Home / ಕವನ / ಕವಿತೆ / ಅದೇ ಕವಿತೆ

ಅದೇ ಕವಿತೆ

ಅದೇ ಕವಿತೆ
ಹರಿತ ಕತ್ತಿಯಂತೆ
ಸ್ವಾತಿ ಮುತ್ತಿನಂತೆ
ಚಿತ್ತಿ ಮಳೆಯಂತೆ
ಕರಾವಳಿ ಲಗ್ನದಂತೆ
ಬದಲಾಗದ ವ್ಯವಸ್ಥೆಯಂತೆ.
*

ಅದೇ ಕವಿತೆ,
ಅದೇ ಕಪ್ಪಿಟ್ಟ ಮುಖ
ಬಡಿದಾಡೋ ಕೈ ಕಾಲು,
ಉರಿಯುತ್ತಿರುವ ಕಣ್ಣುಗಳು
ಮುಳುಗಡೆಯಾಗಿರುವ ಊರು ಕೇರಿಗಳು
ಈ ಪ್ರಗತಿ ವಾಕರಿಕೆ ಭರಿಸಿದೆ.
*

ಅದೇ… ಜನ.. ದನ..
ಮನ.. ದವನ!
ದಾವನೆಲ!
ಕೋಮುಗಲಭೆ ಓಣಿ ಓಣಿಗೆ-
ಬರೀ ಕಾಗದದ ಗದ್ದೆ
ಮಾತೂ ಮಾರೂದ್ದ
ಉದ್ಧಾರ ತೂತು ಬಿದ್ದ ಗಡಿಗೆ!
*

ಅದೇ ಬಿಟ್ರಿಷರ ಕಾರುಬಾರು
ಹೊಸ ಸೀಸೆಯಲ್ಲಿ, ಹಳೇ ಮದ್ಯದಂತೆ
ಹಳೆ ಗಾಯಕ್ಕೆ ಹೊಸ ಬರೆ
ಹೆಸರು ಬೇರೆ ಬೇರೆ!
ಅದೇ ಕಳೆ ಕಿತ್ತಷ್ಟು, ಸಿಬಿರಿನಷ್ಟು…
ಹಗಲು ಗಂಡರ ವೇದಾಂತ
ರಾತ್ರಿ ಮಿಂಡರ ರಾದ್ಧಾಂತ
ಮಳೆ ಬೆಳೆ ಪುಢಾರಿಯಂತೆ.
*

ಅದೇ ಹಗಲು ರಾತ್ರಿ,
ಬೆದೆ ಬಿದ್ದ ಗೌಡ
ಜೀತಕ್ಕಿರುವ ಹೈದ
ಸೂತಕದಿ ಬಿಚ್ಚದ ಕದಗಳು
ಕೊತ ಕೊತ ಕುದಿವ ಕೊಳೆಗೇರಿಗಳು
ವರಸೆ ಬದಲಿಸಿದ ಮಿಂಡರೀಗ
ಜಾಗತೀಕರಣ, ಖಾಸಗೀಕರಣ
ಉದಾರೀಕರಣದ ತಲೆ ಹಿಡುಕರು!
ಏಡ್ಸ್ ಮಾರಿಗೆ ಶಾಮೀಯಾನವಾದವರು!
ಪ್ರತಿಭೆ, ಮೆರಿಟ್‌ಗೆ, ಏಣಿ ಹಾಕಿ-
ಮೀಸಲಾತಿಗೆ ‘ಕೋ’ ಕೊಟ್ಟ ಬ್ರಹ್ಮಾಚಾರಿಗಳು!
*

ಇನ್ನೂ ಬರಲಿಲ್ಲ ಕಪ್ಪು ಸೂರ್‍ಯ…
ಅರಳಲಿಲ್ಲ ಕಪ್ಪು ಗುಲಾಬೀ…
ಅದೇ ಕವಿತೆ, ಹಣತೆಯಂತೇ…
ಬದಲಾಗದ ಜನತೆಯಂತೇ…
ಮೇವು ತಿಂದು ‘ನಮಲುಗರಿವಾ’… ದನಗಳಂತೇ…
ಅಂದು: ಈಸ್ಟ್ ಇಂಡಿಯಾ ಕಂಪನಿ!
ಇಂದು: ಖಾಸಗಿ ಕಂಪನಿಗಳು!
ಈ ದೇಶದ ಕೀಲಿಕೈ… ಹೊರಗಿನವರೇ…
ಕಾದು ನೋಡಿ…
ಆಳಿಸಿಕೊಳ್ಳಲು ಲಾಯಕ್ಕು!
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...