ಈಗೋ ಉತ್ತರ…

ಅದೆಶ್ಟು ಬಿರುಸು
ಅಶ್ಟೆ ಹುಲುಸು
ಘಮ ಘಮ ಹಲಸಿನಂತೆ!
ಪುಟ್ಟ ಚಂದ್ರ ಚಕೋರ,
ಧರೆಗಿಳಿದು ಬೆರಗು ಮೂಡಿಸಿದನಲ್ಲ?
ನವ ಮಾಸ ಕಳೆದ,
ನವ ನೀತ ಚೋರ!
ಪುಟ್ಟ ಪೋರಾ!
ತಂದೆಯ ರೂಪ,
ತಾಯಿಯ ಕೋಪ,
ಜಗದಾ ಪರಿತಾಪ ಎಲ್ಲವೂ…
*

ಹಾಲುಗೆನ್ನೆಯ ಹಸುಗೂಸು
ಮುದ್ದು ಮುದ್ದು ಮುಖಾರವಿಂದ
ತೊಂಡೆಣ್ಣೆನ ತುಟಿ, ದಾಳಿಂಬೆ ಹಲ್ಲು
ಗೋಲಿಗಣ್ಣು, ಸೇಬುಗಲ್ಲ, ಹಾಲು ಹಲ್ಲು
ಬೇವಿನ ಎಸಳ ನೋಟ!
ಆಟ, ಪಾಠ, ನೋಟವೆಲ್ಲ ಲವಕುಶರ ಹಠ!
ತೊದಲು ಮಾತು, ಅಂಬೆಗಾಲು
ನವಿಲು ಕುಣಿತ ಸಾಧ್ಯವು!
*

ಹಸಿ ಹಸಿ ಹಾಲ ಶಿಶು, ಪ್ರತಿಮನೆಯ ಶಶಿ!
ಮುಸಿ ಮುಸಿ ಮುಗ್ಧ ಹಸು!
ಹೋರಿಯಂಗೆ ಬೆಳೆದ ಪರಿಯೇ ಬೆರಗು
‘ಮೂರು ವರ್ಷದ ಬುದ್ಧಿ, ನೂರು ವರ್ಷ’
ಸದಾ ಜಿಂಕೆ ಮರಿಯಂಗೇ… ಜಿಗಿತ!
ವರ್ಷ ವರ್ಷ ಸದಾ, ಹರಿದು ಬರುವ ತೇರಿನಂಗೆ…
ಹರ್ಷ ಹರ್ಷವೆನಲು ಸ್ವಲ್ಪವೇ?!
*

ಎದ್ದು ಬಿದ್ದು ಬಾನಂಗಳಕೆ ಪುಟಿದ!
ನವ ವಸಂತಗಳ ದಾಟಿ, ಜಗದ ತೊಟ್ಟಿಲಿಳಿದ
ಕುಡಿ ಮೀಸೆ ಕುವರ, ಚೆಲುವ ಚೆನ್ನಿಗ!
ಬುದ್ಧ, ಬಸವ, ಪಂಪ, ರನ್ನ, ಹಂಸರಂಗೆ…
ಏನೆಲ್ಲ ಕನಸನೇರಿ
ಭಾರತಾಂಬೆಗೆ ಕೀರ್ತಿ ಶಿಖರ ತರುವ!
*

ಜಯಹೋ… ಕನ್ನಡ ಕೀರ್ತಿಕುವರ!
ಶೂರ, ವೀರ, ಧೀರ… ಧೀರಾಽಽ ಮಗಧೀರ…
ನವ ನವೋನ್ಮೇಶ, ಶ್ಯಾಮ ಶ್ರೀರಾಮನವತಾರ!
ದೇಶ, ವಿದೇಶ ಸುತ್ತಿ, ಮೆರೆವ ಧೃವತಾರೆ…
ಹಾಲುಜೇನು, ಒಟ್ಟಿಗೆ ಕರೆವ ಧಾರೆ!
ಜಗದ ಬೆಳಕೋ? ಯುಗದ ಬೆಳಕೋ? ಕಾಣೇ…
ಬೆಳೆ ಬೆಳೆದು ಆಲವಾದ, ಕನಸ್ಸಿನ ಕುವರನೇ…
ಭಾರತದ ಕೀರ್ತಿ ಶಿಖರ, ಭಾನೆತ್ತರ ಬೆಳಗೋ…
ಈ ಜಗವೇ ನಿನ್ನೊಳಗೆ… ಈಗೋ ಉತ್ತರ!!
‘ಮುಂದುಂದಿ ಮುಸಲ ಪಂಡುಗಽ…’ ಎಚ್ಚರ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ದುಡಿತಲೇ ಇರ್‍ತಾಳೆ
Next post ಗುಬ್ಬಿ

ಸಣ್ಣ ಕತೆ

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

  • ಜಡ

    ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ… Read more…

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…