಂಗೆ,
ಮುಲು ಮುಲು ಹರಿದಾಡುವ, ಬೇವ ಹನಿಯ ಕಂಪು!
ನೆಲಕೆ ಕಾಲಿಟ್ಟರೆ, ಕಮ್ಮಾರನ ತಿದಿಪಂಪು!
*

ಬದುಕೆಂದರೆ… ಹೀಗೇ
ಮುಂಗಾರಿನ ಮಳೆಯ ಹಾಗೇ…
ತೊಯ್ದು ತೊಪ್ಪೆಯೆಂದರೂ…
ಗಢ ಗಢ ಛಳಿಯೆಂದರೂ… ಬಿಡದು!
ಬಿರುಗಾಳಿ, ಗುಡುಗು, ಸಿಡಿಲು, ಮಿಂಚಿನಂತೇ…
ಜುಳು ಜುಳು ಹರಿವ ಸಿಟ್ಟೇರ ಹಳ್ಳದಂತೆ!
ಕರ್‍ಮಾಗಳ ಮುಳುಗಿಸಿ, ಧರ್‍ಮಾಗಳ ತೇಲಿಸೋ…
ನಮ್ಮೂರ ‘ಹುಚ್ಚಾಯಿ’, ತೇರನೆಳೆವ ಹರಕೆಯಂತೆ!!
ಬತ್ತಿ ಹೋದ ಕೆರೆ, ಬಾವಿ, ಹಗರಿಯಂತೆ.
*

ಬದುಕೆಂದರೆ… ಹೀಗೇ
ಚಿಕ್ಕ ಮಕ್ಕಳ ಮದುವೆಯಾಟದಂತೇ…
ನಮ್ಮೂರ, ಸಂತೆ ಮೈದಾನದ ವಹಿವಾಟಿನಂತೆ,
ಬೋರೇಗೌಡ, ಬೆಂಗಳೂರಿಗೆ ಬಂದ, ‘ಪಡಿಪಾಟ್ಲಿ’ನಂತೆ!
ಬಾಳೆಲೆ ಹಾಸುಂಡು, ಬೀಸಿ ಒಗೆದಂತೆ,
ಊರ ದನ ಕಾದು, ಊರಗೌಡ ಎನಿಸಿಕೊಂಡಂತೆ,
ನೀರ ಮೇಲಣ ಗುಳ್ಳೆಯಂತೆ!
*

ಬದುಕೆಂದರೆ… ಹೀಗೇ
ಬಡವರೂ ಬಡವರಾಗಿಯೇ ಇರುವುದು!
ಶ್ರೀಮಂತರೂ… ಇನ್ನೂ ‘ಮಜ್ಹಾ’ ಅನುಭವಿಸುವುದು!
ಕೋತಿ ತಿಂದರೂ… ‘ಮೇಕೆ’ ಪೆಟ್ಟು ತಿನ್ನುವಂತೆ,
ಚಾಡಿ ಮಾತಿಗೆ, ಕೋಡು ಮೂಡಿದಂತೆ,
ಸತ್ಯವಂತರೂ ಜೈಲು ಅನುಭವಿಸುವಂತೆ.
*

ಬದುಕೆಂದರೆ… ವಿಷ ವರ್ತುಲ! ಭಯಂಕರ! ‘ಕಟುಗಲರಟ್ಟಿ…’
ಪಾಂಡವರ… ಕೌರವರ… ಜೂಜಾಟದಂತೆ,
ಕಾಡುಕೋಣಗಳ ಗುದ್ದಾಟದಂತೆ!
ಶಕುನಿ, ದುರ್‍ಯೋಧನ, ಕೃಷ್ಣನ ಕುಟಿಲ ತಂತ್ರದಂತೆ,
ನಿತ್ಯ ಸ್ವಯಂವರವಿಲ್ಲಿ, ಟಗರಿನ ಕಾಳಗಿವಿಲ್ಲಿ…
ಅರಗಿನ ಮನೆಯ ವಾಸವಿಲ್ಲಿ, ಬೆನ್ನಿಗೆ ಚೂರಿ ಈರಿತವಿಲ್ಲಿ…
ವಸ್ತ್ರಾಪಹರಣ… ಕೀಚಕನ ಅಟ್ಟಹಾಸವಿಲ್ಲಿ!
ಆಗಿನ ನಿಯತ್ತು, ಈಗಿನವರತ್ತಿರವೆಲ್ಲಿದೆ?!
ಕತ್ತಲಾದರೆ… ಶಸ್ತ್ರವಿಡಿಯುತ್ತಿರಲಿಲ್ಲ! ರಾಜನೀತಿ…
ಈಗ ಕತ್ತಲಾದ ಮೇಲೆ, ಕತ್ತಿ ಇರಿವ ಜನರಿಲ್ಲಿ!
ರಕ್ತ ನೀತಿ…
*

ಬದುಕೆಂದರೆ… ಹೀಗೇ
ಹೀಗೆಂದು ಹೇಳಲು, ಈ ಕಲಿಯುಗದಲಿ,
ಹೇಗೆ ಸಾಧ್ಯವಿಲ್ಲವೋ ಹಾಗೇ…
ನಿತ್ಯ ಚಕ್ರವ್ಯೂಹ, ಕುರುಕ್ಷೇತ್ರವಿಲ್ಲಿ!
ಕೌರವರು, ಪಾಂಡವರೆಂಬಾಗೆರೆಯಿಲ್ಲ!
ಎಲ್ಲರೂ ಮಾಮರಿಲ್ಲಿ… ಮೃತ್ಯುಂಜಯರಿಲ್ಲಿ…
ಮನೆ, ಮನ, ಕಛೇರಿ, ಗುಡಿ, ಚರ್ಚು, ಮಸೀದಿ, ಯೆಲ್ಲ ರಣರಂಗವಿಲ್ಲಿ!
ಬಡವರ ಒಣ ಒಣ ನೆತ್ತರಿಗೆ, ಎಲ್ಲರೂ ಇಲ್ಲಿ ತಿಗಣೆಗಳೇ…!
*

ಬದುಕೆಂದರೆ… ಹೀಗೇ
ಕಾದ ರೊಟ್ಟಿ ಹೆಂಚು! ನಿಗಿ ನಿಗಿ ಉರಿವ ಕಿಚ್ಚು…
ರಾವಣರ ಸಂಚು, ಕೈಕೆ, ಮಂಥರೆ ಸಂಚು…
ಸೀತೆವನವಾಸಕೆ ಅಟ್ಟಿದಾ ಹಾಗೇ…
ಕಲಿಯುಗದಲ್ಲಿ… ರಾಮಾಯಣ, ಮಹಾಭಾರತ ಒಟ್ಟೊಟ್ಟಿಗೆ!
ತಣ್ಣೀರು ಆರಿಸಿ, ಕುಡಿವ ಕಾಲ!
ಬದುಕೆಂದರೆ… ಬಲು ಭಾರ! ಖಾರ!
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...