ಕೆಂಪು ಬಸ್ಸು ನಾ…

ನನ್ನ ಬಣ್ಣ ಕೆಂಪು; ಅದಕ್ಕೆಂದೆ ಸಂಪು?
ಸರ್ವರಿಗೆಂದೆ ತಂಪು;
ಒನಪು, ವೈಯಾರ, ಥಳಕು ಬಳಕು ಕೈಕುಲುಕು!
ಹಳ್ಳ ದಿನ್ನಿ ಊರು ಕೇರಿ ಹಾರಿ;
ಹಗಲಿರುಳೂ ಸಾಗಿ,
ಚಳಿ ಮಳೆ ಗಾಳಿಗೆ ಮಾಗಿ,
ನಿತ್ಯ ದುಡಿವೆ ನೋಡಿ.
ಆಸೆ ನಿರಾಸೆ ಸುಖ ದುಃಖಗಳ ಹೊದ್ದು,
ಮದುವೆ ಮುಂಜಿ ಮಸಣಕಂಜಿ
ಶುಭ ಲಾಭ ನಷ್ಟ, ಟೀಕೆ ಟಿಪ್ಪಣಿ ಲೆಕ್ಕಿಸೆ
ನಿಜ ಸೇವೆ ಸ್ವರ್ಗ ಸಮಾನ!
ಬಡವ ಬಲ್ಲಿದ, ಭೇದವಿಲ್ಲದ,
ವಿದ್ಯಾವಂತ ಅವಿದ್ಯಾವಂತ
ಸಣ್ಣ ದೊಡ್ಡವ ಎಣಿಸದೆ,
“ಈಶ ಸೇವೆ, ದೇಶ ಸೇವೆ,
ಸಾರಿಗೆ ಸೇವೆ, ನೈಜ ಸೇವೆಂಬ”
ಮಂತ್ರ ಜಪಿಸುತ್ತಾ…
ನಿತ್ಯ ನಿತ್ಯ ಲಕ್ಷ ಜನರ ಹೊತ್ತು,
ಅವರವರ ಕನಸು, ಮನಸ್ಸಿಗೆ ಸ್ಪಂಧಿಸಿ,
ನಿರೀಕ್ಷೆ ಪರೀಕ್ಷೆಗೆ ತವಕಿಸಿ,
ನನ್ನ ದಾರಿ ನಿಮಗೆ ಶ್ರೀ ರಕ್ಷೆ,
ನನ್ನ ನಂಬಿ, ತಬ್ಬಿ ಹಬ್ಬಿ ಕೊಬ್ಬಿ ಬೆಳೆದವರೆ,
ಗದ್ದುಗೆ ಹಿಡಿದವರೆ,
ಪಟ್ಟಣವ ಕಂಡು,
ಡಿಗ್ರಿಗಳ ಪಡೆದು,
ಏನೆಲ್ಲ ಆದವರಿಗೆ,
ಏಣಿಯಾದವ!
ನನ್ನೆಲ್ಲ ಕಥೆ ವ್ಯಥೆಗೆ ೫೦ರ ಪ್ರಾಯ!
ತಾಯಿ ಭಾರತಿಗೆ ಎರಡನೆ ದೊಡ್ಡಕೂಸು.
ಕನ್ನಡದ ಕಂದ-
ರಾಜ್ಯ ರಾಜ್ಯಕ್ಕೆ ಸಂಚರಿಸಿ, ಕೋಟಿ ಕೋಟಿ… ರೊಕ್ಕ ಒಪ್ಪಿಸಿ,
ಕೀರ್ತಿ ಪತಾಕೆ ಹಾರಿಸಿ…!
ನಿಲ್ದಾಣ, ಡಿಪೋ, ಪಾಸು, ರಿಯಾಯಿತಿ, ಆಶ್ರಯ, ಕಾಮಧೇನು,
ಏನೆಲ್ಲ ಹಿಗ್ಗಿ ಹೀರೆಕಾಯಿ ಆದವ
ಎಳೆಯ ಗೆಳೆಯರ, ಶಾಲೆ ಬಾಲಕರ,
ಸ್ವಾತಂತ್ರ್‍ಯಯೋಧರ, ವೃದ್ಧ
ಆಬಾಲರ ಎತ್ತಿ ಮುದ್ದಾಡಿ,
ಬಲು ಎತ್ತರಕೆ ಬೆಳೆಸಿ,
ಕನಸುಗಳ ಅರಳಿಸಿ
ನಿಮ್ಮ ಬೇಕು, ಬಯಕೆಗಳಿಗೆ ನಿತ್ಯ ಉಸಿರಾಗಿ, ಬಸಿರಾಗಿ,
ಏನೆಲ್ಲ ಹೆಸರಾಗಿ, ಹಸಿರಾಗಿ,
ಕಿಸಿ ಕಿಸಿ ನಕ್ಕು ಕಸಿಯಾದವ
ವರ್ಷ ವರ್ಷಕೂ ಹರ್ಷದಿ ನಿರೀಕ್ಷೆಗಳ ತೂಗು ಸೇತುವೆ ಕಟ್ಟಿ,
ಹೊಳೆ ದಾಟಿಸಿದ ಅಂಬಿಗ
ಹೊಳೆ ದಾಟಿದ ನೀವೆಲ್ಲ.
ಆಕಾಶಕ್ಕೆ ಕೈ ಹಬ್ಬಿ ಬೂಟುಗಾಲಲಿ
ನನ್ನ ಒದ್ದರೂ;
ಒಂದೇ ಮುಗುಳ್ನಗೆಗೆ ಅದೇ ರಾಗ-
“ನಿಮ್ಮ ದೇವರೆಂದು” ‘ಪ್ರಭು’ ‘ಅನ್ನದಾತ’ ‘ಮಾಲೀಕರೆಂದು’
ಅಪ್ಪಿ ಮುದ್ದಿಡುವ, ಒಪ್ಪಿ ಓಡಾಡುವ,
ವಿಲ ವಿಲ ಒದ್ದಾಡುವ,
ಮುಲು ಮುಲು ಮುಲುಗುಟ್ಟುವ,
ಕೆಂಪು ಬಸ್ಸು ನಾ!… ನಿಮ್ಮ ಬಸ್ಸು ನಾ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಲಾವಾರಸದ ಬಿಸಿ
Next post ಗೆಳತಿ

ಸಣ್ಣ ಕತೆ

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…

  • ಜಂಬದ ಕೋಳಿ

    ಪ್ರಕರಣ ೩ ಜನಾರ್ದನ ಪುರದ ಹಳೆಯ ಇನ್ಸ್‍ಪೆಕ್ಟರಿಗೆ ಮೇಷ್ಟರುಗಳೆಲ್ಲ ಬೀಳ್ಕೊಡುವ ಔತಣವನ್ನು ಏರ್ಪಾಟು ಮಾಡಿದ್ದಾರೆ. ಹಳೆಯ ಇನ್‍ಸ್ಪೆಕ್ಟರು ಒಂದು ಸಾಮಾನ್ಯ ಪಂಚೆಯನ್ನು ಉಟ್ಟು ಕೊಂಡು, ಒಂದು ಚೆಕ್ಕು… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…